ಬಿಬಿಎಂಪಿ ಜೆಸಿಬಿ 
ರಾಜ್ಯ

15 ದಿನ ಕಳೆದರೂ ಬೆಂಗಳೂರಿನಲ್ಲಿ ಕೇವಲ 5,000 ಮೀಟರ್ ರಾಜಕಾಲುವೆ ಒತ್ತುವರಿ ತೆರವು!

ಇತ್ತೀಚಿನ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಭಾಗವಾಗಿ ಬಿಬಿಎಂಪಿ ಮಹದೇವಪುರ ವಲಯದಲ್ಲಿ ಕಳೆದ 15 ದಿನಗಳಿಂದ ಇಲ್ಲಿಯವರೆಗೂ ಕೇವಲ 5,000 ಮೀಟರ್ ರಾಜಕಾಲುವೆ ಒತ್ತುವರಿಯನ್ನು ತೆರವುಗೊಳಿಸಿದೆ. 

ಬೆಂಗಳೂರು: ಇತ್ತೀಚಿನ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಭಾಗವಾಗಿ ಬಿಬಿಎಂಪಿ ಮಹದೇವಪುರ ವಲಯದಲ್ಲಿ ಕಳೆದ 15 ದಿನಗಳಿಂದ ಇಲ್ಲಿಯವರೆಗೂ ಕೇವಲ 5,000 ಮೀಟರ್ ರಾಜಕಾಲುವೆ ಒತ್ತುವರಿಯನ್ನು ತೆರವುಗೊಳಿಸಿದೆ. 

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ಬಿಬಿಎಂಪಿ ಮುಖ್ಯ ಎಂಜಿನಿಯರ್ ಲೋಕೇಶ್, ಮಹದೇವಪುರ ವಲಯದಲ್ಲಿ ಕಂದಾಯ ಇಲಾಖೆ ದಾಖಲೆ ಬಳಸಿಕೊಂಡು ಒತ್ತುವರಿಯಾಗದ ಜಾಗದ ಪಟ್ಟಿ ಸಿದ್ದಪಡಿಸಿಕೊಂಡು  ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಮಹದೇವಪುರ ವಲಯದ ಪಣತೂರು, ಹೂಡಿ, ದೊಡ್ಡನೆಕುಂದಿ, ವರ್ತೂರ್, ಕುಂದಲಹಳ್ಳಿ, ಮುನ್ನೆಕೊಲಾಲ ಮತ್ತು ಕಾಸವನಹಳ್ಳಿಯಲ್ಲಿ ಒತ್ತುವರಿಯಾಗಿರುವುದನ್ನು ಕಂಡುಹಿಡಿಯಲಾಗಿದೆ. ಭೂ ಸರ್ವೇದಾರರು ಜಾಗ ಗುರುತಿಸಿದ ನಂತರ  ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ಹೇಳಿದೆ. 

ತ್ವರಿತಗತಿಯಲ್ಲಿ ಸರ್ವೇ ನಡೆಸಿ, ಒತ್ತುವರಿ ತೆರವು ಕಾರ್ಯಾಚರಣೆಯನ್ನು ಪುನರ್ ಆರಂಭಿಸುವಂತೆ ಮಹದೇವಪುರ ವಲಯ ಬಿಬಿಎಂಪಿ ಮುಖ್ಯ ಎಂಜಿನಿಯರ್ ಬಸವರಾಜ್ ಕಬಾಡೆ ರಾಜಕಾಲುವೆ ವಿಭಾಗದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಮಧ್ಯೆ ಜನಪ್ರಿಯ ಲೇಕ್ ವ್ಹೀವ್ ಅಪಾರ್ಟ್ ಮೆಂಟ್ ನ ತಡೆಗೋಡೆಯನ್ನು ಪಾಲಿಕೆ ಬುಧವಾರ ಧ್ವಂಸಗೊಳಿಸಿತು.

ಬೊಮ್ಮನಹಳ್ಳಿ ವಲಯದ ಕೊಡಿಚಿಕ್ಕನಹಳ್ಳಿ (ಹಂತ 2) ರಲ್ಲಿ 11 ಅಡಿ ರಾಜಕಾಲುವೆ ಒತ್ತುವರಿ ಆರೋಪ ಕೇಳಿಬಂದಿದೆ. ಕೌಂಪೌಂಡ್ ಮತ್ತು ಗೇಟ್ ನ್ನು ಧ್ವಂಸಗೊಳಿಸಿದ್ದೇವೆ. ಇಂದು ಕೂಡಾ ಧ್ವಂಸ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಲೋಕಸಭೆಯಲ್ಲಿ ಕಾಂಗ್ರೆಸ್ ಸಂಸದರಿಂದ ಪ್ರಧಾನಿ ಮೋದಿ ವಿರುದ್ಧ 'ಅನಿರೀಕ್ಷಿತ ಕೃತ್ಯ'ದ ಬಗ್ಗೆ ಮಾಹಿತಿ ಇತ್ತು: ಸ್ಪೀಕರ್ ಸ್ಫೋಟಕ ಆರೋಪ

ಮೆಟ್ರೋ ಪ್ರಯಾಣ ದರ ಏರಿಕೆಗೆ ವಿರೋಧ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂಸದ ತೇಜಸ್ವಿ ಸೂರ್ಯ ದರ ನಿಗದಿ ಸಮಿತಿ ಪುನಾರಚನೆಗೆ ಮನವಿ

ರಾಹುಲ್ 'ಆ' ಬಗ್ಗೆ ಮಾತನಾಡುವಾಗಲೆಲ್ಲ 'ಆಪ್ಕೋ ಖುಜ್ಲಿ ಉತ್ತಿ ಹೈ': ರಾಜ್ಯಸಭೆಯಲ್ಲಿ ಖರ್ಗೆ - ಜೆಪಿ ನಡ್ಡಾ ವಾಗ್ವಾದ

ಮಾಲೂರು ಕ್ಷೇತ್ರ: ಮರು ಮತ ಎಣಿಕೆ, ಕಾಂಗ್ರೆಸ್ ನ ನಂಜೇಗೌಡರೇ ಗೆಲುವು! ಸುಪ್ರೀಂಕೋರ್ಟ್ ಮಹತ್ವದ ತೀರ್ಪು!

ಪಶ್ಚಿಮ ಬಂಗಾಳ ಚುನಾವಣೆ: ಎಲ್ಲಾ 294 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಏಕಾಂಗಿ ಸ್ಪರ್ಧೆಗೆ ನಿರ್ಧಾರ!

SCROLL FOR NEXT