ಆರಗ ಜ್ಞಾನೇಂದ್ರ 
ರಾಜ್ಯ

ನೆರೆಯ ಭೂತಾನ್ ದೇಶದಿಂದ ಅಡಿಕೆ ಆಮದು ಬಗ್ಗೆ ರಾಜ್ಯದ ಬೆಳೆಗಾರರಿಗೆ ಆತಂಕ ಬೇಡ: ಆರಗ ಜ್ಞಾನೇಂದ್ರ

ನೆರೆಯ ಪುಟ್ಟ ದೇಶ ಭೂತಾನ್ ನಿಂದ 17 ಸಾವಿರ ಟನ್ ಹಸಿ ಅಡಿಕೆ ಆಮದು ಮಾಡಿ ಕೊಳ್ಳಲು ಅವಕಾಶ ನೀಡಿದ ಕೇಂದ್ರದ ನಿರ್ಧಾರದಿಂದ, ದೇಶಿಯ ಅಡಿಕೆ ಮಾರುಕಟ್ಟೆ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಬೀರುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಬೆಂಗಳೂರು: ನೆರೆಯ ಪುಟ್ಟ ದೇಶ ಭೂತಾನ್ ನಿಂದ 17 ಸಾವಿರ ಟನ್ ಹಸಿ ಅಡಿಕೆ ಆಮದು ಮಾಡಿ ಕೊಳ್ಳಲು ಅವಕಾಶ ನೀಡಿದ ಕೇಂದ್ರದ ನಿರ್ಧಾರದಿಂದ, ದೇಶಿಯ ಅಡಿಕೆ ಮಾರುಕಟ್ಟೆ ಮೇಲೆ ಯಾವುದೇ ಪ್ರತಿಕೂಲ ಪರಿಣಾಮ ಬೀರುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಚಿವರು, ಪ್ರಸ್ತುತ ನಮ್ಮ ದೇಶದಿಂದ ಭೂತಾನ್ ದೇಶಕ್ಕೆ, ಸಂಸ್ಕರಿತ ಅಡಿಕೆ ಉತ್ಪನ್ನಗಳು,  ಆಮದು ಪ್ರಮಾಣಕ್ಕಿಂತ ಹೆಚ್ಚು ರಫ್ತು ಆಗುತ್ತಿದ್ದು, ಭೂತಾನ್ ನಿಂದ ಕೇವಲ ಹಸಿ ಅಡಿಕೆ ಮಾತ್ರ ಅನುಮತಿ ನೀಡಲಾಗಿದೆ, ಎಂದಿದ್ದಾರೆ. ನೆರೆಯ ಭೂತಾನ್ ದೇಶ, ಭಾರತದ ಪರಂಪರಾಗತ ಮಿತ್ರ ದೇಶವಾಗಿದ್ದು, ಉಭಯ ದೇಶಗಳ ನಡುವೆ ಉತ್ತಮ ವಾಣಿಜ್ಯ ವಹಿವಾಟು ನಡೆಸಲಾಗುತ್ತಿದೆ ಎಂಬುದನ್ನು ಸಚಿವರು ನೆನಪಿಸಿದ್ದಾರೆ. 

ರಾಜ್ಯ ಅಡಿಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರೂ ಆಗಿರುವ ಸಚಿವರು, ಅಡಿಕೆ ಮಾರುಕಟ್ಟೆಯಲ್ಲಿ, ಸ್ಥಿರತೆಯನ್ನು ಕಾಯ್ದು ಕೊಳ್ಳಲು, ಕೇಂದ್ರ ಸರಕಾರದ ಜತೆಗೆ ಸತತ ಸಂಪರ್ಕ ದಲ್ಲಿದ್ದು, ಭೂತಾನ್ ಅಡಕೆ ಆಮದು ವಿಚಾರವಾಗಿಯೂ, ಮಾತುಕತೆ ನಡೆಸಲಾಗುವುದು,  ಬೆಳೆಗಾರರುಯಾವುದೇ ಗೊಂದಲ, ಆತಂಕಕ್ಕೊಳಗಾಗುವುದು ಬೇಡ ಎಂದು ಅಭಯ ನೀಡಿದ್ದಾರೆ. ಈ ವಿಚಾರ ಕುರಿತು, ಕೇಂದ್ರಕ್ಕೆ ಮನವರಿಕೆ ಮಾಡಿ ಕೊಡಲು ಲೋಕ ಸಭಾ ಸದಸ್ಯರ ನೇತೃತ್ವದಲ್ಲಿ, ನಿಯೋಗವೊಂದನ್ನು ಕೊಂಡೊಯ್ಯಲಾಗುವುದು ಎಂದೂ ಸಚಿವರು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT