ವಿಧಾನಪರಿಷತ್ ಸದಸ್ಯ ಎಸ್ ರವಿ 
ರಾಜ್ಯ

ರಾಮನಗರ ಪ್ರವಾಹ ಸಂತ್ರಸ್ತರ ರಕ್ಷಣೆಗೆ ಧಾವಿಸುವಲ್ಲಿ ಸರ್ಕಾರ ವಿಫಲ: ಎಂಎಲ್‌ಸಿ ರವಿ

ರಾಮನಗರದಲ್ಲಿ ಪ್ರವಾಹದಿಂದ ಮನೆ ಕಳೆದುಕೊಂಡು ಸಂತ್ರಸ್ತರಾದವರಿಗೆ ನೆರವು ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ವಿಧಾನಪರಿಷತ್ ಸದಸ್ಯ ಎಸ್. ರವಿ ಆರೋಪಿಸಿದ್ದಾರೆ.

ಬೆಂಗಳೂರು: ರಾಮನಗರದಲ್ಲಿ ಪ್ರವಾಹದಿಂದ ಮನೆ ಕಳೆದುಕೊಂಡು ಸಂತ್ರಸ್ತರಾದವರಿಗೆ ನೆರವು ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ವಿಧಾನಪರಿಷತ್ ಸದಸ್ಯ ಎಸ್. ರವಿ ಆರೋಪಿಸಿದ್ದಾರೆ.

ಅತಿವೃಷ್ಟಿ ಕುರಿತು ವಿಧಾನಪರಿಷತ್ತಿನಲ್ಲಿ ನಡೆದ ಚರ್ಚೆ ವೇಳೆ ಮಾತನಾಡಿದ ರವಿ, ಭಕ್ಷಿ ಕೆರೆ ಹೊಡೆದು ರಾಮನಗರ ಒಂದರಲ್ಲಿಯೇ ಸುಮಾರು 3,000 ಮನೆಗಳು ಜಲಾವೃತ್ತಗೊಂಡಿದ್ದವು. ರಾಮನಗರದ ಹಳೆಯ ಹಾಗೂ ಹೊಸ ಪ್ರದೇಶಗಳ ನಡುವೆ ಸಂಪರ್ಕ ಸಂಪರ್ಕ ಕಡಿತಗೊಂಡಿತ್ತು. ಅನೇಕ ಮನೆಗಳು ಭಾಗಶ: ಹಾನಿಯಾಗಿವೆ. ಭಾರೀ ಮಳೆಯಿಂದಾಗಿ ಸುಮಾರು 250 ಮನೆಗಳು ಕುಸಿತವಾಗಿವೆ ಎಂದು ಅವರು ತಿಳಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದರು. ಆದರೂ, ಇನ್ನೂ ಅನೇಕ ಸಂತ್ರಸ್ತರಿಗೆ ಇನ್ನೂ ಮನೆ ಇಲ್ಲದಂತಾಗಿದೆ. ಅನೇಕ ಮಂದಿ ಪರಿಹಾರ ಪಡೆದಿಲ್ಲ. ಅವರು ಜೀವನವನ್ನು ಮರು ಕಟ್ಟಿಕೊಡುವುದು ಪ್ರಮುಖವಾಗಿದೆ ಎಂದರು.  

ಪ್ರವಾಹ ನಂತರ ಜಿಲ್ಲಾ ಉಸ್ತುವಾರಿ ಸಚಿವರು ಸಭೆ ನಡೆಸಿಲ್ಲ, ಪರಿಹಾರ ನೀಡಲು ಅಧಿಕಾರಿಗಳು ಸಾರ್ವಜನಿಕರ ಬಳಿ ಐಡಿ ಕಾರ್ಡ್ ತೋರಿಸಲು ಕೇಳುತ್ತಿದ್ದಾರೆ. ಜನರು ಮನೆ ಕಳೆದುಕೊಂಡು ಸಂಕಷ್ಟದಲ್ಲಿರುವಾಗ ಆಧಾರ್, ವೋಟರ್ ಐಡಿ ಕಾರ್ಡ್ ತೋರಿಸುವಂತೆ ಕೇಳುವುದು ಅಮಾನವೀಯವಾದದ್ದು, ಸರ್ಕಾರ ಆದಷ್ಟು ಬೇಗ ಜನರಿಗೆ ಪರಿಹಾರ ಒದಗಿಸಬೇಕು ಎಂದು ರವಿ ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಯೋತ್ಪಾದನೆ ಕೊನೆಗೊಳಿಸಿ ನಂತರ ಸಿಂಧೂ ಜಲ ಒಪ್ಪಂದದ ಬಗ್ಗೆ ಮಾತುಕತೆ: ಪಾಕಿಸ್ತಾನಕ್ಕೆ ಭಾರತ ಸ್ಪಷ್ಟ ಸಂದೇಶ

ರಾಮಮಂದಿರಕ್ಕೆ ನಾನು ಕೊಟ್ಟ 1.11 ಲಕ್ಷ ದೇಣಿಗೆ ಹಣ ವಾಪಸ್‌ ಕೊಡಿ, ಇಲ್ಲ ಕೋರ್ಟಿಗೆ ಹೋಗ್ತೀನಿ: ದಿಗ್ವಿಜಯ್ ಸಿಂಗ್

ಭಾರತದಲ್ಲಿ ಇದ್ದಿದ್ದರೆ ಈ ಕೊಳಕು ವ್ಯವಸ್ಥೆಯಲ್ಲಿ ಎಂದಿಗೂ ನಾನು CEO ಆಗುತ್ತಿರಲಿಲ್ಲ: ಇಂದ್ರಾ ನೂಯಿ

ಅಸ್ವಸ್ಥ ಬಾಲಕಿಯನ್ನು ಬೆನ್ನಿಗೆ ಕಟ್ಟಿಕೊಂಡು 6 ಕಿ.ಮೀ ನಡೆದು, ಆಸ್ಪತ್ರೆಗೆ ಸೇರಿಸಿದ ಶಿಕ್ಷಕಿ! Video

ಟೂರಿಸ್ಟ್ ವೀಸಾ ಪುನರಾರಂಭ: ತೀವ್ರ ಬೇಡಿಕೆ, ಬಾಂಗ್ಲಾದೇಶದಲ್ಲಿ ಮತ್ತಷ್ಟು ವೀಸಾ ಸೇವೆ ಹೆಚ್ಚಿಸಲು ಭಾರತ ಮುಂದು!