ಪ್ಲಾಸ್ಟಿಕ್ ತಿಂದ ಆನೆ 
ರಾಜ್ಯ

ವೈರಲ್ ವಿಡಿಯೋ: ಪ್ರವಾಸಿಗರ ಹೊಣೆಗೇಡಿತನ: ಆಹಾರವೆಂದು ಪ್ಲಾಸ್ಟಿಕ್ ತಿಂದ ಆನೆ!!

ಪ್ರವಾಸಿಗರ ಹೊಣೆಗೇಡಿತನದಿಂದಾಗಿ ಕಾಡಾನೆಯೊಂದು ಪ್ಲಾಸ್ಟಿಕ್ ಕವರ್ ಅನ್ನು ಆಹಾರವೆಂದು ತಿಳಿದು ತಿಂದ ಘಟನೆ ನಡೆದಿದೆ.

ಮೈಸೂರು: ಪ್ರವಾಸಿಗರ ಹೊಣೆಗೇಡಿತನದಿಂದಾಗಿ ಕಾಡಾನೆಯೊಂದು ಪ್ಲಾಸ್ಟಿಕ್ ಕವರ್ ಅನ್ನು ಆಹಾರವೆಂದು ತಿಳಿದು ತಿಂದ ಘಟನೆ ನಡೆದಿದೆ.

ಅಭಯಾರಣ್ಯಕ್ಕೆ ಭೇಟಿ ನೀಡಿದ್ದ ಪ್ರವಾಸಿಗರು ನಿಷೇಧಿತ ಪ್ಲಾಸ್ಟಿಕ್ ಕವರ್ ಅನ್ನು ಆನೆ ಬಳಿ ಎಸೆದುಹೋಗಿದ್ದಾರೆ. ಅದೇ ಪ್ಲಾಸ್ಟಿಕ್ ಅನ್ನು ಸೊಂಡಿಲಿನಿಂದ ತೆಗೆದುಕೊಂಡ ಆನೆ ಕೆಲ ಹೊತ್ತು ಅದನ್ನು ಮುದುರಿ ಬಳಿಕ ಬಾಯಿಗೆ ಹಾಕಿಕೊಂಡಿದೆ.

ಆನೆ ಆ ಪ್ಲಾಸ್ಟಿಕ್ ಅನ್ನು ತಿಂದು ಹಾಕಿತೇ ಅಥವಾ ಅಧನ್ನು ಉಗುಳಿತೆ ಎಂಬುದು ತಿಳಿದಿಲ್ಲವಾದರೂ ಒಂದು ವೇಳೆ ಅದನ್ನು ಆನೆ ತಿಂದಿದ್ದೇ ಆದರೆ ಅದರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ಪ್ರಾಣಿ ಪ್ರಿಯರು ಆತಂಕ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಅಭಯಾರಣ್ಯಗಳಿಗೆ ಭೇಟಿ ನೀಡುವ ಪ್ರವಾಸಿಗರು ಇಂತಹ ಕೃತ್ಯಗಳಲ್ಲಿ ಭಾಗಿಯಾಗಬಾರದು. ಪ್ಲಾಸ್ಟಿಕ್ ತ್ಯಾಜ್ಯವನ್ನು ಸೂಚಿಸಲಾದ ಕಸದ ಡಬ್ಬಿಗಳಲ್ಲೇ ಹಾಕಬೇಕು ಎಂದು ಮನವಿ ಮಾಡಿದ್ದಾರೆ.

ವಿಡಿಯೋ ಬಂಡೀಪುರದಲ್ಲ.. ತಮಿಳುನಾಡಿನ ಮದುಮಲೈನದ್ದು: ಅಧಿಕಾರಿಗಳ ಸ್ಪಷ್ಟನೆ
ಇನ್ನು ಆನೆ ಪ್ಲಾಸ್ಟಿಕ್ ತಿಂದ ವಿಡಿಯೋ ಬಂಡೀಪುರದಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದು, ಇದು ತಮಿಳುನಾಡಿನಲ್ಲಿ ಸೆರೆ ಹಿಡಿಯಲಾದ ವಿಡಿಯೋ ಎನ್ನಲಾಗಿದೆ. ದೃಶ್ಯವನ್ನು ಸೆರೆ ಹಿಡಿದವರು ತಮಿಳು‌ ಭಾಷೆಯಲ್ಲಿ ಮಾತನಾಡುವುದು ವಿಡಿಯೊದಲ್ಲಿ ಸ್ಪಷ್ಟವಾಗಿ ಕೇಳಿಸುತ್ತಿದೆ.  ಈ ಬಗ್ಗೆ ಪ್ರತಿಕ್ರಿಯಿಸಿದ ಬಂಡೀಪುರ ಹುಲಿಸಂರಕ್ಷಿತ ಪ್ರದೇಶದ ನಿರ್ದೇಶಕ ಡಾ.ರಮೇಶ್ ಕುಮಾರ್, 'ಎರಡು ದಿನಗಳ ಹಿಂದೆಯೇ ಈ ವಿಡಿಯೊ ನೋಡಿದ್ದೇನೆ. ಇದು ನಮ್ಮ ಬಂಡೀಪುರದ್ದಲ್ಲ. ನೆರೆಯ ಮಧುಮಲೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ' ಎಂದು ಹೇಳಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT