ಸಾಂದರ್ಭಿಕ ಚಿತ್ರ 
ರಾಜ್ಯ

ಜಿಮ್ ಗಳಲ್ಲಿ ಪ್ರೊಟೀನ್ ಪೌಡರ್ ಬಳಕೆ: ತಪ್ಪಿತಸ್ಥರ ವಿರುದ್ಧ ತನಿಖೆಗೆ ಸರ್ಕಾರ ನಿರ್ಧಾರ

ಜಿಮ್‌ಗಳಲ್ಲಿ ಬಾಡಿ ಬಿಲ್ಡಿಂಗ್ ಮಾಡುವವರಿಗೆ ನೀಡುವ ಪ್ರೊಟೀನ್ ಪೌಡರ್ ಅಪಾಯಕಾರಿಯಾಗಿದ್ದು, ಇದನ್ನು ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಶಾಸಕ ಸತೀಶ್ ರೆಡ್ಡಿ ವಿಧಾನಸಭೆಯಲ್ಲಿ ಒತ್ತಾಯಿಸಿದರು.

ಬೆಂಗಳೂರು: ಜಿಮ್‌ಗಳಲ್ಲಿ ಬಾಡಿ ಬಿಲ್ಡಿಂಗ್ ಮಾಡುವವರಿಗೆ ನೀಡುವ ಪ್ರೊಟೀನ್ ಪೌಡರ್ ಅಪಾಯಕಾರಿಯಾಗಿದ್ದು, ಇದನ್ನು ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಶಾಸಕ ಸತೀಶ್ ರೆಡ್ಡಿ ವಿಧಾನಸಭೆಯಲ್ಲಿ ಒತ್ತಾಯಿಸಿದರು.

ಶೂನ್ಯ ವೇಳೆಯಲ್ಲಿ ಈ ವಿಚಾರವನ್ನು ಪ್ರಸ್ತಾಪ ಮಾಡಿದ ಬಿಜೆಪಿ ಶಾಸಕ ಸತೀಶ್ ರೆಡ್ಡಿ, ಜಿಮ್‌ ಗಳಲ್ಲಿ ಬಾಡಿ ಬಿಲ್ಡಿಂಗ್ ಮಾಡಲು ನೀಡುತ್ತಿರುವ ಪ್ರೊಟೀನ್ ಪೌಡರ್ ನಿಂದಾಗಿ ಪ್ರಾಣ ಹಾನಿಯಾಗುತ್ತಿದೆ. ನನ್ನ ಕ್ಷೇತ್ರದ ಯುವಕ ಪೌಡರ್ ಸೇವನೆಯಿಂದ ಸಾವನ್ನಪ್ಪಿದ್ದಾರೆ. ಎರಡು ವರ್ಷದಿಂದ ಲಿವರ್,‌ ಕಿಡ್ನಿ ಡ್ಯಾಮೇಜ್ ಆಗಿ ಸಾವನ್ನಪ್ಪಿದ್ದಾರೆ. ಚಿಕಿತ್ಸೆಗಾಗಿ ಸುಮಾರು 50ಲಕ್ಷ ರು ಹಣ ಖರ್ಚು ಮಾಡಲಾಯಿತು. ಅಕ್ರಮವಾಗಿ ಇದನ್ನು ಮಾರಾಟ ಮಾಡಲಾಗುತ್ತಿದೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.

ಇಂತಹ ಪ್ರೊಟೀನ್ ಪೌಡರ್ ಮಾರಾಟ ನಿಷೇಧ ಮಾಡಬೇಕು ಹಾಗೂ ಮಾರಾಟ ಮಾಡುವವರಿಗೆ ಶಿಕ್ಷೆ ಕೊಡಬೇಕು ಎಂದು ಆಗ್ರಹಿಸಿದರು. ಇದಕ್ಕೆ ಉತ್ತರ ನೀಡಿದ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಜೆಸಿ ಮಾಧುಸ್ವಾಮಿ, 'ಪ್ರೋಟೀನ್ ಫುಡ್ ನಿಂದ ಸಮಸ್ಯೆ ಆದರೆ ಸಮಗ್ರ ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು' ಎಂದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ಡಾ. ಕೆ. ಸುಧಾಕರ್, 'ಫುಡ್ ಸೇಫ್ಟಿ ಇಲಾಖೆಯಿಂದ ಅನಧಿಕೃತವಾಗಿ ಪ್ರೊಟೀನ್ ಪೌಡರ್ ಸೇಲ್ ಮಾಡಿದರೆ ಕ್ರಮ ಕೈಗೊಳ್ಳುತ್ತೇವೆ. ಕೆಲವು ಪ್ರೊಟೀನ್ ಪೌಡರ್ ಒಳ್ಳೆಯ ಗುಣಮಟ್ಟ ಹೊಂದಿವೆ. ಎಫ್ ಎಸ್ ಎಸ್ ಎ ಐ ಅನುಮತಿ ಇಲ್ಲದೆ ಮಾರಾಟ ಮಾಡಿದರೆ ಕ್ರಮ ಕೈಗೊಳ್ಳುತ್ತೇವೆ' ಎಂದು‌ ಭರವಸೆ ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT