ಸಾಂದರ್ಭಿಕ ಚಿತ್ರ 
ರಾಜ್ಯ

13,133 ಪೌರಕಾರ್ಮಿಕರನ್ನು ಖಾಯಂಗೊಳಿಸಿ ರಾಜ್ಯ ಸರ್ಕಾರದ ಆದೇಶ

ಮಹಾನಗರ ಪಾಲಿಕೆ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 13,133 ಪೌರಕಾರ್ಮಿಕರನ್ನು ಸರ್ಕಾರಿ ನೌಕರರೆಂದು ಪರಿಗಣಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಬೆಂಗಳೂರು: ಮಹಾನಗರ ಪಾಲಿಕೆ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 13,133 ಪೌರಕಾರ್ಮಿಕರನ್ನು ಸರ್ಕಾರಿ ನೌಕರರೆಂದು ಪರಿಗಣಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಪುರಸಭೆ ಮತ್ತು ಪಟ್ಟಣ ಪಂಚಾಯತ್ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ 13,133 ಪೌರಕಾರ್ಮಿಕರಿಗೆ ವಿಶೇಷ ನೇಮಕಾತಿ ನಿಯಮಗಳ ಅಡಿಯಲ್ಲಿ ಸರ್ಕಾರಿ ನೌಕರರೆಂದು ನೇಮಕಾತಿ ಮಾಡಿಕೊಳ್ಳುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

ನಗರಸಭೆಯ 5,533, ಪುರಸಭೆಗಳ 3,673 ಪೌರ ಕಾರ್ಮಿಕರ ಸೇವೆ ಖಾಯಂಗೊಳ್ಳಲಿದೆ. ವಿಶೇಷ ನೇಮಕಾತಿ ನಿಯಮಗಳಡಿ ಸರಕಾರಿ ನೌಕರ ರೆಂದು ನೇಮಿಸಿಕೊಳ್ಳಲು ತೀರ್ಮಾನಿಸಲಾಗಿದೆ. ಈ ನೌಕರರು ಈಗ 17,000-28,980 ರೂ. ವೇತನ ಶ್ರೇಣಿ ಅಡಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸ ಲಾಗಿದೆ. 11,133 ಪೌರ ಕಾರ್ಮಿಕರ ಕಾಯಂ ಆಗುತ್ತಿರುವುದು ಇದೇ ಮೊದಲು.

26,000 ಪೌರಕಾರ್ಮಿಕರನ್ನು ಸೇರ್ಪಡೆಗೊಳಿಸಬೇಕು, ಇದರಲ್ಲಿ ಕಸಗುಡಿಸುವವರನ್ನೂ ಸೇರಿಸಬೇಕು ಎಂಬ ಬೇಡಿಕೆ ಇತ್ತು. ಇದು ಮೊದಲ ಕಂತಾಗಿದ್ದು, ಉಳಿದ 12,800 ಪೌರಕಾರ್ಮಿಕರಿಗೆ ಶೀಘ್ರದಲ್ಲೇ ವಸತಿ ಕಲ್ಪಿಸಲಾಗುವುದು ಎಂದು ಸರ್ಕಾರ ಹೇಳಿದೆ.

ಎಲ್ಲಾ 26,000 ಜನರನ್ನು ಸೇರಿಸಬೇಕೆಂದು ನಾವು ಬಯಸಿದ್ದೇವೆ. 24,000 ಕಾರ್ಮಿಕರಲ್ಲಿ ಇತರರನ್ನು ಲೋಡರ್‌ಗಳು, ಡ್ರೈವರ್‌ಗಳು ಮತ್ತು ಕ್ಲೀನರ್‌ಗಳು ಎಂದು ವರ್ಗೀಕರಿಸಲಾಗಿದೆ. ಇದನ್ನು ಪ್ರತ್ಯೇಕವಾಗಿ ವರ್ಗೀಕರಿಸಲು ಸಾಧ್ಯವಿಲ್ಲ’ ಎಂದು ಪೌರಕಾರ್ಮಿಕ ಸಮಿತಿಯ ಸದಸ್ಯ ಕ್ಲಿಪ್ಟಾನ್ ರೋಜಾರಿಯೋ ತಿಳಿಸಿದ್ದಾರೆ.

ಹಣಕಾಸಿನ ಸಮಸ್ಯೆಗಳಿವೆ, ಹೀಗಾಗಿ ನಾವು ಎಲ್ಲವನ್ನು ಒಂದೇ ಬಾರಿಗೆ ಮಾಡಲು ಸಾಧ್ಯವಾಗಲಿಲ್ಲ. ಉಳಿದ 12,800 ಸೇರ್ಪಡೆಗಾಗಿ ನಾವು ಕಾಯಬೇಕಾಗಿದೆ ಎಂದು  ಹಿರಿಯ ಸಚಿವರೊಬ್ಬರು ತಿಳಿಸಿದ್ದಾರೆ.

ಸುಮಾರು 50 ಸಾವಿರ ಪೌರಕಾರ್ಮಿಕರು ತಮ್ಮ ಸೇವೆ ಕಾಯಂಗೊಳಿಸುವಂತೆ ಕೋರಿ ಸುಮಾರು ಮೂರು ತಿಂಗಳ ಹಿಂದೆ ಮುಷ್ಕರ ನಡೆಸಿದ್ದು, ಅವರ ಬೇಡಿಕೆಗೆ ರಾಜ್ಯ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿ ಸಮಿತಿ ರಚಿಸಿರುವುದನ್ನು ಸ್ಮರಿಸಬಹುದಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; ಆ ದೃಶ್ಯಕ್ಕೆ ಆಕ್ಷೇಪ!

ಲೂಟಿಕೋರನ ಭಯವೇ? ಖರ್ಗೆಯವರೇ, ಭಿಕ್ಷೆ ಬೇಡುವ 'ದಯನೀಯ ಸ್ಥಿತಿ' ಬರಬಾರದಿತ್ತು! ಜೆಡಿಎಸ್ ಟಾಂಗ್

ಕುರ್ಚಿ ಕದನ: ಡಿಕೆಶಿ ಸಿಎಂ ಆಗುವುದು ಯಾವಾಗ?; ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

SCROLL FOR NEXT