ಆರಗ ಜ್ಞಾನೇಂದ್ರ 
ರಾಜ್ಯ

ಭಯೋತ್ಪಾದಕ ಸಂಘಟನೆಗಳ ವಿರುದ್ಧ ಐತಿಹಾಸಿಕ ಕ್ರಮ: ಪಿಎಫ್ ಐ ನಿಷೇಧದ ಬಗ್ಗೆ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ

ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿರುವುದು ಸ್ವಾಗತಾರ್ಹ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಬೆಂಗಳೂರು: ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ನಿಷೇಧಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿರುವುದು ಸ್ವಾಗತಾರ್ಹ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಮಹತ್ವದ ಬೆಳವಣಿಗೆಯೊಂದರಲ್ಲಿ ಪಿಎಫ್ಐ ಹಾಗೂ ಅದರ ಇತರ ಸಹವರ್ತಿ ಸಂಸ್ಥೆಗಳನ್ನು, ಐದು ವರ್ಷಗಳ ವರೆಗೆ ಯುಎಪಿಎ ಕಾಯಿದೆ ಅಡಿಯಲ್ಲಿ ನಿಷೇಧಿಸಿದೆ. ಇದನ್ನು ನಾನು ಸ್ವಾಗತಿಸುತ್ತೇನೆ ಎಂದರು.

ದೇಶದಲ್ಲಿ ಕೋಮು ಸೌಹಾರ್ದ ಕೆಡಿಸಿ, ಭಯೋತ್ಪಾದಕ ಕೃತ್ಯಕ್ಕೆ ಕುಮ್ಮಕ್ಕು ನೀಡುತ್ತಿದ್ದ ಪಿಎಫ್ಐ ಹಾಗೂ ಅದರ ಇತರ ಸಹ ಸಂಸ್ಥೆಗಳ ವಿರುದ್ಧ ಕೇಂದ್ರ ಸರಕಾರ ಸೂಕ್ತ ಕ್ರಮ ತೆಗೆದುಕೊಂಡಿದೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದ್ದಾರೆ.

ಪಿಎಫ್‌ಐ ಹಾಗೂ ಅದರ ಅಂಗ ಸಂಸ್ಥೆಗಳನ್ನು ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಐದು ವರ್ಷಗಳ ಅವಧಿಗೆ ನಿಷೇಧ ವಿಧಿಸಲಾಗಿದೆ ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ.

ಪಿಎಫ್ಐ ನಾಯಕರ ಮೇಲೆ ರಾಷ್ಟ್ರಾದ್ಯಂತ ಎನ್ಐಎ ದಾಳಿ ನಡೆದ ಬೆನ್ನಲ್ಲೇ ಸಂಘಟನೆಯನ್ನು ನಿಷೇಧ ಮಾಡಲಾಗಿದೆ. ಸಂಘಟನೆಯ ರಾಷ್ಟ್ರೀಯ ನಾಯಕರನ್ನು ಒಳಗೊಂಡು ಹಲವರನ್ನು ಎನ್ಐಎ ಬಂಧನ ಮಾಡಿದೆ. ಮಂಗಳವಾರ ರಾಜ್ಯದಲ್ಲಿ ಮುಂಜಾಗರೂಕತಾ ಕ್ರಮವಾಗಿ ಹಲವು ಪಿಎಫ್ಐ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಈ ಮೂಲಕ ನಿಷೇಧದ ಸುಳಿವು ನೀಡಲಾಗುತ್ತು. ಇದೀಗ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT