ಪ್ಲಾಸ್ಟಿಕ್ ತಿಂದ ಆನೆ 
ರಾಜ್ಯ

ವೈರಲ್ ವಿಡಿಯೋ: ಪ್ರವಾಸಿಗರ ಹೊಣೆಗೇಡಿತನ: ಆಹಾರವೆಂದು ಪ್ಲಾಸ್ಟಿಕ್ ತಿಂದ ಆನೆ!!

ಪ್ರವಾಸಿಗರ ಹೊಣೆಗೇಡಿತನದಿಂದಾಗಿ ಕಾಡಾನೆಯೊಂದು ಪ್ಲಾಸ್ಟಿಕ್ ಕವರ್ ಅನ್ನು ಆಹಾರವೆಂದು ತಿಳಿದು ತಿಂದ ಘಟನೆ ನಡೆದಿದೆ.

ಮೈಸೂರು: ಪ್ರವಾಸಿಗರ ಹೊಣೆಗೇಡಿತನದಿಂದಾಗಿ ಕಾಡಾನೆಯೊಂದು ಪ್ಲಾಸ್ಟಿಕ್ ಕವರ್ ಅನ್ನು ಆಹಾರವೆಂದು ತಿಳಿದು ತಿಂದ ಘಟನೆ ನಡೆದಿದೆ.

ಅಭಯಾರಣ್ಯಕ್ಕೆ ಭೇಟಿ ನೀಡಿದ್ದ ಪ್ರವಾಸಿಗರು ನಿಷೇಧಿತ ಪ್ಲಾಸ್ಟಿಕ್ ಕವರ್ ಅನ್ನು ಆನೆ ಬಳಿ ಎಸೆದುಹೋಗಿದ್ದಾರೆ. ಅದೇ ಪ್ಲಾಸ್ಟಿಕ್ ಅನ್ನು ಸೊಂಡಿಲಿನಿಂದ ತೆಗೆದುಕೊಂಡ ಆನೆ ಕೆಲ ಹೊತ್ತು ಅದನ್ನು ಮುದುರಿ ಬಳಿಕ ಬಾಯಿಗೆ ಹಾಕಿಕೊಂಡಿದೆ.

ಆನೆ ಆ ಪ್ಲಾಸ್ಟಿಕ್ ಅನ್ನು ತಿಂದು ಹಾಕಿತೇ ಅಥವಾ ಅಧನ್ನು ಉಗುಳಿತೆ ಎಂಬುದು ತಿಳಿದಿಲ್ಲವಾದರೂ ಒಂದು ವೇಳೆ ಅದನ್ನು ಆನೆ ತಿಂದಿದ್ದೇ ಆದರೆ ಅದರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ಪ್ರಾಣಿ ಪ್ರಿಯರು ಆತಂಕ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಅಭಯಾರಣ್ಯಗಳಿಗೆ ಭೇಟಿ ನೀಡುವ ಪ್ರವಾಸಿಗರು ಇಂತಹ ಕೃತ್ಯಗಳಲ್ಲಿ ಭಾಗಿಯಾಗಬಾರದು. ಪ್ಲಾಸ್ಟಿಕ್ ತ್ಯಾಜ್ಯವನ್ನು ಸೂಚಿಸಲಾದ ಕಸದ ಡಬ್ಬಿಗಳಲ್ಲೇ ಹಾಕಬೇಕು ಎಂದು ಮನವಿ ಮಾಡಿದ್ದಾರೆ.

ವಿಡಿಯೋ ಬಂಡೀಪುರದಲ್ಲ.. ತಮಿಳುನಾಡಿನ ಮದುಮಲೈನದ್ದು: ಅಧಿಕಾರಿಗಳ ಸ್ಪಷ್ಟನೆ
ಇನ್ನು ಆನೆ ಪ್ಲಾಸ್ಟಿಕ್ ತಿಂದ ವಿಡಿಯೋ ಬಂಡೀಪುರದಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದು, ಇದು ತಮಿಳುನಾಡಿನಲ್ಲಿ ಸೆರೆ ಹಿಡಿಯಲಾದ ವಿಡಿಯೋ ಎನ್ನಲಾಗಿದೆ. ದೃಶ್ಯವನ್ನು ಸೆರೆ ಹಿಡಿದವರು ತಮಿಳು‌ ಭಾಷೆಯಲ್ಲಿ ಮಾತನಾಡುವುದು ವಿಡಿಯೊದಲ್ಲಿ ಸ್ಪಷ್ಟವಾಗಿ ಕೇಳಿಸುತ್ತಿದೆ.  ಈ ಬಗ್ಗೆ ಪ್ರತಿಕ್ರಿಯಿಸಿದ ಬಂಡೀಪುರ ಹುಲಿಸಂರಕ್ಷಿತ ಪ್ರದೇಶದ ನಿರ್ದೇಶಕ ಡಾ.ರಮೇಶ್ ಕುಮಾರ್, 'ಎರಡು ದಿನಗಳ ಹಿಂದೆಯೇ ಈ ವಿಡಿಯೊ ನೋಡಿದ್ದೇನೆ. ಇದು ನಮ್ಮ ಬಂಡೀಪುರದ್ದಲ್ಲ. ನೆರೆಯ ಮಧುಮಲೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ' ಎಂದು ಹೇಳಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ