ಸಿಎಂ ಬೊಮ್ಮಾಯಿ 
ರಾಜ್ಯ

ಪಂಚಮಸಾಲಿ ಮೀಸಲಾತಿ ವಿಚಾರ: ಸಮಿತಿ ವರದಿ ನಂತರ ನಿರ್ಧಾರ ಎಂದ ಸಿಎಂ ಬೊಮ್ಮಾಯಿ

ರಾಜ್ಯ ಹಿಂದುಳಿದ ವರ್ಗಗಳ ಆಯೋಗ ವರದಿ ಸಲ್ಲಿಸಿದ ನಂತರ ಪಂಚಮಸಾಲಿ ಲಿಂಗಾಯತ ಸಮುದಾಯವನ್ನು 2ಎ ಅಡಿಯಲ್ಲಿ ಸೇರಿಸುವ ಬಗ್ಗೆ ರಾಜ್ಯ ಸರ್ಕಾರ ನಿರ್ಧರಿಸಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗ ವರದಿ ಸಲ್ಲಿಸಿದ ನಂತರ ಪಂಚಮಸಾಲಿ ಲಿಂಗಾಯತ ಸಮುದಾಯವನ್ನು 2ಎ ಅಡಿಯಲ್ಲಿ ಸೇರಿಸುವ ಬಗ್ಗೆ ರಾಜ್ಯ ಸರ್ಕಾರ ನಿರ್ಧರಿಸಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಶೂನ್ಯವೇಳೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪಂಚಮಸಾಲಿ ಲಿಂಗಾಯತವನ್ನು 2ಎಗೆ ಸೇರಿಸುವಂತೆ ಪ್ರಸ್ತಾಪಿಸಿದರು. ಮಠಾಧೀಶರು ಮತ್ತು ಇತರರು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದರೂ, 2A ಅಡಿಯಲ್ಲಿ ಸಮುದಾಯವನ್ನು ಸೇರಿಸದಿದ್ದಕ್ಕಾಗಿ ಅವರು ತಮ್ಮದೇ ಸರ್ಕಾರವನ್ನು ದೂಷಿಸಿದರು.

ಅವರಿಗೆ ಉತ್ತರಿಸಿದ ಬೊಮ್ಮಾಯಿ, ಮೀಸಲಾತಿ ನೀಡಬೇಕಿದ್ದರೆ ಅಥವಾ ಹೆಚ್ಚಿಸಬೇಕಿದ್ದರೆ ಅದನ್ನು ಕಾನೂನಿನ ಚೌಕಟ್ಟಿನಲ್ಲಿ ಮಾಡಬೇಕು. ಪ್ರಸ್ತುತ, ಆಯೋಗವು OBC ಗಳ ವರ್ಗ 2A ಅಡಿಯಲ್ಲಿ ಪರಿಗಣಿಸಬೇಕಾದ ಸಮುದಾಯದ ಬೇಡಿಕೆಯ ಪ್ರಾಯೋಗಿಕ ಡೇಟಾವನ್ನು ಸಂಗ್ರಹಿಸುತ್ತಿದೆ. ನ್ಯಾಯಾಲಯ ಕೂಡ ಒಟ್ಟು ಮೀಸಲಾತಿಯನ್ನು ಶೇಕಡಾ 50 ಮೀರಬಾರದು ಎಂದು ಒತ್ತಾಯಿಸುತ್ತದೆ. ಕರ್ನಾಟಕದಲ್ಲಿ ಈಗಾಗಲೇ ಶೇ.50 ಆಗಿದೆ ಎಂದರು. 

2ಎ ಅಡಿಯಲ್ಲಿ ಅನೇಕ ಸಮುದಾಯಗಳು ಎಸ್‌ಟಿ ಸ್ಥಾನಮಾನಕ್ಕೆ ಒತ್ತಾಯಿಸುತ್ತಿವೆ, ಕೆಲವರು ಎಸ್‌ಸಿಗೆ ಒತ್ತಾಯಿಸುತ್ತಿದ್ದಾರೆ, ಆದರೆ ಅನೇಕರು 2ಎಗೆ ಒತ್ತಾಯಿಸುತ್ತಿದ್ದಾರೆ. ಮೀಸಲಾತಿ ಮೂಲಕ ಅವರನ್ನು ಮುಂದೆ ತರಲು ಸಂವಿಧಾನದಡಿ ಅವಕಾಶವಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT