ಆರೋಗ್ಯ ಸಚಿವ ಡಾ.ಕೆ. ಸುಧಾಕರ್ 
ರಾಜ್ಯ

108 ಆಂಬುಲೆನ್ಸ್ ಸೇವೆ ಸ್ಥಗಿತ: ಆರೋಗ್ಯ ಇಲಾಖೆ ಅನಾರೋಗ್ಯ ಇಲಾಖೆಯಾಗಿ ಪರಿವರ್ತನೆ- ಕಾಂಗ್ರೆಸ್ ಟೀಕೆ

ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಕೊರತೆಯಿಂದಾಗಿದ್ದ ಅವಘಡದ ನಂತರ 108 ಆಂಬುಲೆನ್ಸ್ ಸೇವೆ ಸ್ಥಗಿತವಾಗಿದ್ದು 40% ಸರ್ಕಾರದ ಅಯೋಗ್ಯತನಕ್ಕೆ ಸಾಕ್ಷಿಯಾಗಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಟೀಕಿಸಿದೆ.

ಬೆಂಗಳೂರು: ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಕೊರತೆಯಿಂದಾಗಿದ್ದ ಅವಘಡದ ನಂತರ 108 ಆಂಬುಲೆನ್ಸ್ ಸೇವೆ ಸ್ಥಗಿತವಾಗಿದ್ದು 40% ಸರ್ಕಾರದ ಅಯೋಗ್ಯತನಕ್ಕೆ ಸಾಕ್ಷಿಯಾಗಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಟೀಕಿಸಿದೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಸರಣಿ ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ಟೀಕಾ ಪ್ರಹಾರ ನಡೆಸಿರುವ ಕಾಂಗ್ರೆಸ್, ಡಾ. ಕೆ. ಸುಧಾಕರ್ ಅವರೇ, ನಿಮ್ಮ ದುರಾಡಳಿತದಿಂದ ಆರೋಗ್ಯ ಇಲಾಖೆ ಅನಾರೋಗ್ಯ ಇಲಾಖೆಯಾಗಿ ಪರಿವರ್ತನೆಯಾಗಿದೆ. ಜನ ಮತ್ತೊಮ್ಮೆ ಹಾದಿಬೀದಿಯಲ್ಲಿ ಸಾಯಲಿ ಎಂದು ಬಯಸುತ್ತಿರುವಿರಾ?ಎಂದು ಪ್ರಶ್ನಿಸಿದೆ.

ಡಕೋಟಾ ಇಂಜಿನ್‌ನಂತಿರುವ ಸರ್ಕಾರ  ನಂಬಿದವರಿಗೆ ಮಸಣವೇ ಗತಿ. ಆಸ್ಪತ್ರೆಯಲ್ಲಿ ವಿದ್ಯುತ್, ವೆಂಟಿಲೇಟರ್, ಬೆಡ್, ಔಷಧಗಳ ಕೊರತೆಯ ನಂತರ ಈಗ 108 ಆಂಬುಲೆನ್ಸ್ ಸೇವೆ ಸ್ಥಗಿತವಾಗಿದೆ.ಸಿಡಿಗೆ ತಡೆಯಾಜ್ಞೆ ತರುವಲ್ಲಿ ತೋರಿದ ಆಸಕ್ತಿಯನ್ನು ಇಲಾಖೆಯ ಕೆಲಸದಲ್ಲಿ ತೋರಿದ್ರೆ ಈ ಸ್ಥಿತಿ ಬರುತ್ತಿರಲಿಲ್ಲ ಅಲ್ಲವೇ? ಎಂದು ಸುಧಾಕರ್ ಅವರ ವಿರುದ್ಧ ಕಿಡಿಕಾರಿದೆ.

ಭ್ರಷ್ಟಾಚಾರ ರಹಿತವಾಗಿ ಬದುಕುವುದು ಸುಲಭವಲ್ಲ, ಭ್ರಷ್ಟಾಚಾರ ಕಡಿಮೆ ಮಾಡಲು ಪ್ರಯತ್ನಿಸುತ್ತೇವೆ ಎಂದು ಸಚಿವ ಮಾಧುಸ್ವಾಮಿ ಹೇಳುವ ಮೂಲಕ ಭ್ರಷ್ಟಾಚಾರವಿಲ್ಲದೆ ಬಿಜೆಪಿ ಸರ್ಕಾರವಿಲ್ಲ ಎಂಬುದನ್ನ ಒಪ್ಪಿದಂತಾಗಿದೆ! ಕಡಿಮೆ ಮಾಡಲು ಯತ್ನಿಸುತ್ತೇವೆ ಎಂದರೆ ಕಮಿಷನ್ ಪರ್ಸೆಂಟೇಜ್ ಕಡಿಮೆ ಮಾಡ್ಕೊತಿವಿ ಅಂತನಾ? ಇದೇನಾ ಪೇ ಸಿಎಂ ಎಫೆಕ್ಟ್ ಎಂದು ಟೀಕಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT