ಸಂಗ್ರಹ ಚಿತ್ರ 
ರಾಜ್ಯ

ಚುನಾವಣೆ ನೀತಿ ಸಂಹಿತೆ ಜಾರಿ ಎಫೆಕ್ಟ್: ಔಷಧ, ಆ್ಯಂಬುಲೆನ್ಸ್'ಗಳ ಟೆಂಡರ್ ಪ್ರಕ್ರಿಯೆಯಲ್ಲಿ ವಿಳಂಬ!

ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದು, ಇದರಿಂದಾಗಿ ವಾರ್ಷಿಕ ಔಷಧ ಖರೀದಿ, ಡಯಾಲಿಸಿಸ್ ಮತ್ತು 108 ಆ್ಯಂಬುಲೆನ್ಸ್‌ಗಳ ಟೆಂಡರ್ ಪ್ರಕ್ರಿಯೆಯಲ್ಲಿ ವಿಳಂಬವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದು, ಇದರಿಂದಾಗಿ ವಾರ್ಷಿಕ ಔಷಧ ಖರೀದಿ, ಡಯಾಲಿಸಿಸ್ ಮತ್ತು 108 ಆ್ಯಂಬುಲೆನ್ಸ್‌ಗಳ ಟೆಂಡರ್ ಪ್ರಕ್ರಿಯೆಯಲ್ಲಿ ವಿಳಂಬವಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಡಿ ರಂದೀಪ್ ಮಾತನಾಡಿ, “ಎಲ್ಲಾ ಸೇವೆಗಳು ಬಹುತೇಕ ಉಚಿತ ಮತ್ತು ಆರೋಗ್ಯ ತುರ್ತು ಸೇವೆಯಾಗಿರುವುದರಿಂದ ಚುನಾವಣಾ ನೀತಿ ಸಂಹಿತೆ ಆರೋಗ್ಯ ಯೋಜನೆಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಈ ಕುರಿತು ಕಾರ್ಯಗಳು ಎಂದಿನಂತೆ ಮುಂದುವರಿಯುತ್ತದೆ. ಆದರೆ, ಟೆಂಡರ್ ಪ್ರಕ್ರಿಯೆಗಳಲ್ಲಿ ವಿಳಂಬವಾಗುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.

ನೀತಿ ಸಂಹಿತೆ ಜಾರಿಯು ಆಯುಷ್ಮಾನ್ ಭಾರತ್ ಪ್ರಧಾನ್ ಮಂತ್ರಿ ಜನರೋಗ ಯೋಜನೆ (ABMP JAY) ಗಾಗಿ ಕಾರ್ಡ್‌ಗಳ ವಿತರಣೆಯ ಮೇಲೂ ಬೀರಿದ್ದು, ಚುನಾವಣೆ ಹಿನ್ನೆಲೆಯಲ್ಲಿ ಕಾರ್ಡ್ ಗಳ ವಿತರಣೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ರಂದೀಪ್ ಅವರು, ಕಾರ್ಡ್ ವಿತರಣೆಯು ತುರ್ತು ಆರೋಗ್ಯ ಯೋಜನೆ ಅಡಿಯಲ್ಲಿ ಬರುವುದರಿಂದ ಕಾರ್ಡ್ ವಿತರಣೆ ಕುರಿತು ಚುನಾವಣಾ ಆಯೋಗ ಪರಿಶೀಲನೆ ನಡೆಸುತ್ತಿದೆ ಎಂದು ಹೇಳಿದ್ದಾರೆ.

3-4 ತಿಂಗಳುಗಳಿಂದ ಆರೋಗ್ಯ ಇಲಾಖೆಯ ಹಲವಾರು ಟೆಂಡರ್‌ಗಳು ಪ್ರಕ್ರಿಯೆಯ ಹಂತದಲ್ಲಿವೆ, ಚುನಾವಣೆಯ ಕಾರಣ ಈ ಟೆಂಡರ್ ಗಳು ವಿಳಂಬವಾಗುವ ಸಾಧ್ಯತೆಗಳಿದ್ದು, ಇದರ ಪರಿಣಾಮ ನಾಗರೀಕರ ಮೇಲೆ ಬೀರಲಿದೆ ಎಂದು ಹೇಳಲಾಗುತ್ತಿದೆ.

ಚುನಾವಣಾ ಸಮಯ ಹಿನ್ನೆಲೆಯಲ್ಲಿ ಮುಂಬರುವ ತಿಂಗಳುಗಳಲ್ಲಿ ಸೋಂಕು ಉಲ್ಬಣಗೊಳ್ಳದಂತೆ ನೋಡಿಕೊಳ್ಳಲು, ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಲು ಇಸಿ ಬಿಡುಗಡೆ ಮಾಡಿರುವ ಮಾರ್ಗಸೂಚಿಗಳನ್ನು ಪರಿಶೀಲಿಸುವಂತೆ ತಾಂತ್ರಿಕ ಸಲಹಾ ಸಮಿತಿಗೆ (ಟಿಎಸಿ) ಸೂಚನೆ ನೀಡಲಾಗಿದೆ.

ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮಾರ್ಗಸೂಚಿಯಲ್ಲಿ ಚುನಾವಣಾ-ಸಂಬಂಧಿತ ಚಟುವಟಿಕೆಗಳಲ್ಲಿ ತೊಡಗಿರುವ ಜನರು ಕೋವಿಡ್ ಸೂಕ್ತ ನಡವಳಿಕೆಯನ್ನು (CAB) ಅನುಸರಿಸುವಂತೆ ಸೂಚಿಸಲಾಗಿದೆ.

ಎಲ್ಲಾ ಅರ್ಹ ಮತಗಟ್ಟೆ ಸಿಬ್ಬಂದಿ, ಭದ್ರತಾ ಸಿಬ್ಬಂದಿ ಮತ್ತು ಎಣಿಕೆ ಸಿಬ್ಬಂದಿ ಸಂಪೂರ್ಣವಾಗಿ ಲಸಿಕೆಯನ್ನು ಪಡೆದಿರಬೇಕಾಗಿದೆ. ಪ್ರಮುಖವಾಗಿ ಬೂಸ್ಟರ್ ಡೋಸ್ ತೆಗೆದುಕೊಂಡಿರಬೇಕು. ಹೊರಾಂಗಣ/ಒಳಾಂಗಣ ಸಭೆಗಳು, ರ್ಯಾಲಿಗಳು ಅಥವಾ ಯಾತ್ರೆಗಳ ಸಮಯದಲ್ಲಿ ಕೋವಿಡ್ ಸೂಕ್ತ ನಡವಳಿಕೆಯನ್ನು ಅನುಸರಿಸದಿದ್ದರೆ, ಸಂಘಟಕರನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತದೆ ಎಂದು ಎಚ್ಚರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿ.ಕೆ ಶಿವಕುಮಾರ್; ಮಧ್ಯಾಹ್ನ 2.30ಕ್ಕೆ ರಾಜೀನಾಮೆ; ಸಿದ್ದರಾಮಯ್ಯ ಮಾಹಿತಿ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT