ಬಿಬಿಎಂಪಿ ಜೆಸಿಬಿ 
ರಾಜ್ಯ

15 ದಿನ ಕಳೆದರೂ ಬೆಂಗಳೂರಿನಲ್ಲಿ ಕೇವಲ 5,000 ಮೀಟರ್ ರಾಜಕಾಲುವೆ ಒತ್ತುವರಿ ತೆರವು!

ಇತ್ತೀಚಿನ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಭಾಗವಾಗಿ ಬಿಬಿಎಂಪಿ ಮಹದೇವಪುರ ವಲಯದಲ್ಲಿ ಕಳೆದ 15 ದಿನಗಳಿಂದ ಇಲ್ಲಿಯವರೆಗೂ ಕೇವಲ 5,000 ಮೀಟರ್ ರಾಜಕಾಲುವೆ ಒತ್ತುವರಿಯನ್ನು ತೆರವುಗೊಳಿಸಿದೆ. 

ಬೆಂಗಳೂರು: ಇತ್ತೀಚಿನ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಭಾಗವಾಗಿ ಬಿಬಿಎಂಪಿ ಮಹದೇವಪುರ ವಲಯದಲ್ಲಿ ಕಳೆದ 15 ದಿನಗಳಿಂದ ಇಲ್ಲಿಯವರೆಗೂ ಕೇವಲ 5,000 ಮೀಟರ್ ರಾಜಕಾಲುವೆ ಒತ್ತುವರಿಯನ್ನು ತೆರವುಗೊಳಿಸಿದೆ. 

ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ಬಿಬಿಎಂಪಿ ಮುಖ್ಯ ಎಂಜಿನಿಯರ್ ಲೋಕೇಶ್, ಮಹದೇವಪುರ ವಲಯದಲ್ಲಿ ಕಂದಾಯ ಇಲಾಖೆ ದಾಖಲೆ ಬಳಸಿಕೊಂಡು ಒತ್ತುವರಿಯಾಗದ ಜಾಗದ ಪಟ್ಟಿ ಸಿದ್ದಪಡಿಸಿಕೊಂಡು  ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಮಹದೇವಪುರ ವಲಯದ ಪಣತೂರು, ಹೂಡಿ, ದೊಡ್ಡನೆಕುಂದಿ, ವರ್ತೂರ್, ಕುಂದಲಹಳ್ಳಿ, ಮುನ್ನೆಕೊಲಾಲ ಮತ್ತು ಕಾಸವನಹಳ್ಳಿಯಲ್ಲಿ ಒತ್ತುವರಿಯಾಗಿರುವುದನ್ನು ಕಂಡುಹಿಡಿಯಲಾಗಿದೆ. ಭೂ ಸರ್ವೇದಾರರು ಜಾಗ ಗುರುತಿಸಿದ ನಂತರ  ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ಹೇಳಿದೆ. 

ತ್ವರಿತಗತಿಯಲ್ಲಿ ಸರ್ವೇ ನಡೆಸಿ, ಒತ್ತುವರಿ ತೆರವು ಕಾರ್ಯಾಚರಣೆಯನ್ನು ಪುನರ್ ಆರಂಭಿಸುವಂತೆ ಮಹದೇವಪುರ ವಲಯ ಬಿಬಿಎಂಪಿ ಮುಖ್ಯ ಎಂಜಿನಿಯರ್ ಬಸವರಾಜ್ ಕಬಾಡೆ ರಾಜಕಾಲುವೆ ವಿಭಾಗದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಮಧ್ಯೆ ಜನಪ್ರಿಯ ಲೇಕ್ ವ್ಹೀವ್ ಅಪಾರ್ಟ್ ಮೆಂಟ್ ನ ತಡೆಗೋಡೆಯನ್ನು ಪಾಲಿಕೆ ಬುಧವಾರ ಧ್ವಂಸಗೊಳಿಸಿತು.

ಬೊಮ್ಮನಹಳ್ಳಿ ವಲಯದ ಕೊಡಿಚಿಕ್ಕನಹಳ್ಳಿ (ಹಂತ 2) ರಲ್ಲಿ 11 ಅಡಿ ರಾಜಕಾಲುವೆ ಒತ್ತುವರಿ ಆರೋಪ ಕೇಳಿಬಂದಿದೆ. ಕೌಂಪೌಂಡ್ ಮತ್ತು ಗೇಟ್ ನ್ನು ಧ್ವಂಸಗೊಳಿಸಿದ್ದೇವೆ. ಇಂದು ಕೂಡಾ ಧ್ವಂಸ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT