ನಾಡಪ್ರಭು ಕೆಂಪೇಗೌಡ ಲೇಔಟ್‌ 
ರಾಜ್ಯ

ಬೆಂಗಳೂರಿನ ನಾಡಪ್ರಭು ಕೆಂಪೇಗೌಡ ಲೇಔಟ್‌: ಭೂಸ್ವಾಧೀನ ವಿಳಂಬ

ಮುಂಬರುವ ಡಾ.ಶಿವರಾಮ ಕಾರಂತ್ ಲೇಔಟ್‌ಗಾಗಿ ಬಿಡಿಎ 2,800 ಎಕರೆ ಭೂಮಿಯನ್ನು ತ್ವರಿತವಾಗಿ ಸ್ವಾಧೀನಪಡಿಸಿಕೊಂಡಿದೆಯಾದರೂ ನಾಡಪ್ರಭು ಕೆಂಪೇಗೌಡ ಲೇಔಟ್‌ಗಾಗಿ 1,300 ಎಕರೆ ಸ್ವಾಧೀನವನ್ನು ಪೂರ್ಣಗೊಳಿಸುವ ಪ್ರಕ್ರಿಯೆಗೆ ತಡೆ ಎದುರಾಗಿದೆ.

ಬೆಂಗಳೂರು: ಮುಂಬರುವ ಡಾ.ಶಿವರಾಮ ಕಾರಂತ್ ಲೇಔಟ್‌ಗಾಗಿ ಬಿಡಿಎ 2,800 ಎಕರೆ ಭೂಮಿಯನ್ನು ತ್ವರಿತವಾಗಿ ಸ್ವಾಧೀನಪಡಿಸಿಕೊಂಡಿದೆಯಾದರೂ ನಾಡಪ್ರಭು ಕೆಂಪೇಗೌಡ ಲೇಔಟ್‌ಗಾಗಿ 1,300 ಎಕರೆ ಸ್ವಾಧೀನವನ್ನು ಪೂರ್ಣಗೊಳಿಸುವ ಪ್ರಕ್ರಿಯೆಗೆ ತಡೆ ಎದುರಾಗಿದೆ.

ಈ ವಿಳಂಬ ಲೇಔಟ್‌ಗೆ ಮೂಲಸೌಕರ್ಯ ಕಲ್ಪಿಸುವ ಯೋಜನೆಗಳ ಮೇಲೆ ಪರಿಣಾಮ ಬೀರುತ್ತಿದೆ ಎಂದು ಬಿಡಿಎ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೈಸೂರು ರಸ್ತೆ ಮತ್ತು ಮಾಗಡಿ ರಸ್ತೆ ನಡುವೆ ಬರುವ ಎನ್‌ಪಿಕೆಎಲ್ (ನಾಡಪ್ರಭು ಕೆಂಪೇಗೌಡ) ಲೇಔಟ್ ರಚನೆಗೆ ಒಟ್ಟು 4,043 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಅಧಿಸೂಚನೆ ಹೊರಡಿಸಲಾಗಿದೆ. ಈ ಪೈಕಿ 1,300 ಎಕರೆಗಳನ್ನು ಹೊರತುಪಡಿಸಿ, ಉಳಿದವುಗಳಿಗೆ ಪರಿಹಾರಗಳನ್ನು ಜಾರಿಗೊಳಿಸುವ ಪ್ರಕ್ರಿಯೆಯಲ್ಲಿದ್ದೇವೆ. ಲೇಔಟ್‌ಗಾಗಿ ತಮ್ಮ ಭೂಮಿಯನ್ನು ಹಂಚಿಕೊಳ್ಳಲು ಇಚ್ಛಿಸದ ರೈತರು ಹೂಡಿರುವ ಮೊಕದ್ದಮೆಯು ಅವುಗಳನ್ನು ಸ್ವಾಧೀನಪಡಿಸಿಕೊಳ್ಳಲು ನಮ್ಮ ಅಸಮರ್ಥತೆಗೆ ಪ್ರಮುಖ ಕಾರಣವಾಗಿದೆ ಎಂದು ಬಿಡಿಎ ಭೂಸ್ವಾಧೀನ ವಿಭಾಗದ ಉಪ ಆಯುಕ್ತೆ ಎ ಸೌಜನ್ಯ ಟಿಎನ್‌ಐಇಗೆ ತಿಳಿಸಿದರು.

ಈ ಕುರಿತು ಮಾಹಿತಿ ನೀಡಿದ ಅವರು, 'ತಮ್ಮ ಭೂಮಿಯನ್ನು ಹಂಚಿಕೊಳ್ಳಲು ಬಯಸದ ಭೂಮಾಲೀಕರು ಹೈಕೋರ್ಟ್‌ನಲ್ಲಿ ಹೂಡಿರುವ ಪ್ರಕರಣಗಳಿಂದಾಗಿ 600 ಎಕರೆ ಭೂಮಿ ಸಿಲುಕಿಕೊಂಡಿದೆ. ಹೆಚ್ಚುವರಿ 300 ಎಕರೆ ಕಂದಾಯ ನಿವೇಶನಗಳು (ಕೃಷಿ ಭೂಮಿಯನ್ನು ಕೃಷಿಯೇತರ ಭೂಮಿಯಾಗಿ ಪರಿವರ್ತಿಸಲಾಗಿದೆ, ಅನುಮತಿ ಅಥವಾ ಅನುಮತಿಯಿಲ್ಲದೆ), ಆದ್ದರಿಂದ ಪರಿಹಾರವನ್ನು ಪಾವತಿಸಬೇಕಾದ ಮಾಲೀಕರಿಗೆ ದೊಡ್ಡ ಪ್ರಶ್ನೆಯಾಗಿದೆ. ಅವರಲ್ಲಿ ಹೆಚ್ಚಿನವರು ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ಹೇಳಿದ್ದಾರೆ.

ಉಳಿದ ಭೂಮಿಯಲ್ಲಿ 250 ಎಕರೆ ಸರ್ಕಾರಿ ಭೂಮಿಯಾಗಿದ್ದು, ಅದನ್ನು ಬಿಡಿಎಗೆ ವರ್ಗಾಯಿಸಬೇಕಿದೆ. ಇಲ್ಲಿ ಯಾವುದೇ ಸಮಸ್ಯೆ ಇಲ್ಲ, ಆದರೆ ವರ್ಗಾವಣೆಯನ್ನು ಕಂದಾಯ ಇಲಾಖೆ ಮಾಡಬೇಕಾಗಿದೆ. ಅದರ ಮೂಲಕ ನೈಜತೆ ಪ್ರಮಾಣಪತ್ರವನ್ನು ನೀಡಬೇಕಾಗಿದೆ. ಅದಕ್ಕೆ ಅನುಕೂಲ ಮಾಡಿಕೊಡುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದೇವೆ. ಇನ್ನೂ 150 ಎಕರೆ ನಿರ್ಮಿತ ಪ್ರದೇಶವಾಗಿದ್ದು, ನಿರ್ಮಿಸಿರುವ ಕಟ್ಟಡಗಳನ್ನು ಕೆಡವಬೇಕಾಗಿದೆ ಎಂದು ಹೇಳಿದರು.

ಸ್ವಾಧೀನ ವಿಳಂಬದಿಂದಾಗಿ ವಿಸ್ತಾರವಾದ ಲೇಔಟ್‌ನಲ್ಲಿ ರಸ್ತೆಗಳು, ಒಳಚರಂಡಿ ವ್ಯವಸ್ಥೆ ಮತ್ತು ಇತರ ಮೂಲಸೌಕರ್ಯಗಳನ್ನು ನಿರ್ಮಾಣದ ಪರಿಣಾಮ ಬೀರುತ್ತಿದೆ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. "ಸ್ವಾಧೀನವನ್ನು ತ್ವರಿತಗೊಳಿಸಲು ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ, ಮೂಲಸೌಕರ್ಯವನ್ನು ಹೇಗೆ ಸ್ಥಾಪಿಸಲು ಸಾಧ್ಯ" ಎಂದು ಅವರು ಕೇಳಿದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT