ನಾಡಹಬ್ಬ ಮೈಸೂರು ದಸರಾ ಉದ್ಘಾಟಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು 
ರಾಜ್ಯ

ಮೈಸೂರಲ್ಲೇ ತಯಾರಾದ ಸಿಲ್ಕ್ ಸೀರೆ ಉಟ್ಟು, ದಸರಾಗೆ ವಿಶೇಷ ಮೆರುಗು ತಂದ ರಾಷ್ಟ್ರಪತಿ ದ್ರೌಪದಿ ಮುರ್ಮು

ದಸರಾ ಮಹೋತ್ಸವ ಉದ್ಘಾಟಿಸಿದ ಪ್ರಥಮ ರಾಷ್ಟ್ರಪತಿ ಎಂಬ ಗೌರವಕ್ಕೆ ಪಾತ್ರರಾದ ದ್ರೌಪದಿ ಮುರ್ಮು ಅವರು ಉಟ್ಟಿದ್ದ ಸೀರೆ ಇದೀಗ ಎಲ್ಲರ ಗಮನ ಸೆಳೆದಿದೆ. ಹೌದು, ಮುರ್ಮು ಅವರು ಮೈಸೂರಿನಲ್ಲೇ ತಯಾರಾದ ಮೈಸೂರು ರೇಷ್ಮೆ ಸೀರೆ ಧರಿಸಿ ದಸರಾವನ್ನು ಉದ್ಘಾಟಿಸಿದ್ದು ವಿಶೇಷ ಗೌರವ ಸಂದಂತಾಗಿದೆ.

ಮೈಸೂರು: ನಾಡದೇವತೆ ಚಾಮುಂಡೇಶ್ವರಿಗೆ ದೀಪ ಬೆಳಗಿ ಪುಷ್ಪಾರ್ಚನೆ ಸಲ್ಲಿಸಿ ನಮಿಸುವ ಮೂಲಕ ವೃಶ್ಚಿಕ ಲಗ್ನದಲ್ಲಿ ಬೆಳಗ್ಗೆ 10.10ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ನಾಡಹಬ್ಬ ದಸರಾ 2022ಕ್ಕೆ ಅದ್ದೂರಿ ಚಾಲನೆ ನೀಡಿದರು. ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಇತರ ಗಣ್ಯರು ಇದ್ದರು.

ದಸರಾ ಮಹೋತ್ಸವ ಉದ್ಘಾಟಿಸಿದ ಪ್ರಥಮ ರಾಷ್ಟ್ರಪತಿ ಎಂಬ ಗೌರವಕ್ಕೆ ಪಾತ್ರರಾದ ದ್ರೌಪದಿ ಮುರ್ಮು ಅವರು ಉಟ್ಟಿದ್ದ ಸೀರೆ ಇದೀಗ ಎಲ್ಲರ ಗಮನ ಸೆಳೆದಿದೆ. ಹೌದು, ಮುರ್ಮು ಅವರು ಮೈಸೂರಿನಲ್ಲೇ ತಯಾರಾದ ಮೈಸೂರು ರೇಷ್ಮೆ ಸೀರೆ ಧರಿಸಿ ದಸರಾವನ್ನು ಉದ್ಘಾಟಿಸಿದ್ದು ವಿಶೇಷ ಗೌರವ ಸಂದಂತಾಗಿದೆ.

ದ್ರೌಪದಿ ಮುರ್ಮು ಅವರಿಗಾಗಿಯೇ ವಿಶೇಷವಾಗಿ ನೇಯ್ದ ಮೈಸೂರು ರೇಷ್ಮೆ ಸೀರೆ ಇದಾಗಿದ್ದು, ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಜಿಲ್ಲಾಡಳಿತದ ಪರವಾಗಿ ರಾಷ್ಟ್ರಪತಿಯವರನ್ನು ಅಧಿಕೃತವಾಗಿ ಆಹ್ವಾನಿಸುವಾಗ ಗೌರವಸೂಚಕವಾಗಿ ಈ ಸೀರೆಯೊಂದಿಗೆ ಫಲ ತಾಂಬೂಲ ನೀಡಿ ಗೌರವಿಸಿದ್ದರು.

ಇದೇ ಸೀರೆಯನ್ನು ಉಟ್ಟು ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಿದ ಮುರ್ಮುರನ್ನು ಕಂಡು ಮೈಸೂರಿಗರಿಗೆ ಸಂತಸ ತಂದಿದೆ.

ರಾಷ್ಟ್ರಪತಿಯವರು ಬಿಳಿ ಸೀರೆ ಇಷ್ಟಪಡುತ್ತಾರೆ ಎಂಬುದನ್ನು ಅರಿತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು, ಸರ್ಕಾರಿ ಸ್ವಾಮ್ಯದ ಕೆಎಸ್ಐಸಿ ರೇಷ್ಮೆ ಕಾರ್ಖಾನೆಗೆ ಈ ಸೀರೆಯ ತಯಾರಿಕೆಗೆ ಆದೇಶಿದ್ದರು. ಬಳಿಕ ಈ ಸೀರೆಯನ್ನು ನೇಯ್ದು ನೀಡಲಾಗಿತ್ತು. ಮೈಸೂರಿನ ಮಹಾರಾಜರಾದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು 1912ರಲ್ಲಿ ಈ ರೇಷ್ಮೆ ಕಾರ್ಖಾನೆಯನ್ನು ಸ್ಥಾಪಿಸಿದ್ದರು.

ಮೈಸೂರು  ಸಿಲ್ಕ್ ಸೀರೆ ಬ್ರಾಂಡ್ ವಿಶ್ವಪ್ರಸಿದ್ಧ ಬ್ರಾಂಡ್ ಆಗಿದೆ. ನೂರಾರು ವರ್ಷಗಳಿಂದ ಮಹಿಳೆಯರಿಗೆ ಮೈಸೂರು ಸಿಲ್ಕ್ ಸೀರೆ ಎಂದರೆ ಅಚ್ಚುಮೆಚ್ಚು. ಅಂದಿನಿಂದ ಇಂದಿನವರೆಗೂ ಈ ಸೀರೆಯು ಕಳೆಗುಂದಿಲ್ಲ. ಹೀಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಷ್ಟಪಡುವ ನೈಸರ್ಗಿಕ ಬಿಳಿ ಬಣ್ಣದ ಅಪ್ಪಟ ರೇಷ್ಮೆ ಮತ್ತು ಅಪ್ಪಟ ಚಿನ್ನದ ಎಳೆಗಳನ್ನು ಬಳಸಿ ತಯಾರಿಸಿದ ಈ ಉಡುಪನ್ನು ಗೌರವಸೂಚಕವಾಗಿ ಅವರಿಗೆ ಸಮರ್ಪಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT