ಸಾಂದರ್ಭಿಕ ಚಿತ್ರ 
ರಾಜ್ಯ

ದೊಡ್ಡಬಳ್ಳಾಪುರ: ಮಕ್ಕಳ ಕಳ್ಳಿ ಎಂದು ಭಾವಿಸಿ ಮಹಿಳೆಗೆ ಥಳಿಸಿದ ಗ್ರಾಮಸ್ಥರು!

ಮಕ್ಕಳ ಕಳ್ಳಿ ಎಂದು ಭಾವಿಸಿ ಮಹಿಳೆಯನ್ನು ಹಿಡಿದು ಗ್ರಾಮಸ್ಥರು ಪೊಲೀಸರಿಗೆ ಒಪ್ಪಿಸಿರುವ ಘಟನೆ ತಾಲ್ಲೂಕಿನ ನೇರಳಘಟ್ಟ ಗ್ರಾಮದಲ್ಲಿ ಶನಿವಾರ ನಡೆದಿದೆ.

ದೊಡ್ಡಬಳ್ಳಾಪುರ: ಮಕ್ಕಳ ಕಳ್ಳಿ ಎಂದು ಭಾವಿಸಿ ಮಹಿಳೆಯನ್ನು ಹಿಡಿದು ಗ್ರಾಮಸ್ಥರು ಪೊಲೀಸರಿಗೆ ಒಪ್ಪಿಸಿರುವ ಘಟನೆ ತಾಲ್ಲೂಕಿನ ನೇರಳಘಟ್ಟ ಗ್ರಾಮದಲ್ಲಿ ಶನಿವಾರ ನಡೆದಿದೆ.

ಸದ್ಯಕ್ಕೆ ತಾಲ್ಲೂಕಿನ ಯಾವುದೇ ಭಾಗದಲ್ಲೂ ಮಕ್ಕಳ ಕಳ್ಳರು ಬಂದಿಲ್ಲ. ಜನರು ಈ ಬಗ್ಗೆ ಆತಂಕಕ್ಕೆ ಒಳಗಾಗದೆ ಅಪರಿಚಿತರು ಗ್ರಾಮಗಳಿಗೆ ಭೇಟಿ ನೀಡಿದಾಗ ಸೂಕ್ತ  ಮಾಹಿತಿ ಪಡೆಯಬೇಕು. ಯಾರೂ ಸಹ ಕಾನೂನು ಕೈಗೆ ತೆಗೆದುಕೊಳ್ಳಬಾರದು ಎಂದು ಪೊಲೀಸರು ತಿಳಿಸಿದ್ದಾರೆ.

ಕೃತಕ ಆಭರಣಗಳನ್ನು ಮಾರಾಟ ಮಾಡುವ ಮಂಜುಳಾ ಅವರು ನೇರಲಘಟ್ಟಕ್ಕೆ ಬಂದಿದ್ದರು. ಶೌಚಾಲಯಕ್ಕೆ ತೆರಳುತ್ತಿದ್ದ ಇಬ್ಬರು ಮಕ್ಕಳಿಗೆ ಮಂಜುಳಾ ಚಾಕಲೇಟ್‌ಗಳನ್ನು ನೀಡಿದ್ದರು, ಆದರೆ ಅವರು ನಿರಾಕರಿಸಿದರು. ದಾರಿಹೋಕರೊಬ್ಬರು ಅವಳನ್ನು ಪ್ರಶ್ನಿಸಲು ಪ್ರಾರಂಭಿಸಿದರು ಮತ್ತು ಗ್ರಾಮಸ್ಥರಿಗೆ ತಿಳಿಸಿದ್ದಾರೆ.

ಪೊಲೀಸರಿಗೆ ವಿಷಯ ತಿಳಿಸುವ ಮೊದಲು ಆಕೆಯನ್ನು ಥಳಿಸಿದರು. ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ. ಆಕೆಯನ್ನು ಪ್ರಥಮ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಕೃತಕ ಆಭರಣಗಳನ್ನು ವಿಶೇಷವಾಗಿ ಮಕ್ಕಳಿಗೆ ಮಾರಾಟ ಮಾಡಲು ಅವಳು ಆಗಾಗ್ಗೆ ಹಳ್ಳಿಗಳಿಗೆ ಭೇಟಿ ನೀಡುತ್ತಿದ್ದಳು ಎಂದು ತನಿಖೆಯಿಂದ ತಿಳಿದುಬಂದಿದೆ. ಮಕ್ಕಳನ್ನು ಗಮನಿಸಿದ ಆಕೆ ಚಾಕಲೇಟ್‌ಗಳನ್ನು ಕೊಟ್ಟಿದ್ದಾಳೆ. ಆಧಾರ್ ಕಾರ್ಡ್ ತನ್ನ ಬಳಿ ಹೊಂದಿರುವ ಮಂಜುಳಾ ಅವರನ್ನು ಪಂಚಾಯಿತಿ ಸದಸ್ಯರು ಗುರುತಿಸಿದ್ದಾರೆ.

ಇದೇ ವೇಳೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳಿಗೆ ಕಿವಿಗೊಡಬೇಡಿ ಎಂದು ರಾಜ್ಯ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. "ನಾವು ಸಾಮಾಜಿಕ ಮಾಧ್ಯಮಗಳ ಮೇಲೆ ಕಣ್ಣಿಟ್ಟಿದ್ದೇವೆ ಮತ್ತು ಅಂತಹ ವದಂತಿಗಳನ್ನು ಹರಡಿದರೆ ಕ್ರಮ ತೆಗೆದುಕೊಳ್ಳಲಾಗುವುದು" ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!