ಸಾಂದರ್ಭಿಕ ಚಿತ್ರ 
ರಾಜ್ಯ

ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಪರಿಣಾಮ: ಚಾಮರಾಜನಗರದಲ್ಲಿ ಮಗು ಮಾರಾಟ ಮಾಡಿದ ನಾಲ್ವರ ಬಂಧನ

ಚಾಮರಾಜನಗರದಲ್ಲಿ ಮಗು ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದು, ಮಂಡ್ಯದ ಕುಟುಂಬವೊಂದರಿಂದ ಮಗುವನ್ನು ರಕ್ಷಿಸುವ ಪ್ರಯತ್ನವನ್ನು ಪೊಲೀಸರು ತೀವ್ರಗೊಳಿಸಿದ್ದಾರೆ.

ಮೈಸೂರು: ಚಾಮರಾಜನಗರದಲ್ಲಿ ಮಗು ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದು, ಮಂಡ್ಯದ ಕುಟುಂಬವೊಂದರಿಂದ ಮಗುವನ್ನು ರಕ್ಷಿಸುವ ಪ್ರಯತ್ನವನ್ನು ಪೊಲೀಸರು ತೀವ್ರಗೊಳಿಸಿದ್ದಾರೆ.

ಮಂಗಳವಾರ, TNIE ಮತ್ತು kannadaprabha.com ನಲ್ಲಿ ಮೈಸೂರು ವಿಶ್ವವಿದ್ಯಾಲಯದ ತೃತೀಯಲಿಂಗಿ ಸಂಶೋಧನಾ ವಿದ್ಯಾರ್ಥಿಯೊಬ್ಬರು ಚಾಮರಾಜನಗರದಲ್ಲಿ ಮಗುವನ್ನು ಮಾರಾಟ ಮಾಡಿದ ಘಟನೆಯನ್ನು ಬಹಿರಂಗಪಡಿಸಿದ್ದಾರೆ ಎನ್ನುವ ವಿಸ್ತೃತ ವರದಿ ಪ್ರಕಟವಾಗಿತ್ತು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮಕ್ಕಳ ರಕ್ಷಣಾಧಿಕಾರಿ, ಮಕ್ಕಳ ಕಲ್ಯಾಣ ಸಮಿತಿ ಸದಸ್ಯರು, ಪೊಲೀಸರು ಹಾಗೂ ಇತರರ ಜತೆಗೂಡಿ ಮಗುವನ್ನು ಮಾರಾಟ ಮಾಡಿದ ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಮಾತನಾಡಿದರು.

ಹೋಟೆಲ್ ಸಿಬ್ಬಂದಿಯಾಗಿದ್ದ ಪತಿ ಬಸವ ಸಾಲ ತೀರಿಸಲು ಮಗುವನ್ನು ಮಾರಾಟ ಮಾಡಿರುವುದಾಗಿ ಹೃದ್ರೋಗಿಯಾಗಿರುವ ಮಗುವಿನ ತಾಯಿ ನಾಗವೇಣಿ ತಿಳಿಸಿದ್ದು, ಇದೀಗ ಮಗುವನ್ನು ವಾಪಸ್ ಪಡೆಯಬೇಕು ಎಂದಿದ್ದಾರೆ. ಈ ಸಂಬಂಧ ಅಧಿಕಾರಿಗಳು ಬಸವನನ್ನು ಮತ್ತು ಚಾಮರಾಜನಗರ ಪಟ್ಟಣದ ಗಾಳಿಪುರದ ನಾಲ್ವರು ಮಧ್ಯವರ್ತಿಗಳನ್ನು ವಶಕ್ಕೆ ಪಡೆದಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಗೀತಾಲಕ್ಷ್ಮಿ ಮಾತನಾಡಿ, ಮಗುವನ್ನು ರಕ್ಷಿಸುವುದು ತಮ್ಮ ಆದ್ಯತೆಯಾಗಿದೆ. ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಗವೇಣಿ ಅವರು ಪುನರ್ವಸತಿ ಕೇಂದ್ರದಲ್ಲಿ ಇರಲು ನಿರಾಕರಿಸಿದ್ದರಿಂದ ಸಂಬಂಧಿಕರ ಮನೆಗೆ ಕಳುಹಿಸಲಾಗಿದೆ. ಸಂಶೋಧನಾ ವಿದ್ಯಾರ್ಥಿ ದೀಪಾ ಬುದ್ಧೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು TNIE ಗೆ ತಿಳಿಸಿದ್ದಾರೆ.

ನಾವಿಬ್ಬರೂ ಅನಾಥರಾಗಿದ್ದು, ಜೀವನೋಪಾಯಕ್ಕೆ ಸದ್ಯ ಏನೂ ಕೊರತೆ ಇಲ್ಲ. ಪತಿಯನ್ನು ಬಂಧಿಸಬೇಡಿ ಎಂದು ನಾಗವೇಣಿ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT