ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯ ಪಠ್ಯಕ್ರಮದಿಂದ ಏಳು ಸಾಹಿತಿಗಳ ಪಾಠಗಳನ್ನು ಕೈಬಿಡುವಂತೆ ಆದೇಶ: ಮುಂದಿನ ಶೈಕ್ಷಣಿಕ ವರ್ಷದಿಂದ ಜಾರಿ

6, 9 ಮತ್ತು 10ನೇ ತರಗತಿಯ ಕನ್ನಡ ಪಠ್ಯಪುಸ್ತಕಗಳ ಪಠ್ಯಕ್ರಮದಿಂದ ಏಳು ಸಾಹಿತಿಗಳು/ವಿದ್ವಾಂಸರ ಪಾಠಗಳನ್ನು ಕೈಬಿಡುವಂತೆ ಕರ್ನಾಟಕ ಪಠ್ಯಪುಸ್ತಕ ಸೊಸೈಟಿ (KTS) ವ್ಯವಸ್ಥಾಪಕ ನಿರ್ದೇಶಕ ಮಾದೇಗೌಡ ಎಂಪಿ ಆದೇಶ ಹೊರಡಿಸಿ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಿಗೆ ಸುತ್ತೋಲೆ ಹೊರಡಿಸಿದ್ದಾರೆ.

ಬೆಂಗಳೂರು: 6, 9 ಮತ್ತು 10ನೇ ತರಗತಿಯ ಕನ್ನಡ ಪಠ್ಯಪುಸ್ತಕಗಳ ಪಠ್ಯಕ್ರಮದಿಂದ ಏಳು ಸಾಹಿತಿಗಳು/ವಿದ್ವಾಂಸರ ಪಾಠಗಳನ್ನು ಕೈಬಿಡುವಂತೆ ಕರ್ನಾಟಕ ಪಠ್ಯಪುಸ್ತಕ ಸೊಸೈಟಿ (KTS) ವ್ಯವಸ್ಥಾಪಕ ನಿರ್ದೇಶಕ ಮಾದೇಗೌಡ ಎಂಪಿ ಆದೇಶ ಹೊರಡಿಸಿ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಿಗೆ ಸುತ್ತೋಲೆ ಹೊರಡಿಸಿದ್ದಾರೆ. ಈ ಸಾಹಿತಿಗಳು ತಮ್ಮ ಪಾಠಗಳನ್ನು ಪ್ರಕಟಿಸಲು ನೀಡಿರುವ ಅನುಮತಿಯನ್ನು ಹಿಂತೆಗೆದುಕೊಂಡು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದ ಕಾರಣ ಮುಂದಿನ ಶೈಕ್ಷಣಿಕ ವರ್ಷದಿಂದ ಅವರ ಪಾಠಗಳನ್ನು ಪಠ್ಯದಿಂದ ಕೈಬಿಡಲಾಗಿದೆ.

10ನೇ ತರಗತಿಯ ಕನ್ನಡ ಪ್ರಥಮ ಭಾಷೆಯ ಪಠ್ಯಪುಸ್ತಕದಿಂದ ದೇವನೂರು ಮಹಾದೇವ ಅವರ “ಎದೆಗೆ ಬಿದ್ದ ಅಕ್ಷರ” ಪಾಠವನ್ನು ಕೈಬಿಡುವಂತೆ ಆದೇಶ ನೀಡಲಾಗಿದೆ. ಡಾ ಜಿ ರಾಮಕೃಷ್ಣ ಅವರು ಬರೆದಿರುವ 10 ನೇ ತರಗತಿಯ ಪ್ರಥಮ ಭಾಷೆಯ ಕನ್ನಡ ಪಠ್ಯಪುಸ್ತಕದಿಂದ "ಭಗತ್ ಸಿಂಗ್" ಪಾಠ; ರೂಪ ಹಾಸನ ಅವರು ಬರೆದಿರುವ 9 ನೇ ತರಗತಿಯ ತೃತೀಯ ಭಾಷೆಯ ಪಠ್ಯಪುಸ್ತಕದಿಂದ "ಅಮ್ಮನಾಗುವೆಂದರೆ" ಕವಿತೆ.

ಈರಪ್ಪ ಎಂ ಕಂಬಳಿ ಅವರ 10ನೇ ತರಗತಿಯ ತೃತೀಯ ಭಾಷೆಯ ಪಠ್ಯಪುಸ್ತಕದಿಂದ “ಹೀಗೊಂದು ಉನ್ನತ ಪ್ರಯಾಣ” ಪಾಠ; ಸತೀಶ್ ಕುಲಕರ್ಣಿ ಅವರ 10 ನೇ ತರಗತಿಯ ತೃತೀಯ ಭಾಷೆಯ ಪಠ್ಯಪುಸ್ತಕದಿಂದ “ಕಟ್ಟತೇವ ನಾವು” ಕವಿತೆ; ಸುಕನ್ಯಾ ಮಾರುತಿಯವರ 10ನೇ ತರಗತಿಯ ದ್ವಿತೀಯ ಭಾಷೆಯ ಪಠ್ಯಪುಸ್ತಕದಿಂದ “ಎನಿ” ಕವಿತೆ; ದೊಡ್ಡ ಹುಲ್ಲೂರು ರುಕ್ಕೋಜಿ ರಾವ್ ಅವರ 6 ನೇ ತರಗತಿಯ ಪ್ರಥಮ ಭಾಷಾ ಪಠ್ಯಪುಸ್ತಕದಿಂದ "ಡಾ ರಾಜ್‌ಕುಮಾರ್" ಪಾಠವನ್ನು ಕೈಬಿಡುವಂತೆ ಕರ್ನಾಟಕ ಪಠ್ಯಪುಸ್ತಕ ಸೊಸೈಟಿ ಆದೇಶ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT