ಸಚಿವ ಮಾಧುಸ್ವಾಮಿ 
ರಾಜ್ಯ

ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಗೆ ವಿರೋಧ: ಸಚಿವ ಮಾಧುಸ್ವಾಮಿ ಸ್ವಕ್ಷೇತ್ರದಲ್ಲಿ ಚುನಾವಣೆ ಬಹಿಷ್ಕಾರ ಬೆದರಿಕೆ ಹಾಕಿದ ಜನತೆ!

ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಗೆ ಕಾನೂನು ಸಚಿವ ಮಾಧುಸ್ವಾಮಿಯವರ ಸ್ವಕ್ಷೇತ್ರ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಕಿಲಾರದಹಳ್ಳಿ ತಾಂಡಾದ ಲಂಬಾಣಿ ಸಮುದಾಯದವರು ವಿರೋಧ ವ್ಯಕ್ತಪಡಿಸಿದ್ದು, ಚುನಾವಣೆ ಬಹಿಷ್ಕರಿಸುವುದಾಗಿ ಬೆದರಿಕೆ ಹಾಕಿದ್ದಾರೆ.

ಶಿರಾ: ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಗೆ ಕಾನೂನು ಸಚಿವ ಮಾಧುಸ್ವಾಮಿಯವರ ಸ್ವಕ್ಷೇತ್ರ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಕಿಲಾರದಹಳ್ಳಿ ತಾಂಡಾದ ಲಂಬಾಣಿ ಸಮುದಾಯದವರು ವಿರೋಧ ವ್ಯಕ್ತಪಡಿಸಿದ್ದು, ಚುನಾವಣೆ ಬಹಿಷ್ಕರಿಸುವುದಾಗಿ ಬೆದರಿಕೆ ಹಾಕಿದ್ದಾರೆ.

ರಾಜ್ಯ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಒಳಮೀಸಲಾತಿ ಶಿಫಾರಸು ಮಾಡಿರುವುದನ್ನು ವಿರೋಧಿಸಿ ಲಂಬಾಣಿ ಸಮುದಾಯದವರು ತಾಂಡದಲ್ಲಿ ಪ್ರತಿಭಟನೆ ನಡೆಸಿದರು.

ಸರ್ಕಾರದ ಈ ನೀತಿಯಿಂದ ಲಂಬಾಣಿ ಜನಾಂಗಕ್ಕೆ ಹೆಚ್ಚಿನ ಅನ್ಯಾಯವಾಗಲಿದೆ. ಮೀಸಲಾತಿ ನಮ್ಮ‌ ಹಕ್ಕು, ಭಿಕ್ಷೆಯಲ್ಲ‌. ಆದ್ದರಿಂದ, ಕೇಂದ್ರ ಸರ್ಕಾರಕ್ಕೆ‌ ಮಾಡಿರುವ ಶಿಫಾರಸು ವಾಪಸ್ ಪಡೆಯುವಂತೆ ಒತ್ತಾಯಿಸಿದರು.

ಅಲ್ಲದೆ, ವಿಧಾನಸಭೆ ಚುನಾವಣೆಯನ್ನು ಬಹಿಷ್ಕರಿಸುತ್ತಿದ್ದು ಯಾವುದೇ ಪಕ್ಷದವರು ಸಹ ಗ್ರಾಮದಲ್ಲಿ ಪ್ರವೇಶ ಮಾಡದಂತೆ ಪ್ಲೆಕ್ಸ್ ಹಾಕಿದ್ದಾರೆ.

ಪ್ರತಿಭಟನೆಯಲ್ಲಿ ಶಿರಾ ತಾಲ್ಲೂಕು ಲಂಬಾಣಿ ಶ್ರೇಯೋಭಿವೃದ್ಧಿ ಸಂಘದ ಅಧ್ಯಕ್ಷ ಕೆ.ಎನ್.ಶೇಷ ನಾಯಕ್, ಚಂದ್ರನಾಯಕ್ ಇದ್ದರು. ಈ ಕುಗ್ರಾಮದಲ್ಲಿ ಸುಮಾರು 630 ಮತದಾರರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT