ಕೃಷ್ಣೆಗೆ ಬಾಗಿನ ಅರ್ಪಿಸಿದ ಸಿಎಂ ಬೊಮ್ಮಾಯಿ 
ರಾಜ್ಯ

ಆಲಮಟ್ಟಿಯಲ್ಲಿ ಕೃಷ್ಣೆಗೆ ಬಾಗಿನ ಅರ್ಪಿಸಿದ ಸಿಎಂ ಬೊಮ್ಮಾಯಿ

ಆಲಮಟ್ಟಿಯ ಲಾಲ್ ಬಹದ್ದೂರ ಶಾಸ್ತ್ರಿ ಸಾಗರದಲ್ಲಿ ಕೃಷ್ಣಾ ನದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಗಂಗಾ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದರು.

ಬಾಗಲಕೋಟೆ: ಆಲಮಟ್ಟಿಯ ಲಾಲ್ ಬಹದ್ದೂರ ಶಾಸ್ತ್ರಿ ಸಾಗರದಲ್ಲಿ ಕೃಷ್ಣಾ ನದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಗಂಗಾ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದರು.

ಸೀರೆ, ಕುಪ್ಪಸ, ಹಣ್ಣು, ಹೂವು ಕಾಯಿ ಸೇರಿ ನಾನಾ ಪೂಜೆ ಹಾಗೂ ಉಡಿ ತುಂಬುವ ಸಾಮಗ್ರಿಯುಳ್ಳ ಬಾಗಿನವನ್ನು ಕೃಷ್ಣೆಯ ಮಡಲಿಗೆ ಮುಖ್ಯಮಂತ್ರಿಗಳು ಸಮರ್ಪಿಸಿದರು.

ಇಂದು ಬೆಳಗ್ಗೆ 10 ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಹುಬ್ಬಳ್ಳಿಯಿಂದ ಆಲಮಟ್ಟಿಗೆ ಆಗಮಿಸಿದ ಮುಖ್ಯಮಂತ್ರಿಗಳು ನೇರವಾಗಿ ಜಲಾಶಯಕ್ಕೆ ತೆರಳಿ ಗಂಗಾ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.

ಕಾರ್ಯಕ್ರಮದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ‌ ಕಾರಜೋಳ, ಬಾಗಲಕೋಟೆ, ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ, ಸಂಸದ ರಮೇಶ ಜಿಗಜಿಣಗಿ, ಶಾಸಕರಾದ ಎ.ಎಸ್.ಪಾಟೀಲ ನಡಹಳ್ಳಿ, ಶಿವಾನಂದ ಪಾಟೀಲ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ಮಾಜಿ ಶಾಸಕರಾದ ಶ್ರಿಕಾಂತ ಕುಲಕರ್ಣಿ, ಎಸ್.ಕೆ.ಬೆಳ್ಳುಬ್ಬಿ, ಅಪ್ಪು ಪಟ್ಟಣಶೆಟ್ಟಿ ಸೇರಿದಂತೆ ಅವಳಿ ಜಿಲ್ಲೆಯ ಇತರೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT