ಆರಗ ಜ್ಞಾನೇಂದ್ರ 
ರಾಜ್ಯ

ರಾಜ್ಯದಲ್ಲಿ 9,432 ಪೊಲೀಸ್ ಪೇದೆ ಹುದ್ದೆಗಳು ಖಾಲಿಯಿವೆ: ಆರಗ ಜ್ಞಾನೇಂದ್ರ

ರಾಜ್ಯದಲ್ಲಿ 9,432 ಪೊಲೀಸ್‌ ಪೇದೆ ಹುದ್ದೆ ಖಾಲಿಯಿದ್ದು, ಪ್ರಸ್ತುತ 3,484 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಬಳಿಕ 1,500 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಿದ್ದು, ಪ್ರಸಕ್ತ ಸಾಲಿನಲ್ಲಿ ಸುಮಾರು 5 ಸಾವಿರ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ 9,432 ಪೊಲೀಸ್‌ ಪೇದೆ ಹುದ್ದೆ ಖಾಲಿಯಿದ್ದು, ಪ್ರಸ್ತುತ 3,484 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಬಳಿಕ 1,500 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಿದ್ದು, ಪ್ರಸಕ್ತ ಸಾಲಿನಲ್ಲಿ ಸುಮಾರು 5 ಸಾವಿರ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಪ್ರೀತಂ ಗೌಡ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಪೊಲೀಸರ ಕೊರತೆ ಇರುವುದು ಸತ್ಯ. ರಾಜ್ಯದಲ್ಲಿ 59,067 ಮಂಜೂರಾದ ಹುದ್ದೆಗಳಿದ್ದು, 43,296 ಪುರುಷರು, 6,339 ಮಂದಿ ಮಹಿಳಾ ಪೇದೆ ಸೇರಿದಂತೆ 49,635 ಮಂದಿ ಇದ್ದಾರೆ. ಉಳಿದಂತೆ 9,432 ಹುದ್ದೆ ಖಾಲಿಯಿವೆ. 2022-23ನೇ ಸಾಲಿನಲ್ಲಿ 3,484 ಹುದ್ದೆ ಭರ್ತಿಗೆ ಸೆ.12ರಂದು ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನಿಸಲಾಗಿದೆ. ಸದ್ಯದಲ್ಲೇ ಇನ್ನೂ 1,500 ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ರಾಜ್ಯದಲ್ಲಿ ನಮ್ಮ ಸರ್ಕಾರ ಬಂದಾಗ 22,000 ಪೊಲೀಸ್ ಪೇದೆ ಹುದ್ದೆ ಖಾಲಿ ಇತ್ತು. ಇವತ್ತು ಕೇವಲ 9430 ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳು ಖಾಲಿ ಇವೆ. ಈಗಾಗಲೇ 3,500 ಕಾನ್ಸ್ಟೇಬಲ್ ನೇಮಕಾತಿಗೆ ಆದೇಶ ಆಗಿದೆ. ‌ಇನ್ನು 1500 ಜನರ ಸಿವಿಲ್ ಕಾನ್ಸ್ಟೇಬಲ್ ನೇಮಕಾತಿಗೆ ನೋಟಿಫಿಕೇಷನ್ ಮಾಡುತ್ತೇವೆ ಎಂದರು.

ಈ ಸಾಲಿನಲ್ಲಿ ಐದು ಸಾವಿರ ಪೋಸ್ಟ್ ಭರ್ತಿ ಮಾಡುತ್ತೇವೆ. ಇಪ್ಪತ್ತು ವರ್ಷದಲ್ಲಿ ಅತ್ಯಂತ ಕಡಿಮೆ ಹುದ್ದೆ ಖಾಲಿ ಇರುವುದು ಈ ವರ್ಷ ಮಾತ್ರ. ಸಮಾಧಾನಕರ ಸಂಗತಿ. ಕಾನೂನು ಸುವ್ಯವಸ್ಥೆ ನಿಭಾಯಿಸಲು ಪೊಲೀಸರ ಕೊರತೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT