ಆರಗ ಜ್ಞಾನೇಂದ್ರ 
ರಾಜ್ಯ

ಬಿಟ್ ಕಾಯಿನ್ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವುದಿಲ್ಲ; ಸಾಕ್ಷಿ ಕೊಟ್ಟರೆ ಈಗಲೂ ತನಿಖೆ ನಡೆಸುತ್ತೇವೆ: ಆರಗ ಜ್ಞಾನೇಂದ್ರ

ರಾಜ್ಯದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಬಿಟ್ ಕಾಯಿನ್ ಹಗರಣದ ತನಿಖೆಗೆ ಸರಕಾರ ಮುಕ್ತ ಮನಸ್ಸು ಹೊಂದಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಬಿಟ್ ಕಾಯಿನ್ ಹಗರಣದ ತನಿಖೆಗೆ ಸರಕಾರ ಮುಕ್ತ ಮನಸ್ಸು ಹೊಂದಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಗುರುವಾರ ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ ಸದಸ್ಯ ಟಿ.ಎ.ಶರವಣ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಾಧಾರ ನೀಡಿದರೆ ಪ್ರಾಮಾಣಿಕವಾಗಿ ತನಿಖೆ ನಡೆಸಲು ಸರಕಾರ ಸಿದ್ಧವಿದೆ ಎಂದು ಹೇಳಿದರು.  ಅಂತರ್‍ರಾಷ್ಟ್ರೀಯ ಹ್ಯಾಕರ್ ಶ್ರೀಕಿಯನ್ನು ಬಂಧಿಸಿ ಈಗಾಗಲೇ ವಿಚಾರಣೆ ನಡೆಸಲಾಗಿದೆ. ಈ ತಂತ್ರಜ್ಞಾನ ನಮ್ಮ ಪೋಲೀಸರಿಗೂ ಹೊಸದು, ತಜ್ಞರನ್ನು ಕರೆಸಿ ವಿಚಾರಣೆ ನಡೆಸಲಾಗಿದೆ ಎಂದರು.

ಅಮೇರಿಕಾದಿಂದ ದೇಶದಲ್ಲಿ ಬಿಟ್ ಕಾಯಿನ್ ನಡೆಯುತ್ತಿದೆ ಎನ್ನುವ ಯಾವುದೇ ಸೂಚನೆ ಅಥವಾ ಸಲಹೆ ಬಂದಿಲ್ಲ. ಆದರೆ ಅಮೇರಿಕಾದಲ್ಲಿ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಕೆಲವರನ್ನು ಬಂಧಿಸಿ ವಿಚಾರಣೆ ಮಾಡಲಾಗಿದೆ.

ಕೆಲವರು ಸಾವಿರ ಕೋಟಿ ಕಳೆದುಕೊಂಡಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿ ಬಂತು. ಆದರೆ ಕಳೆದುಕೊಂಡವರು ಯಾರು? ಅವರು ದೂರು ಕೊಡಬೇಕಲ್ಲವೇ? ನಮ್ಮ ಪೊಲೀಸರಿಗೆ ಮೊದಲು ವಾಲೆಟ್ ನಲ್ಲಿ ಕಾಯಿನ್ ಕಂಡಿತು ನಂತರ ಇರಲಿಲ್ಲ. ಬೇರೆ ಯಾವುದನ್ನೋ ಶ್ರೀಕಿ ತೋರಿಸಿದ್ದಾನೆ. ಈಗಲೂ ಸಾಕ್ಷಿ ಕೊಟ್ಟರೆ ತನಿಖೆ ನಡೆಸಲಾಗುತ್ತದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT