ಸೀರೆ ಉಟ್ಟ ನಾರಿಯರ ಓಟ ಕಾರ್ಯಕ್ರಮ 
ರಾಜ್ಯ

ಬೆಂಗಳೂರು: ಮಲ್ಲೇಶ್ವರಂನಲ್ಲಿ 'ಸೀರೆ ಉಟ್ಟ ನಾರಿಯರ ಓಟ': ಸಚಿವ ಡಾ. ಅಶ್ವತ್ಥ ನಾರಾಯಣ ಚಾಲನೆ

 ಜಯನಗರ ಜಾಗ್ವಾರ್ಸ್​ ಸಂಸ್ಥೆ  ಇಂದು ಬೆಳಗ್ಗೆ ಮಲ್ಲೇಶ್ವರಂನಲ್ಲಿ ಏರ್ಪಡಿಸಿದ್ದ 3 ಕಿಲೋ ಮೀಟರ್ ಉದ್ದದ 'ಸೀರೆ ಉಟ್ಟ ನಾರಿಯರ ಓಟದ ಸ್ಪರ್ಧೆಗೆ ಕ್ಷೇತ್ರದ ಶಾಸಕರು ಆಗಿರುವ ಉನ್ನತ ಏಗಕಿಂಳ ಸಚಿವ ಡಾ. ಸಿ.ಎನ್.ಅಶ್ವತ್ಥ ನಾರಾಯಣ ಚಾಲನೆ ನೀಡಿದರು.

ಬೆಂಗಳೂರು:  ಜಯನಗರ ಜಾಗ್ವಾರ್ಸ್ ಸಂಸ್ಥೆ ಇಂದು ಬೆಳಗ್ಗೆ ಮಲ್ಲೇಶ್ವರಂನಲ್ಲಿ ಏರ್ಪಡಿಸಿದ್ದ 3 ಕಿಲೋ ಮೀಟರ್ ಉದ್ದದ 'ಸೀರೆ ಉಟ್ಟ ನಾರಿಯರ ಓಟದ ಸ್ಪರ್ಧೆಗೆ ಕ್ಷೇತ್ರದ ಶಾಸಕರು ಆಗಿರುವ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥ ನಾರಾಯಣ ಚಾಲನೆ ನೀಡಿದರು. 18ನೇ ಅಡ್ಡರಸ್ತೆಯ ಮೈದಾನದಿಂದ ಆರಂಭವಾದ ಈ ಸ್ಪರ್ಧೆಯಲ್ಲಿ ಸಾವಿರಾರು ನಾರಿಯರು ಉತ್ಸಾಹದಿಂದ ಪಾಲ್ಗೊಂಡರು. 

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಆರೋಗ್ಯದ ಗುಟ್ಟನ್ನು ಅರಿತರೆ ಬದುಕಿನ ಗುಟ್ಟನ್ನೇ ತಿಳಿಯಬಹುದು. ದೇಶಿ ಉಡುಪಿನಲ್ಲೂ ಮಹಿಳೆಯರು ಆಟೋಟಗಳಲ್ಲಿ ಭಾಗವಹಿಸಬಹುದು.ಇಂತಹ ಚಟುವಟಿಕೆಗಳಿಂದ ಮಹಿಳೆಯರಿಗೂ ಖುಷಿ ಸಿಗುತ್ತದೆ ಎಂದು ಅವರು ತಿಳಿಸಿದರು. 

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ದೈಹಿಕ ಶಿಕ್ಷಣ ಮತ್ತು ಯೋಗಕ್ಷೇಮಕ್ಕೂ ಆದ್ಯತೆ ನೀಡಲಾಗಿದೆ. ಸದೃಢ ಆರೋಗ್ಯದಿಂದ ಸದೃಢ  ಭಾರತ ನಿರ್ಮಿಸಬಹುದು ಎಂದು ಅವರು ನುಡಿದರು.  ಆದಮ್ಯ ಚೇತನ ಸಂಸ್ಥೆಯ ಮುಖ್ಯಸ್ಥೆ ತೇಜಸ್ವಿನಿ ಅನಂತ ಕುಮಾರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT