ಸಾಂದರ್ಭಿಕ ಚಿತ್ರ 
ರಾಜ್ಯ

13,133 ಪೌರಕಾರ್ಮಿಕರನ್ನು ಖಾಯಂಗೊಳಿಸಿ ರಾಜ್ಯ ಸರ್ಕಾರದ ಆದೇಶ

ಮಹಾನಗರ ಪಾಲಿಕೆ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 13,133 ಪೌರಕಾರ್ಮಿಕರನ್ನು ಸರ್ಕಾರಿ ನೌಕರರೆಂದು ಪರಿಗಣಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಬೆಂಗಳೂರು: ಮಹಾನಗರ ಪಾಲಿಕೆ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 13,133 ಪೌರಕಾರ್ಮಿಕರನ್ನು ಸರ್ಕಾರಿ ನೌಕರರೆಂದು ಪರಿಗಣಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಪುರಸಭೆ ಮತ್ತು ಪಟ್ಟಣ ಪಂಚಾಯತ್ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ 13,133 ಪೌರಕಾರ್ಮಿಕರಿಗೆ ವಿಶೇಷ ನೇಮಕಾತಿ ನಿಯಮಗಳ ಅಡಿಯಲ್ಲಿ ಸರ್ಕಾರಿ ನೌಕರರೆಂದು ನೇಮಕಾತಿ ಮಾಡಿಕೊಳ್ಳುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

ನಗರಸಭೆಯ 5,533, ಪುರಸಭೆಗಳ 3,673 ಪೌರ ಕಾರ್ಮಿಕರ ಸೇವೆ ಖಾಯಂಗೊಳ್ಳಲಿದೆ. ವಿಶೇಷ ನೇಮಕಾತಿ ನಿಯಮಗಳಡಿ ಸರಕಾರಿ ನೌಕರ ರೆಂದು ನೇಮಿಸಿಕೊಳ್ಳಲು ತೀರ್ಮಾನಿಸಲಾಗಿದೆ. ಈ ನೌಕರರು ಈಗ 17,000-28,980 ರೂ. ವೇತನ ಶ್ರೇಣಿ ಅಡಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸ ಲಾಗಿದೆ. 11,133 ಪೌರ ಕಾರ್ಮಿಕರ ಕಾಯಂ ಆಗುತ್ತಿರುವುದು ಇದೇ ಮೊದಲು.

26,000 ಪೌರಕಾರ್ಮಿಕರನ್ನು ಸೇರ್ಪಡೆಗೊಳಿಸಬೇಕು, ಇದರಲ್ಲಿ ಕಸಗುಡಿಸುವವರನ್ನೂ ಸೇರಿಸಬೇಕು ಎಂಬ ಬೇಡಿಕೆ ಇತ್ತು. ಇದು ಮೊದಲ ಕಂತಾಗಿದ್ದು, ಉಳಿದ 12,800 ಪೌರಕಾರ್ಮಿಕರಿಗೆ ಶೀಘ್ರದಲ್ಲೇ ವಸತಿ ಕಲ್ಪಿಸಲಾಗುವುದು ಎಂದು ಸರ್ಕಾರ ಹೇಳಿದೆ.

ಎಲ್ಲಾ 26,000 ಜನರನ್ನು ಸೇರಿಸಬೇಕೆಂದು ನಾವು ಬಯಸಿದ್ದೇವೆ. 24,000 ಕಾರ್ಮಿಕರಲ್ಲಿ ಇತರರನ್ನು ಲೋಡರ್‌ಗಳು, ಡ್ರೈವರ್‌ಗಳು ಮತ್ತು ಕ್ಲೀನರ್‌ಗಳು ಎಂದು ವರ್ಗೀಕರಿಸಲಾಗಿದೆ. ಇದನ್ನು ಪ್ರತ್ಯೇಕವಾಗಿ ವರ್ಗೀಕರಿಸಲು ಸಾಧ್ಯವಿಲ್ಲ’ ಎಂದು ಪೌರಕಾರ್ಮಿಕ ಸಮಿತಿಯ ಸದಸ್ಯ ಕ್ಲಿಪ್ಟಾನ್ ರೋಜಾರಿಯೋ ತಿಳಿಸಿದ್ದಾರೆ.

ಹಣಕಾಸಿನ ಸಮಸ್ಯೆಗಳಿವೆ, ಹೀಗಾಗಿ ನಾವು ಎಲ್ಲವನ್ನು ಒಂದೇ ಬಾರಿಗೆ ಮಾಡಲು ಸಾಧ್ಯವಾಗಲಿಲ್ಲ. ಉಳಿದ 12,800 ಸೇರ್ಪಡೆಗಾಗಿ ನಾವು ಕಾಯಬೇಕಾಗಿದೆ ಎಂದು  ಹಿರಿಯ ಸಚಿವರೊಬ್ಬರು ತಿಳಿಸಿದ್ದಾರೆ.

ಸುಮಾರು 50 ಸಾವಿರ ಪೌರಕಾರ್ಮಿಕರು ತಮ್ಮ ಸೇವೆ ಕಾಯಂಗೊಳಿಸುವಂತೆ ಕೋರಿ ಸುಮಾರು ಮೂರು ತಿಂಗಳ ಹಿಂದೆ ಮುಷ್ಕರ ನಡೆಸಿದ್ದು, ಅವರ ಬೇಡಿಕೆಗೆ ರಾಜ್ಯ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿ ಸಮಿತಿ ರಚಿಸಿರುವುದನ್ನು ಸ್ಮರಿಸಬಹುದಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT