ಸಾಂದರ್ಭಿಕ ಚಿತ್ರ 
ರಾಜ್ಯ

ಐಸಿಸ್‌ ಜೊತೆ ನಂಟು: ಗಂಗಾವತಿ ಹಣ್ಣಿನ ವ್ಯಾಪಾರಿ ಶಿವಮೊಗ್ಗ ಪೊಲೀಸರ ವಶಕ್ಕೆ!

ನಿಷೇಧಿತ ಉಗ್ರ ಸಂಘಟನೆ ಐಸಿಸ್‌ ಜೊತೆ ನಂಟು ಹೊಂದಿದ ಆರೋಪದ ಮೇರೆಗೆ ಗಂಗಾವತಿಯಲ್ಲಿ ವ್ಯಕ್ತಿಯೋರ್ವನನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊಪ್ಪಳ: ನಿಷೇಧಿತ ಉಗ್ರ ಸಂಘಟನೆ ಐಸಿಸ್‌ ಜೊತೆ ನಂಟು ಹೊಂದಿದ ಆರೋಪದ ಮೇರೆಗೆ ಗಂಗಾವತಿಯಲ್ಲಿ ವ್ಯಕ್ತಿಯೋರ್ವನನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಮೈಬೂಬ್‌ ನಗರದ ನಿವಾಸಿ, ಬಾಳೆಹಣ್ಣಿನ ವ್ಯಾಪಾರಿ ಶಬ್ಬೀರ್‌ ಎಂಬಾತನನ್ನು ಶಿವಮೊಗ್ಗ ಪೊಲೀಸರು ಭಾನುವಾರ ತಡರಾತ್ರಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಶಬ್ಬೀರ್‌, ನಿಷೇಧಿತ ಐಎಸ್‌ ಸಂಘಟನೆ ಜೊತೆ ನಂಟು ಹೊಂದಿದ ಆರೋಪದಲ್ಲಿ ಶಿವಮೊಗ್ಗದಲ್ಲಿ ಬಂಧನಕ್ಕೆ ಒಳಗಾಗಿರುವ ಯುವಕರ ಜೊತೆ ನಂಟು ಹೊಂದಿದ್ದ ಎನ್ನಲಾಗಿದೆ. ಪೊಲೀಸರು ಶಬ್ಬೀರನನ್ನು ವಶಕ್ಕೆ ಪಡೆದು ರಾತ್ರಿಯೇ ಶಿವಮೊಗ್ಗಕ್ಕೆ ಕರೆದುಕೊಂಡು ಹೋಗಿದ್ದಾರೆ ಎಂದು ಪೊಲೀಸ್‌ ಮೂಲಗಳು ಖಚಿತಪಡಿಸಿವೆ. 

ತುಂಗಾ ನದಿ ದಡದಲ್ಲಿ ಬಾಂಬ್‌ ಸ್ಫೋಟ ಪ್ರಯೋಗ ನಡೆಸಿದ್ದ ಯುವಕರ ಮೊಬೈಲ್‌ನಲ್ಲಿ ಶಬ್ಬೀರ್‌ ಜೊತೆ ಮಾತನಾಡಿದ ಕರೆ ದಾಖಲೆಗಳು ಪತ್ತೆಯಾಗಿವೆ. ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಒಡಿಶಾದ SCB ವೈದ್ಯಕೀಯ ಕಾಲೇಜಿನಲ್ಲಿ ಭಾರೀ ಅಗ್ನಿ ಅವಘಡ: ಕನಿಷ್ಠ 10 ಮಂದಿ ಸಾವು, ಮೃತರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ

West Asia conflict: ದುಬೈ ಏರ್‌ಪೋರ್ಟ್‌ ಬಳಿ ಡ್ರೋನ್‌ ದಾಳಿ; ಭಾರೀ ಬೆಂಕಿ, ವಿಮಾನ ಸಂಚಾರ ತಾತ್ಕಾಲಿಕ ಸ್ಥಗಿತ

ರಾಜ್ಯಸಭೆಗೆ 26 ಮಂದಿ ಅವಿರೋಧ ಆಯ್ಕೆ: 3ರಾಜ್ಯಗಳಲ್ಲಿ ಬಿಗ್ ಫೈಟ್; ಮೇಲ್ಮನೆಯಲ್ಲಿ ಬಿಜೆಪಿಗೆ ಮತ್ತಷ್ಟು ಬಲ!

ಒಡಿಶಾ ರಾಜ್ಯಸಭೆ ಚುನಾವಣೆ: ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ 'ಕೈ'ಶಾಸಕರು, ಬಿಡದಿ ರೆಸಾರ್ಟ್‌ನಿಂದ ಬೆಂಗಳೂರಿಗೆ ಶಿಫ್ಟ್..!

ಬಿಜೆಪಿಯಿಂದ ಆಪರೇಷನ್ ಕಮಲ ಯತ್ನ: ಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ 5 ಕೋಟಿ ಆಮಿಷ: ಡಿ.ಕೆ ಶಿವಕುಮಾರ್

SCROLL FOR NEXT