ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಮೀಸಲಾತಿ ಶೇ. 50 ಮಿತಿಗೊಳಿಸಲು ಬಿಬಿಎಂಪಿ(ತಿದ್ದುಪಡಿ) ವಿಧೇಯಕ 2022 ಅನ್ನು ಗುರುವಾರ ವಿಧಾನಸಭೆಯಲ್ಲಿ ಮಂಡಿಸಲಾಯಿತು. ಈ ವಿಧೇಯಕಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ರಾಜ್ಯ ಸರ್ಕಾರ ಕೆಲ ತಿಂಗಳ ಹಿಂದೆ ಸುಗ್ರೀವಾಜ್ಞೆ ಸಹ ಹೊರಡಿಸಿತ್ತು.
ಇದನ್ನು ಓದಿ: ಬಿಬಿಎಂಪಿಯ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಬಗ್ಗೆ ಹಲವು ಅನುಮಾನ; ಕಣ್ಣೊರೆಸುವ ತಂತ್ರ ಎನ್ನುತ್ತಿರುವ ನಾಗರಿಕರು
ಮಸೂದೆ ಪ್ರಕಾರ, ಬಿಬಿಎಂಪಿ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್ ನಿರ್ದೇಶನದಂತೆ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಒದಗಿಸಿರುವಂತೆ ಬಿಬಿಎಂಪಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ಹಿಂದುಳಿದ ವರ್ಗ ಮತ್ತು ಮಹಿಳೆಯರಿಗೆ ಮೀಸಲಾತಿ ಶೇ.50 ರಷ್ಟು ಮಿತಿಗೊಳಿಸಲು ಈ ವಿಧೇಯಕ ಅವಕಾಶ ಕಲ್ಪಿಸಲಿದೆ.
ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ಕಾನೂನು ಸಚಿವ ಮಾಧುಸ್ವಾಮಿ ಅವರು ವಿಧಾನಸಭೆಯಲ್ಲಿ ವಿಧೇಯಕವನ್ನು ಮಂಡಿಸಿದರು. ಸುಪ್ರೀಂ ಕೋರ್ಟ್ ಬಿಬಿಎಂಪಿ ಚುನಾವಣೆ ನಡೆಸಲು ಸೂಚನೆ ನೀಡಿದ್ದು, ಶೇ.50ರ ಮೀಸಲಾತಿ ಮಿತಿಯಲ್ಲೇ ಎಸ್ಸಿ-ಎಸ್ಟಿ, ಹಿಂದುಳಿದ ವರ್ಗ ಮತ್ತು ಮಹಿಳೆಯರಿಗೆ ಮೀಸಲಾತಿ ಕಲ್ಪಿಸಲು ವಿಧೇಯಕಕ್ಕೆ ತಿದ್ದುಪಡಿ ತರಲಾಗಿದೆ ಎಂದು ಹೇಳಿದ್ದಾರೆ.