ಸಾಂದರ್ಭಿಕ ಚಿತ್ರ 
ರಾಜ್ಯ

ದೊಡ್ಡಬಳ್ಳಾಪುರ: ತನ್ನ ನೋಡಿ ನಾಯಿ ಬೊಗಳಿದ್ದಕ್ಕೆ ಆಕ್ರೋಶ; ಅಟ್ಟಾಡಿಸಿಕೊಂಡು ಹೋಗಿ ಗುಂಡಿಟ್ಟು ಕೊಂದ ಉದ್ಯಮಿ

ನಾಯಿ ತನ್ನ ನೋಡಿ ಬೊಗಳಿದ್ದಕ್ಕೆ ಆಕ್ರೋಶಗೊಂಡ ವ್ಯಕ್ತಿಯೋರ್ವ ಏರ್ ಗನ್‍ನಿಂದ ಶೂಟ್ ಮಾಡಿದ್ದರಿಂದ ನಾಯಿ ಸಾವನ್ನಪ್ಪಿದೆ.

ಬೆಂಗಳೂರು: ನಾಯಿ ತನ್ನ ನೋಡಿ ಬೊಗಳಿದ್ದಕ್ಕೆ ಆಕ್ರೋಶಗೊಂಡ ವ್ಯಕ್ತಿಯೋರ್ವ ಏರ್ ಗನ್‍ನಿಂದ ಶೂಟ್ ಮಾಡಿದ್ದರಿಂದ ನಾಯಿ ಸಾವನ್ನಪ್ಪಿದೆ.

ಹಂದಿ ಸಾಕಣೆ ಮಾಡುವ ಕೃಷ್ಣಪ್ಪ ನಾಯಿ ಹಂತಕ. ದೊಡ್ಡ ಬಳ್ಳಾಪುರದ ಮಾದಗೊಂಡನಹಳ್ಳಿ ಗ್ರಾಮದ ಅಶೋಕ್ ಎಂಬುವರಿಗೆ ಸೇರಿದ ನಾಯಿ ‘ರಾಕಿ’ ಭಾನುವಾರ ಸಂಜೆ ನಡೆದುಕೊಂಡು ಹೋಗುತ್ತಿದ್ದ ಕೃಷ್ಣಪ್ಪನನ್ನು ನೋಡಿ ಬೊಗಳಿದೆ.

ಇದರಿಂದ ಕೋಪಗೊಂಡ ಕೃಷ್ಣಪ್ಪಮನೆಗೆ ಹೋಗಿ ಏರ್ ಗನ್ ತಂದು ನಾಯಿಗೆ 5 ಬಾರಿ ಗುಂಡು ಹೊಡೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.ಘಟನೆ ನಡೆದ ನಂತರ ಆರೋಪಿ ಕೃಷ್ಣಪ್ಪ ಪರಾರಿಯಾಗಿದ್ದು, ಪೊಲೀಸರು ಆತನಿಗಾಗಿ ಶೋಧ ಮುಂದುವರಿಸಿದ್ದಾರೆ.

ಈ ಸಂಬಂಧ ನಾಯಿ ಮಾಲೀಕ ಅಶೋಕ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ, ಪೊಲೀಸರು ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯಡಿ ಮತ್ತು ಐಪಿಸಿ ಸೆಕ್ಷನ್ 429 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT