ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಪಡೆದ ಲಂಚದ ಹಣವನ್ನು ಹಿಂತಿರುಗಿಸುವ ವೇಳೆ ಪೊಲೀಸರಿಂದ ಕೆಎಎಸ್ ಅಧಿಕಾರಿ ಬಂಧನ

ಲಂಚ ಪಡೆಯುವಾಗ ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಬಂಧಿಸುವುದು ವಾಡಿಕೆ. ಆದರೆ ಇಲ್ಲೊಂದು ವಿಭಿನ್ನ ಪ್ರಕರಣದಲ್ಲಿ ಪಡೆದ ಲಂಚದ ಹಣವನ್ನು ವಾಪಸ್ ನೀಡುವ ವೇಳೆ ಕೆ ಎಎಸ್ ಅಧಿಕಾರಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಲಂಚ ಪಡೆಯುವಾಗ ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಬಂಧಿಸುವುದು ವಾಡಿಕೆ. ಆದರೆ ಇಲ್ಲೊಂದು ವಿಭಿನ್ನ ಪ್ರಕರಣದಲ್ಲಿ ಪಡೆದ ಲಂಚದ ಹಣವನ್ನು ವಾಪಸ್ ನೀಡುವ ವೇಳೆ ಕೆ ಎಎಸ್ ಅಧಿಕಾರಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ವ್ಯಕ್ತಿಯೊಬ್ಬರ ಜಮೀನು ಭೂಸ್ವಾಧೀನಗೊಂಡಿಲ್ಲ ಎಂದು ಎನ್ ಒ ಸಿ ಪತ್ರ ನೀಡಲು  2.5 ಲಕ್ಷ ರು ಹಣ ಲಂಚ ಪಡೆದು, ಈ ಬಗ್ಗೆ ದೂರು ದಾಖಲಾದ ಬಳಿಕ ಲಂಚದ ಹಣವನ್ನು ಮರಳಿಸುತ್ತಿದ್ದ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ವಿಶೇಷ ಭೂಸ್ವಾಧೀನಾಧಿಕಾರಿ ಮತ್ತು ಭೂಮಾಪಕರನ್ನು ಲೋಕಾಯುಕ್ತ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಕೆಐಎಡಿಬಿ ವಿಶೇಷ ಭೂಸ್ವಾಧೀನಾಧಿಕಾರಿ–2 ಹುದ್ದೆಯಲ್ಲಿದ್ದ ಕೆಎಎಸ್‌ ಅಧಿಕಾರಿ ಎ.ಬಿ. ವಿಜಯಕುಮಾರ್‌ ಮತ್ತು ಅವರ ಕಚೇರಿಯ ಭೂಮಾಪಕ ರಘುನಾಥ್‌ ಬಂಧಿತರು. ಮೊದಲ ಆರೋಪಿ ಎಬಿ ವಿಜಯಕುಮಾರ್, ವಿಶೇಷ ಭೂಸ್ವಾಧೀನ ಅಧಿಕಾರಿ ಮತ್ತು ಎರಡನೇ ಆರೋಪಿ ರಘುನಾಥ್, ಭೂಮಾಪಕ. ದೂರುದಾರ ಭಗತ್ ಸಿಂಗ್ ಅರುಣ್ ಅವರಿಗೆ ಎನ್‌ಒಸಿ ನೀಡಲು ಅಧಿಕಾರಿಗಳು 2.50 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ನಂತರ 2.50 ಲಕ್ಷ ಲಂಚ ಪಡೆದು ಎನ್‌ಒಸಿ ನೀಡಿದ್ದರು.

ಈ ಸಂಬಂಧ ಅರ್ಜಿದಾರರು ಕೆಐಎಡಿಬಿ ಉಪ ಆಯುಕ್ತರಿಗೆ ದೂರು ನೀಡಿದ್ದರು. ಹಿರಿಯ ಅಧಿಕಾರಿಗಳು ತನಿಖೆ ಆರಂಭಿಸುತ್ತಿದ್ದಂತೆ ದೂರುದಾರರನ್ನು ಸಂಪರ್ಕಿಸಿದ್ದ ಆರೋಪಿಗಳು, ದೂರನ್ನು ಹಿಂಪಡೆದರೆ  2.5 ಲಕ್ಷದೊಂದಿಗೆ 50,000  ರು. ಸೇರಿಸಿ ವಾಪಸ್‌ ನೀಡುವುದಾಗಿ ಆಮಿಷ ಒಡ್ಡಿದ್ದರು.  ದೂರುದಾರರಿಗೆ ಹಣ ವಾಪಸ್‌ ನೀಡುತ್ತಿದ್ದಾಗ ಇಬ್ಬರನ್ನೂ ಬಂಧಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT