ಸಿಎಂ ಬೊಮ್ಮಾಯಿ, ಮೋಹನ್ ದಾಸ್ ಪೈ 
ರಾಜ್ಯ

ಸಿಎಂ ಬೊಮ್ಮಾಯಿ, ಇನ್ಫೋಸಿಸ್ ಮಾಜಿ ನಿರ್ದೇಶಕ ಮೋಹನ್ ದಾಸ್ ಪೈ ಭೇಟಿ: ಹಲವು ವಿಚಾರ ಚರ್ಚೆ

ಇತ್ತೀಚಿಗೆ ಮೂಲಸೌಕರ್ಯಗಳ ನಿರ್ಲಕ್ಷ್ಯದಿಂದ ಬ್ರ್ಯಾಂಡ್ ಬೆಂಗಳೂರು ಖ್ಯಾತಿಗೆ ಧಕ್ಕೆಯಾಗುತ್ತಿದೆ ಎಂದು ಆರೋಪಿಸಿದ್ದ ಇನ್ಫೋಸಿಸ್ ನ ಮಾಜಿ ನಿರ್ದೇಶಕ ಟಿವಿ ಮೋಹನ್ ದಾಸ್ ಪೈ ಭಾನುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ, ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದರು.

ಬೆಂಗಳೂರು: ಇತ್ತೀಚಿಗೆ ಮೂಲಸೌಕರ್ಯಗಳ ನಿರ್ಲಕ್ಷ್ಯದಿಂದ ಬ್ರ್ಯಾಂಡ್ ಬೆಂಗಳೂರು ಖ್ಯಾತಿಗೆ ಧಕ್ಕೆಯಾಗುತ್ತಿದೆ ಎಂದು ಆರೋಪಿಸಿದ್ದ ಇನ್ಫೋಸಿಸ್ ನ ಮಾಜಿ ನಿರ್ದೇಶಕ ಟಿವಿ ಮೋಹನ್ ದಾಸ್ ಪೈ ಭಾನುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ, ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದರು.

30 ನಿಮಿಷಗಳ ಚರ್ಚೆಯಲ್ಲಿ ಬೆಂಗಳೂರಿಗೆ ಪರ್ಯಾಯವಾಗಿ ಹುಬ್ಬಳ್ಳಿ- ಧಾರವಾಡವನ್ನು ಟೆಕ್ ಹಬ್ ಆಗಿ ಅಭಿವೃದ್ಧಿಪಡಿಸಲು ಕೈಗೊಳ್ಳಬಹುದಾದ ಕ್ರಮಗಳ ಕುರಿತು ಚರ್ಚೆ ನಡೆಸಲಾಯಿತು. ಈ ಪ್ರದೇಶ ಎಲೆಕ್ಟ್ರಿಕಲ್ ವಾಹನ ತಯಾರಿಕಾ ಕೇಂದ್ರವಾಗುವ ಸಾಮರ್ಥ್ಯವನ್ನು ಹೊಂದಿದೆ ಎಂದು ಪೈ ಬೊಮ್ಮಾಯಿ ಅವರಿಗೆ ತಿಳಿಸಿದರು ಮತ್ತು ಅದರ ಬಗ್ಗೆ ಹೇಗೆ ಹೋಗಬೇಕೆಂಬುದರ ಬಗ್ಗೆ ಸ್ಪಷ್ಟವಾದ ಪ್ರಸ್ತಾವನೆಯನ್ನು ಮಂಡಿಸಿದರು ಎಂದು ಮೂಲಗಳು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿವೆ.

ಹುಬ್ಬಳ್ಳಿ-ಧಾರವಾಡಕ್ಕೆ ಹೆಚ್ಚಿನ ಹೂಡಿಕೆ ಆಕರ್ಷಿಸುವ ಕ್ರಮಗಳ ಕುರಿತು ಚರ್ಚೆ ನಡೆಸಲಾಗಿದ್ದು, ಬೊಮ್ಮಾಯಿ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದರು ಎಂದು ಮೂಲಗಳು ಹೇಳಿವೆ. ಇತ್ತೀಚೆಗೆ ಹುಬ್ಬಳ್ಳಿ-ಧಾರವಾಡಕ್ಕೆ ಪೈ ಭೇಟಿ ನೀಡಿದ್ದು, ಆ ಪ್ರವಾಸದ ಫಲವಾಗಿ ಈ ಸಭೆ ನಡೆದಿದೆ. ಮೋಹನ್ ದಾಸ್ ಪೈ  ಇನ್ಫೋಸಿಸ್‌ನಲ್ಲಿದ್ದ ದಿನಗಳಿಂದಲೂ ಉತ್ತರ ಕರ್ನಾಟಕ ಪ್ರದೇಶವನ್ನು ಅಭಿವೃದ್ಧಿಪಡಿಸಲು ಲಾಬಿ ಮಾಡುತ್ತಿದ್ದಾರೆ. ಇನ್ಫೋಸಿಸ್ ಫೌಂಡೇಶನ್‌ನ ಮಾಜಿ ಅಧ್ಯಕ್ಷೆ ಸುಧಾ ಮೂರ್ತಿ ಕೂಡ ಈ ಪ್ರದೇಶದವರು. ವಾಸ್ತವವಾಗಿ, ಇನ್ಫೋಸಿಸ್ ತನ್ನ ಹುಬ್ಬಳ್ಳಿ ಕ್ಯಾಂಪಸ್‌ನಿಂದ ಆಗಸ್ಟ್ 1 ರಂದು ಕಾರ್ಯಾಚರಣೆಯನ್ನು ಪ್ರಾರಂಭಿಸಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT