ಅನ್ವರ್ ಮಾಣಿಪ್ಪಾಡಿ 
ರಾಜ್ಯ

ಅನ್ವರ್ ಮಾಣಿಪ್ಪಾಡಿ ವರದಿ ಮಂಡನೆ: ವಿಧಾನ ಪರಿಷತ್ ನಲ್ಲಿ ಗದ್ದಲ-ಕೋಲಾಹಲ

10 ವರ್ಷಗಳಿಂದ ಮೂಲೆ ಸೇರಿದ್ದ ವಕ್ಫ್ ಆಸ್ತಿ ಕಬಳಿಕೆ ಕುರಿತು ಅನ್ವರ್ ಮಾಣಿಪ್ಪಾಡಿ ವರದಿಯನ್ನು ವಿಧಾನ ಪರಿಷತ್​ನಲ್ಲಿ ಮಂಡಿಸಲಾಯಿತು. ಈ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ನಡುವೆ ವಾಗ್ವಾದ ನಡೆದು ಸದನದಲ್ಲಿ ಗದ್ದಲ ಉಂಟಾಯಿತು.

ಬೆಂಗಳೂರು: 10 ವರ್ಷಗಳಿಂದ ಮೂಲೆ ಸೇರಿದ್ದ ವಕ್ಫ್ ಆಸ್ತಿ ಕಬಳಿಕೆ ಕುರಿತು ಅನ್ವರ್ ಮಾಣಿಪ್ಪಾಡಿ ವರದಿಯನ್ನು ವಿಧಾನ ಪರಿಷತ್​ನಲ್ಲಿ ಮಂಡಿಸಲಾಯಿತು. ಈ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಸದಸ್ಯರ ನಡುವೆ ವಾಗ್ವಾದ ನಡೆದು ಸದನದಲ್ಲಿ ಗದ್ದಲ ಉಂಟಾಯಿತು.

ವಕ್ಫ್ ಆಸ್ತಿಯಲ್ಲಿನ ಅಕ್ರಮಗಳ ಕುರಿತು ಅನ್ವರ್ ಮಾಣಿಪ್ಪಾಡಿ ವರದಿಯನ್ನು ಸರ್ಕಾರ ಮಂಡಿಸಿದ ರೀತಿಗೆ ಆಕ್ಷೇಪ ವ್ಯಕ್ತಪಡಿಸಿದ ಪ್ರತಿಪಕ್ಷಗಳು, ವರದಿಯನ್ನು ಮಂಡಿಸುವ ಮೊದಲು ಅದರ ವಿಷಯಗಳನ್ನು ರಹಸ್ಯವಾಗಿಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದೆ. ಪರಿಷತ್ತಿನಲ್ಲಿ ಖಜಾನೆ ಮತ್ತು ವಿರೋಧ ಪಕ್ಷದ ಪೀಠಗಳು ಫಲಕಗಳನ್ನು ಪ್ರದರ್ಶಿಸಿ ಬಾವಿಗೆ ಪ್ರವೇಶಿಸಿದವು.

ಈ ವೇಳೆ ಮಾತನಾಡಿದ ಬಿಜೆಪಿ ಸದಸ್ಯ ರವಿಕುಮಾರ್, ವರದಿಯಲ್ಲಿ ಜಮೀರ್ ಅಹಮದ್,‌ ಖಮರುಲ್ ಇಸ್ಲಾಂ, ನಜೀರ್ ಅಹಮದ್ ಇತ್ಯಾದಿ ಕಾಂಗ್ರೆಸ್ ನಾಯಕರ ಹೆಸರಿದೆ. ಈ ಬಗ್ಗೆ ಚರ್ಚೆಯಾಗಬೇಕು ಎಂದರು. ಇದಕ್ಕೆ ಕಿಡಿಕಾರಿದ ಪ್ರತಿಪಕ್ಷ ನಾಯಕ ಬಿಕೆ ಹರಿಪ್ರಸಾದ್, ಚರ್ಚೆಗೆ ಅವಕಾಶ ನೀಡಿ ಎಲ್ಲವನ್ನೂ ಚರ್ಚೆ ಮಾಡೋಣ ಎಂದರು.

ವಿಧಾನ ಪರಿಷತ್​ನಲ್ಲಿ ಧನವಿನಿಯೋಗ ವಿಧೇಯಕಕ್ಕೆ ಅಂಗೀಕಾರ ಸಿಕ್ಕ ನಂತರ ಸಭಾನಾಯಕ ಕೋಟಾ ಶ್ರೀನಿವಾಸ ಪೂಜಾರಿ, ಅನ್ವರ್ ಮಾಣಿಪ್ಪಾಡಿ ವರದಿ ಮಂಡನೆ ಮಾಡಿದರು. 29 ಸಾವಿರ ಎಕರೆ ವಕ್ಫ್ ಆಸ್ತಿ ಕಬಳಿಕೆ ಆಗಿದೆ. 2-3 ಲಕ್ಷ ಕೋಟಿ ಮೌಲ್ಯದ ಹಗರಣ ನಡೆದಿದೆ ಎಂದು ಹೇಳಲಾಗಿತ್ತು. ಹಾಗಾಗಿ 2012ರಲ್ಲಿ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಸಿದ್ದಪಡಿಸಿದ್ದ ವರದಿಯನ್ನು ಸದನದ ಮೂಲಕ ಸಾರ್ವಜನಿಕರಿಗೆ ಬಿಡುಗಡೆ ಮಾಡಲಾಗುತ್ತಿದೆ ಎಂದರು.

ಇದಕ್ಕೆ ದನಿಗೂಡಿಸಿದ ಕಾಂಗ್ರೆಸ್ ಸದಸ್ಯರು ಬೇಕಿದ್ದರೆ ಇಡಿ, ಸಿಬಿಐ ತನಿಖೆಗೆ ಕೊಡಿ ಎಂದು ಸವಾಲು ಹಾಕಿದರು. ಈ ವೇಳೆ ಸದನದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು. ಗದ್ದಲದ ವಾತಾವರಣ ಸೃಷ್ಟಿಯಾಯಿತು ನಂತರ ಸಭಾಪತಿಗಳು ಕಲಾಪವನ್ನು ನಾಳೆ ಬೆಳಗ್ಗೆ 11 ಗಂಟೆಗೆ ಮುಂದೂಡಿಕೆ ಮಾಡಲಾಯಿತು.

ಜೆಡಿಎಸ್ ಎಲ್‌ಪಿ ಮುಖಂಡ ಎಸ್‌ಎಲ್‌ ಭೋಜೇಗೌಡ ವರದಿಯನ್ನು ಒಪ್ಪಿಕೊಂಡಿದ್ದಾರೆ, ಆದರೆ ಸರ್ಕಾರವು ಅದರ ವಿಷಯಗಳನ್ನು ರಹಸ್ಯವಾಗಿಡಲು ವಿಫಲವಾಗಿದೆ ಎಂದು ಹೇಳಿದರು. ಪ್ರಶ್ನೋತ್ತರ ಕಲಾಪಕ್ಕೆ ಮುನ್ನ ಯಾವುದೇ ಚರ್ಚೆಗೆ ಅವಕಾಶ ನೀಡುವುದಿಲ್ಲ ಎಂದು ಪ್ರೊಟೆಂ ಅಧ್ಯಕ್ಷ ರಘುನಾಥ ರಾವ್ ಮಲ್ಕಾಪುರೆ ತಿಳಿಸಿದ್ದಾರೆ. ನಂತರ ಮತ್ತೆ ಹರಿಪ್ರಸಾದ್ ವಿಷಯ ಪ್ರಸ್ತಾಪಿಸಿದರು. ಮಲ್ಕಾಪುರೆ ಅವರು ಪ್ರತಿ ಸದಸ್ಯರಿಗೆ ಪ್ರತಿಯನ್ನು ವಿತರಿಸಲು ಸರ್ಕಾರಕ್ಕೆ ಸೂಚಿಸಿದರು.

ಅಧ್ಯಕ್ಷರು ವಿಧೇಯಕಗಳನ್ನು ಕೈಗೆತ್ತಿಕೊಳ್ಳಲು ಮುಂದಾದಾಗ, ಪ್ರತಿಪಕ್ಷಗಳು 40% ಕಮಿಷನ್ ಆರೋಪದ ಮೇಲೆ ಚರ್ಚೆಗೆ ಒತ್ತಾಯಿಸಿದವು, ಇದು ಕೋಲಾಹಲಕ್ಕೆ ಕಾರಣವಾಯಿತು. ಕಾಂಗ್ರೆಸ್ ಸದಸ್ಯರು ಸರ್ಕಾರದ ವಿರುದ್ಧ ಭಿತ್ತಿಪತ್ರಗಳನ್ನು ಹಿಡಿದುಕೊಂಡು ಸದನದ ಬಾವಿಗೆ ನುಗ್ಗಿ ಜೆಡಿಎಸ್ ಸದಸ್ಯರು ದನಿಗೂಡಿಸಿದರೆ, ಬಿಜೆಪಿ ಸದಸ್ಯರು ಕೂಡ ಕಾಂಗ್ರೆಸ್ ವಿರುದ್ಧ ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು. ಗೊಂದಲದ ನಡುವೆಯೇ ನಾಲ್ಕು ವಿಧೇಯಕಗಳನ್ನು ಅಂಗೀಕರಿಸಲಾಯಿತು. ವಿಧೇಯಕಗಳು ಅಂಗೀಕಾರವಾಗುತ್ತಿದ್ದಂತೆ ಬಿಜೆಪಿ ಸದಸ್ಯರು ಕೂಡ ಪ್ರತಿಭಟನೆ ನಡೆಸಿ ಸಭಾಪತಿಯವರು ಸದನವನ್ನು ಮುಂದೂಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

ಕ್ಷಿಪಣಿ ದಾಳಿ ಆರೋಪ: Iranಗೆ UAE ಶಾಕ್, ಎಲ್ಲಾ ವ್ಯಾಪಾರ-ವಾಣಿಜ್ಯ ವಹಿವಾಟು ಸಂಪೂರ್ಣ ಸ್ಥಗಿತ..!

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್'ಗೆ VIP ಟ್ರೀಟ್‌ಮೆಂಟ್?: ಕಾನೂನಿನ ಮುಂದೆ ಎಲ್ಲರೂ ಒಂದೇ, ಜೈಲಿನಲ್ಲಿ ಯಾರಿಗೂ ವಿಶೇಷ ಸೌಲಭ್ಯವಿಲ್ಲ; ಸರ್ಕಾರ ಸ್ಪಷ್ಟನೆ