ಎಂಪಿ ಕುಮಾರಸ್ವಾಮಿ 
ರಾಜ್ಯ

ಕಾಫಿ ಅಭಿವೃದ್ಧಿ ಮಂಡಳಿ ರದ್ದುಪಡಿಸಿ: ಶಾಸಕ ಎಂ.ಪಿ.ಕುಮಾರಸ್ವಾಮಿ ಆಗ್ರಹ

ಕಾಫಿನಾಡಿನ ರೈತರಿಗೆ ಉಪಯೋಗವಿಲ್ಲದ ಕಾಫಿ ಅಭಿವೃದ್ಧಿ ಮಂಡಳಿಯನ್ನು ರದ್ದುಗೊಳಿಸಬೇಕು ಎಂದು ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ಮಂಗಳವಾರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಬೆಂಗಳೂರು: ಕಾಫಿನಾಡಿನ ರೈತರಿಗೆ ಉಪಯೋಗವಿಲ್ಲದ ಕಾಫಿ ಅಭಿವೃದ್ಧಿ ಮಂಡಳಿಯನ್ನು ರದ್ದುಗೊಳಿಸಬೇಕು ಎಂದು ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರು ಮಂಗಳವಾರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇಂದು ವಿಧಾನ ಸಭೆಯಲ್ಲಿ ಶೂನ್ಯವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿ ಮಾತನಾಡಿದ ಅವರು, ಕಾಫಿ ಅಭಿವೃದ್ಧಿ ಮಂಡಳಿಯಿಂದ 2018ರಿಂದ ಕಾಫಿ ಬೆಳೆ ರೈತರಿಗೆ ಇದುವರೆಗೂ ಯಾವುದೇ ಅತಿವೃಷ್ಟಿ ಪರಿಹಾರ ಬಂದಿಲ್ಲ. ಈ ಭಾರಿ ಮಲೆನಾಡು ಭಾಗದಲ್ಲಿ ಶೇ. 33ರಷ್ಟು ಮಳೆಯಾಗಿದೆ ಎಂದು ಕೃಷಿ, ಕಂದಾಯ ಇಲಾಖೆ, ತೋಟಗಾರಿಕಾ ಇಲಾಖೆ ವರದಿ ನೀಡಿದೆ. ಆದರೆ ಕಾಫಿ ಅಭಿವೃದ್ಧಿ ಮಂಡಳಿ ಮಾತ್ರ ಶೇ. 22ರಷ್ಟು ಮಳೆಯಾಗಿದೆ ಎಂದು ವರದಿ ನೀಡಿದೆ. ಈ ಬಾರಿ ಮಲೆನಾಡು ಭಾಗದಲ್ಲಿ ಅತ್ಯಧಿಕ ಮಳೆಯಾಗಿದೆ ಈ ರೀತಿ ಸುಳ್ಳು ವರದಿ ನೀಡಿ ಜನರ ಹಾದಿ ತಪ್ಪಿಸುವುದು ಸರಿಯಲ್ಲ ಎಂದು ಹೇಳಿದರು.

ಕಾಫಿ ಅಭಿವೃದ್ಧಿ ಮಂಡಳಿಯಿಂದ ಯಾವುದೇ ಉಪಯೋಗವಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮನ್ನು ನಿರ್ಲಕ್ಷಿಸಿವೆ ಎಂಬ ಆತಂಕದಲ್ಲಿ  ಬೆಳೆಗಾರರು ಇದ್ದಾರೆ. ಕಾಫಿಯಿಂದ ಈ ಹಿಂದೆ ವಾರ್ಷಿಕವಾಗಿ ವಿದೇಶಿ ವಿನಿಮಯದಿಂದ ಐದು ಸಾವಿರ ಕೋಟಿ ರೂಪಾಯಿ ಆದಾಯ ಪಡೆಯಲಾಗುತ್ತಿತ್ತು. ಪ್ರಸ್ತುತ 9 ಸಾವಿರ ಕೋಟಿ ರೂಪಾಯಿ ಆದಾಯ ಪಡೆಯಲಾಗುತ್ತಿದೆ ಎಂದರು.

ಕಾಫಿಯನ್ನು ದೊಡ್ಡ ಉದ್ಯಮ, ವಾಣಿಜ್ಯ ಬೆಳೆಯನ್ನಾಗಿ ಪರಿಗಣಿಸಿರುವುದು ಸರಿಯಲ್ಲ. ಇದನ್ನು ಕೃಷಿ ಬೆಳೆಯನ್ನಾಗಿ ಪರಿಗಣಿಸಿದರೆ ರೈತರಿಗೆ ಸರ್ಕಾರದ ಸವಲತ್ತುಗಳು ದೊರೆಯಲಿದೆ. ಕೇಂದ್ರ ಫಸಲ್ ಬೀಮಾ ಯೋಜನೆಯ ವ್ಯಾಪ್ತಿಯಲ್ಲಿ ತರಬೇಕು. ಮಲೆನಾಡು ಭಾಗದಲ್ಲಿ ಪ್ರತಿವರ್ಷ ಹೆಚ್ಚು ಪ್ರಮಾಣದ ಮಳೆಯಾಗಿ ರೈತರು ಸಾಕಷ್ಟು ನಷ್ಟ ಅನುಭವಿಸುತ್ತಿದ್ದಾರೆ. ಚಿಕ್ಕಮಗಳೂರು, ಮಡಿಕೇರಿ, ಹಾಸನ ಜಿಲ್ಲೆಯನ್ನು ಅತಿವೃಷ್ಢಿ ಪ್ರದೇಶ ಎಂದು ಘೋಷಿಸಬೇಕು ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT