ಆರ್ ಅಶೋಕ್ 
ರಾಜ್ಯ

ಬೆಂಗಳೂರು ಮಳೆ ಅನಾಹುತಕ್ಕೆ ಯಾರು ಕಾರಣ ಎಂದು ದಾಖಲೆ ಸಮೇತ ತೋರಿಸುತ್ತೇನೆ: ಆರ್ ಅಶೋಕ್

ಕಂದಾಯ ಸಚಿವನಾಗಿ, ವಿಪತ್ತು ನಿರ್ವಹಣೆಯ ಮುಖ್ಯಸ್ಥನಾಗಿ ಇಂದು ಅಥವಾ ನಾಳೆ ವಿಧಾನಸಭೆಯಲ್ಲಿ ಬೆಂಗಳೂರಿನ ಮಳೆ ಅನಾಹುತ ವಿಚಾರ ಕುರಿತು ಪ್ರತಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯೆ ನೀಡುತ್ತೇನೆ, ಆ ಸಂದರ್ಭದಲ್ಲಿ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.

ಬೆಂಗಳೂರು: ಕಂದಾಯ ಸಚಿವನಾಗಿ, ವಿಪತ್ತು ನಿರ್ವಹಣೆಯ ಮುಖ್ಯಸ್ಥನಾಗಿ ಇಂದು ಅಥವಾ ನಾಳೆ ವಿಧಾನಸಭೆಯಲ್ಲಿ ಬೆಂಗಳೂರಿನ ಮಳೆ ಅನಾಹುತ ವಿಚಾರ ಕುರಿತು ಪ್ರತಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯೆ ನೀಡುತ್ತೇನೆ, ಆ ಸಂದರ್ಭದಲ್ಲಿ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಅದರಲ್ಲೂ ವಿಶೇಷವಾಗಿ ಬೆಂಗಳೂರಿನಲ್ಲಿ ಭಾರೀ ಮಳೆಯಾದಾಗ ಪ್ರವಾಹ ಉಂಟಾಗುವ ಬಗ್ಗೆ ಅದಕ್ಕೆ ಮೂಲ ಕಾರಣರು ಯಾರು ಎಂದು ತೋರಿಸುತ್ತೇನೆ ಎಂದರು. 

ಬೆಂಗಳೂರು ಪ್ರವಾಹಕ್ಕೆ ಮೂಲ ಕಾರಣವೇನು, ಸರಿಯಾದ ತೀರ್ಮಾನ ತೆಗೆದುಕೊಳ್ಳದೆ ಅಕ್ರಮ ಮಾಡಿದ್ದರಿಂದ, ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಕೆರೆಗಳನ್ನು, ರಾಜಕಾಲುವೆಗಳನ್ನು ಮುಚ್ಚಿದ್ದರಿಂದ ಇವತ್ತು ಬೆಂಗಳೂರಿನಲ್ಲಿ ಈ ಪರಿಸ್ಥಿತಿ ಉಂಟಾಗಿದೆ. ಅದಕ್ಕೆ ಯಾವ ಯಾವ ಕಾಲದಲ್ಲಿ ಯಾವ ಸರ್ಕಾರ, ಯಾವ ಮಂತ್ರಿಗಳು, ಮುಖ್ಯಮಂತ್ರಿಗಳು ಅನುಮೋದನೆ ಕೊಟ್ಟಿದ್ದಾರೆ ಅವೆಲ್ಲಾ ದಾಖಲೆಗಳು ನನ್ನ ಬಳಿ ಇವೆ. ಅದನ್ನು ಬಿಡುಗಡೆ ಮಾಡಿ ಸತ್ಯಾಸತ್ಯತೆಯನ್ನು ಜನತೆಯ ಮುಂದಿಡುತ್ತೇನೆ ಎಂದು ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದ್ದಾರೆ.

ಸ್ಪೀಕರ್ ಜೊತೆ ಮಾತನಾಡಿ ಸಮಯ ಸಿಕ್ಕಾಗ ವಿಧಾನಸಭೆಯಲ್ಲಿ ಉತ್ತರ ಕೊಡುತ್ತೇನೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT