ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 211 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,63,638ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಒಬ್ಬರು ಮೃತಪಟ್ಟಿದ್ದು ಇದರೊಂದಿಗೆ ಸಾವಿನ ಸಂಖ್ಯೆ 40,239 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನು ಓದಿ: 108 ಸಹಾಯವಾಣಿಯಲ್ಲಿ ತಾಂತ್ರಿಕ ದೋಷ, ಜನರಿಗೆ ತೊಂದರೆಯಾಗದಂತೆ ಅಗತ್ಯ ವ್ಯವಸ್ಥೆಗೆ ಕ್ರಮ- ಡಾ.ಕೆ.ಸುಧಾಕರ್
ಬೆಂಗಳೂರಿನಲ್ಲಿ ಇಂದು 93 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,71,280ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲೂ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.
ರಾಜ್ಯದಲ್ಲಿ ಇಂದು 123 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 40,20,175ಕ್ಕೆ ಏರಿಕೆಯಾಗಿದೆ. ಇನ್ನು 3,182 ಸಕ್ರಿಯ ಪ್ರಕರಣಗಳಿವೆ.