ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದ ಹೆದ್ದಾರಿಗಳಲ್ಲಿರುವ ಅನಧಿಕೃತ ಟೋಲ್ ತೆರವುಗೊಳಿಸಲು ಎನ್ ಎಚ್ಎಐ ಒಪ್ಪಿಗೆ: ಸಚಿವ ಸಿಸಿ ಪಾಟೀಲ್

ರಾಜ್ಯದ ಹೆದ್ದಾರಿಗಳಲ್ಲಿ ಅವೈಜ್ಞಾನಿಕ, ಕಾನೂನುಬಾಹಿರ ಅನಧಿಕೃತ ಟೋಲ್ ಗಳನ್ನು ತೆರವುಗೊಳಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಒಪ್ಪಿಗೆ ನೀಡಿದೆ.

ಬೆಂಗಳೂರು: ರಾಜ್ಯದ ಹೆದ್ದಾರಿಗಳಲ್ಲಿ ಅವೈಜ್ಞಾನಿಕ, ಕಾನೂನುಬಾಹಿರ ಅನಧಿಕೃತ ಟೋಲ್ ಗಳನ್ನು ತೆರವುಗೊಳಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಒಪ್ಪಿಗೆ ನೀಡಿದೆ.

ವಿಧಾನಸಭೆಯಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರತಿಪಕ್ಷದ ಉಪನಾಯಕ ಯು.ಟಿ. ಖಾದರ್ ಅವರು ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿ, ಸುರತ್ಕಲ್ ಬಳಿ ಅನಧಿಕೃತ ಟೋಲ್ ಸಂಗ್ರಹದ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮಂಗಳೂರಿನ ಸುರತ್ಕಲ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿರುವ ಟೋಲ್‌ ಸಂಗ್ರಹ ಕೇಂದ್ರ ತೆರವುಗೊಳಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ ತಿಳಿಸಿದರು.

‘ಮಂಗಳೂರಿನಲ್ಲಿ 60 ಕಿ.ಮೀ. ಅಂತರದಲ್ಲಿ ಮೂರು ಟೋಲ್‌ ಕೇಂದ್ರಗಳಿವೆ. ಸುರತ್ಕಲ್‌ ಟೋಲ್‌ ಪ್ಲಾಜಾ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿದೆ. ಅದನ್ನು ತೆರವುಗೊಳಿಸುವಂತೆ ಆಗ್ರಹಿಸಿ ಮೂರು ದಿನಗಳಿಂದ ಧರಣಿ ನಡೆಯುತ್ತಿದೆ. ತಕ್ಷಣ ಟೋಲ್‌ ಪ್ಲಾಜಾ ತೆರವು ಮಾಡಬೇಕು’ ಎಂದು ಯು.ಟಿ ಖಾದರ್ ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ‘60 ಕಿ.ಮೀ. ಅಂತರದೊಳಗೆ ಇರುವ ಟೋಲ್‌ ಸಂಗ್ರಹಣಾ ಕೇಂದ್ರಗಳನ್ನು ತೆರವುಗೊಳಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ತೀರ್ಮಾನಿಸಿದೆ. ಈ ಕಾರಣದಿಂದ ಸುರತ್ಕಲ್‌ ಟೋಲ್‌ ಸಂಗ್ರಹ ಕೇಂದ್ರವನ್ನು ತೆರವುಗೊಳಿಸಲು ಎನ್‌ಎಚ್‌ಎಐಗೆ ಪ್ರಸ್ತಾವ ಸಲ್ಲಿಸಲಾಗಿತ್ತು. ಅದನ್ನು ಪ್ರಾಧಿಕಾರ ಒಪ್ಪಿಕೊಂಡಿದೆ’ ಎಂದರು.

ಸುರತ್ಕಲ್‌ ಬಳಿ ನವಯುಗ ಕನ್‌ಸ್ಟ್ರಕ್ಷನ್ಸ್‌ ಮತ್ತು ನವ ಮಂಗಳೂರು ಬಂದರು ರಸ್ತೆ ಕಂಪನಿಗಳು ರಸ್ತೆ ನಿರ್ಮಿಸಿವೆ. ಈ ಕಾರಣದಿಂದಾಗಿ 60 ಕಿ.ಮೀ. ಅಂತರದ ಮಧ್ಯದಲ್ಲಿ ಟೋಲ್‌ ಸಂಗ್ರಹಣಾ ಕೇಂದ್ರ ತೆರೆಯಲಾಗಿತ್ತು ಎಂದು ಹೇಳಿದರು.

ರಾಜ್ಯಾದ್ಯಂತ 19 ಅಕ್ರಮ ಟೋಲ್‌ಗಳಿವೆ. “ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಮಾರ್ಚ್ 2022 ರಲ್ಲಿ ಟೋಲ್‌ಗಳನ್ನು ತೆಗೆದುಹಾಕುವುದಾಗಿ ಭರವಸೆ ನೀಡಿದ್ದರು. ಆರು ತಿಂಗಳು ಕಳೆದರೂ ಯಾವುದೇ ಕ್ರಮಕೈಗೊಂಡಿಲ್ಲ ಎಂದು ಯು ಟಿ ಖಾದರ್ ಮಾಹಿತಿ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್