ಆಹ್ವಾನ ಪತ್ರಿಕೆ 
ರಾಜ್ಯ

ದಸರಾ ಕವಿಗೋಷ್ಠಿ ಆಹ್ವಾನ ಪತ್ರಿಕೆಯಲ್ಲಿ ನಿಧನರಾದವರ ಹೆಸರು, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ನಾಡಹಬ್ಬ ದಸರಾದ ಪ್ರಧಾನ ಕವಿಗೋಷ್ಠಿಯ ಆಹ್ವಾನ ಪತ್ರಿಕೆಯಲ್ಲಿ ನಿಧನರಾದವರ ಹೆಸರನ್ನು ಪ್ರಕಟಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಎಡವಟ್ಟು ಮಾಡಿಕೊಂಡಿದೆ. ಪ್ರಧಾನ ಕವಿಗೋಷ್ಟಿಯಲ್ಲಿ ರಾಜಕೀಯ ಮುಖಂಡರು ಭಾಗವಹಿಸಲಿದ್ದು,..

ಮೈಸೂರು: ನಾಡಹಬ್ಬ ದಸರಾದ ಪ್ರಧಾನ ಕವಿಗೋಷ್ಠಿಯ ಆಹ್ವಾನ ಪತ್ರಿಕೆಯಲ್ಲಿ ನಿಧನರಾದವರ ಹೆಸರನ್ನು ಪ್ರಕಟಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಎಡವಟ್ಟು ಮಾಡಿಕೊಂಡಿದೆ. ಪ್ರಧಾನ ಕವಿಗೋಷ್ಟಿಯಲ್ಲಿ ರಾಜಕೀಯ ಮುಖಂಡರು ಭಾಗವಹಿಸಲಿದ್ದು, ನಿಧನರಾದ ಆಕಾಶವಾಣಿ ನಿಲಯ ನಿರ್ದೇಶಕ ಜಿ.ಕೆ ರವೀಂದ್ರ ಕುಮಾರ್ ಅವರ ಹೆಸರು ಆಹ್ವಾನ ಪತ್ರಿಕೆಯಲ್ಲಿದೆ.

ಅಕ್ಟೋಬರ್ 3 ರಂದು ಮೈಸೂರು ವಿಶ್ವವಿದ್ಯಾಲಯದ ಮಾನಸ ಗಂಗೋತ್ರಿ ಸೆನೆಟ್ ಸಭಾಂಗಣದಲ್ಲಿ ಬೆಳಗ್ಗೆ 10.30ಕ್ಕೆ ಕವಿಗೋಷ್ಠಿ ನಡೆಯಲಿದೆ. ಒಟ್ಟು 37 ಮಂದಿ ಕವಿಗೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ.

ಆಕಾಶವಾಣಿ ನಿಲಯ ನಿರ್ದೇಶಕ ಜಿ.ಕೆ ರವೀಂದ್ರ ಕುಮಾರ್ ಅವರು 2019ರಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆದರೂ ಅವರ ಹೆಸರು ಆಹ್ವಾನ ಪತ್ರಿಕೆಯಲ್ಲಿ ಮುದ್ರಿತವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಎಡವಟ್ಟಿಗೆ ಆಕ್ರೋಶ ವ್ಯಕ್ತವಾಗಿದೆ.

ಇನ್ನು ಇದಲ್ಲದೇ ಪ್ರತಾಪ ಸಿಂಹ ಅವರಿಗೆ ಚಾಮರಾಜನಗರ ಸಂಸದ ಎಂದು ಹೆಸರಿಸಲಾಗಿದೆ. ಅವರು ಮೈಸೂರು-ಕೊಡಗು ಸಂಸದ ಎಂದು ಮುದ್ರಿಸುವ ಬದಲು ಚಾಮರಾಜನಗರ ಎಂದು ಮುದ್ರಿಸಿದ್ದಾರೆ.

ಕವಿಗೋಷ್ಠಿಯನ್ನು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಕಂಬಾರ ಉದ್ಘಾಟಿಸಲಿದ್ದು, ಸುಪ್ರಸಿದ್ದ ನಾಟಕಕಾರ ಮತ್ತು ಕವಿ ಡಾ.ಎಚ್. ಎಸ್ ಶಿವಪ್ರಕಾಶ್ ಅಧ್ಯಕ್ಷತೆ ವಹಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT