ಡಿ.ಕೆ ಶಿವಕುಮಾರ್ 
ರಾಜ್ಯ

ಡಿಕೆ ಶಿವಕುಮಾರ್​ಗೆ ಮತ್ತೆ ಇಡಿ ಸಮನ್ಸ್: ಅಧಿವೇಶನದ ವೇಳೆ ಸಮನ್ಸ್ ಜಾರಿ ರಾಜಕೀಯ ಸಂಚು ಎಂದ ಕೆಪಿಸಿಸಿ ಅಧ್ಯಕ್ಷ

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ ಗುರುವಾರ ಮತ್ತೆ ಸಮನ್ಸ್ ಜಾರಿ ಮಾಡಿದೆ.

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ ಗುರುವಾರ ಮತ್ತೆ ಸಮನ್ಸ್ ಜಾರಿ ಮಾಡಿದೆ.

ಇನ್ನು ಇಡಿ ಕ್ರಮದ ಬಗ್ಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್ ಅವರು, ಪ್ರಸ್ತುತ ರಾಜ್ಯದಲ್ಲಿ ರಾಹುಲ್ ಗಾಂಧಿಯವರ 'ಭಾರತ್ ಜೋಡೋ ಯಾತ್ರೆ' ಆಗಮನದ ಸಿದ್ಧತೆಯಲ್ಲಿ ನಿರತರಾಗಿದ್ದೇವೆ ಮತ್ತು ಅಧಿವೇಶನ ನಡುವೆಯು ಸಮದಲ್ಲಿ ಸಮನ್ಸ್ ನೀಡಿದ್ದಾರೆ. ನಾನು ತನಿಖೆಗೆ ಸಹಕರಿಸಲು ಸಿದ್ಧನಿದ್ದೇನೆ. ಆದರೆ ಈ ಸಮಯದಲ್ಲಿ ಸಮನ್ಸ್ ನೀಡಿರುವುದು ರಾಜಕೀಯ ಸಂಚು ಎಂದು ಆರೋಪಿಸಿದ್ದಾರೆ.

"ಭಾರತ್ ಜೋಡೋ ಯಾತ್ರೆ ಮತ್ತು ವಿಧಾನಸಭೆ ಅಧಿವೇಶನದ ಮಧ್ಯೆ ಅವರು ಮತ್ತೆ ನನಗೆ ಇಡಿ ಮುಂದೆ ವಿಚಾರಣೆಗೆ ಹಾಜರಾಗಲು ಸಮನ್ಸ್ ನೀಡಿದ್ದಾರೆ. ನಾನು ತನಿಖೆಗೆ ಸಹಕರಿಸಲು ಸಿದ್ಧನಿದ್ದೇನೆ, ಆದರೆ ಈ ಸಮನ್ಸ್‌ ನೀಡಿರುವ ಸಮಯ ಹಾಗೂ ಮೇಲಿಂದ ಮೇಲೆ ನೀಡುತ್ತಿರುವ ಕಿರುಕುಳದಿಂದಾಗಿ ನನ್ನ ಸಾಂವಿಧಾನಿಕ ಮತ್ತು ರಾಜಕೀಯ ಕರ್ತವ್ಯಗಳನ್ನು ನಿರ್ವಹಿಸಲು ತೊಂದರೆಯಾಗುತ್ತಿದೆ ಎಂದು ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ಇಡಿ ದಾಖಲಿಸಿದ 2018 ರ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಕೋರ್ಟ್ ಡಿಕೆ ಶಿವಕುಮಾರ್ ಮತ್ತು ಇತರ ಆರೋಪಿಗಳಿಗೆ ಕಳೆದ ಆಗಸ್ಟ್ ನಲ್ಲಿ ಜಾಮೀನು ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT