ಸಾಂದರ್ಭಿಕ ಚಿತ್ರ 
ರಾಜ್ಯ

13,133 ಪೌರಕಾರ್ಮಿಕರನ್ನು ಖಾಯಂಗೊಳಿಸಿ ರಾಜ್ಯ ಸರ್ಕಾರದ ಆದೇಶ

ಮಹಾನಗರ ಪಾಲಿಕೆ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 13,133 ಪೌರಕಾರ್ಮಿಕರನ್ನು ಸರ್ಕಾರಿ ನೌಕರರೆಂದು ಪರಿಗಣಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಬೆಂಗಳೂರು: ಮಹಾನಗರ ಪಾಲಿಕೆ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 13,133 ಪೌರಕಾರ್ಮಿಕರನ್ನು ಸರ್ಕಾರಿ ನೌಕರರೆಂದು ಪರಿಗಣಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ಪುರಸಭೆ ಮತ್ತು ಪಟ್ಟಣ ಪಂಚಾಯತ್ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ 13,133 ಪೌರಕಾರ್ಮಿಕರಿಗೆ ವಿಶೇಷ ನೇಮಕಾತಿ ನಿಯಮಗಳ ಅಡಿಯಲ್ಲಿ ಸರ್ಕಾರಿ ನೌಕರರೆಂದು ನೇಮಕಾತಿ ಮಾಡಿಕೊಳ್ಳುವ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

ನಗರಸಭೆಯ 5,533, ಪುರಸಭೆಗಳ 3,673 ಪೌರ ಕಾರ್ಮಿಕರ ಸೇವೆ ಖಾಯಂಗೊಳ್ಳಲಿದೆ. ವಿಶೇಷ ನೇಮಕಾತಿ ನಿಯಮಗಳಡಿ ಸರಕಾರಿ ನೌಕರ ರೆಂದು ನೇಮಿಸಿಕೊಳ್ಳಲು ತೀರ್ಮಾನಿಸಲಾಗಿದೆ. ಈ ನೌಕರರು ಈಗ 17,000-28,980 ರೂ. ವೇತನ ಶ್ರೇಣಿ ಅಡಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸ ಲಾಗಿದೆ. 11,133 ಪೌರ ಕಾರ್ಮಿಕರ ಕಾಯಂ ಆಗುತ್ತಿರುವುದು ಇದೇ ಮೊದಲು.

26,000 ಪೌರಕಾರ್ಮಿಕರನ್ನು ಸೇರ್ಪಡೆಗೊಳಿಸಬೇಕು, ಇದರಲ್ಲಿ ಕಸಗುಡಿಸುವವರನ್ನೂ ಸೇರಿಸಬೇಕು ಎಂಬ ಬೇಡಿಕೆ ಇತ್ತು. ಇದು ಮೊದಲ ಕಂತಾಗಿದ್ದು, ಉಳಿದ 12,800 ಪೌರಕಾರ್ಮಿಕರಿಗೆ ಶೀಘ್ರದಲ್ಲೇ ವಸತಿ ಕಲ್ಪಿಸಲಾಗುವುದು ಎಂದು ಸರ್ಕಾರ ಹೇಳಿದೆ.

ಎಲ್ಲಾ 26,000 ಜನರನ್ನು ಸೇರಿಸಬೇಕೆಂದು ನಾವು ಬಯಸಿದ್ದೇವೆ. 24,000 ಕಾರ್ಮಿಕರಲ್ಲಿ ಇತರರನ್ನು ಲೋಡರ್‌ಗಳು, ಡ್ರೈವರ್‌ಗಳು ಮತ್ತು ಕ್ಲೀನರ್‌ಗಳು ಎಂದು ವರ್ಗೀಕರಿಸಲಾಗಿದೆ. ಇದನ್ನು ಪ್ರತ್ಯೇಕವಾಗಿ ವರ್ಗೀಕರಿಸಲು ಸಾಧ್ಯವಿಲ್ಲ’ ಎಂದು ಪೌರಕಾರ್ಮಿಕ ಸಮಿತಿಯ ಸದಸ್ಯ ಕ್ಲಿಪ್ಟಾನ್ ರೋಜಾರಿಯೋ ತಿಳಿಸಿದ್ದಾರೆ.

ಹಣಕಾಸಿನ ಸಮಸ್ಯೆಗಳಿವೆ, ಹೀಗಾಗಿ ನಾವು ಎಲ್ಲವನ್ನು ಒಂದೇ ಬಾರಿಗೆ ಮಾಡಲು ಸಾಧ್ಯವಾಗಲಿಲ್ಲ. ಉಳಿದ 12,800 ಸೇರ್ಪಡೆಗಾಗಿ ನಾವು ಕಾಯಬೇಕಾಗಿದೆ ಎಂದು  ಹಿರಿಯ ಸಚಿವರೊಬ್ಬರು ತಿಳಿಸಿದ್ದಾರೆ.

ಸುಮಾರು 50 ಸಾವಿರ ಪೌರಕಾರ್ಮಿಕರು ತಮ್ಮ ಸೇವೆ ಕಾಯಂಗೊಳಿಸುವಂತೆ ಕೋರಿ ಸುಮಾರು ಮೂರು ತಿಂಗಳ ಹಿಂದೆ ಮುಷ್ಕರ ನಡೆಸಿದ್ದು, ಅವರ ಬೇಡಿಕೆಗೆ ರಾಜ್ಯ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿ ಸಮಿತಿ ರಚಿಸಿರುವುದನ್ನು ಸ್ಮರಿಸಬಹುದಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT