ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ 
ರಾಜ್ಯ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ಪ್ಲಾಜಾ ತೆರವಿಗೆ NHAI ಚಿಂತನೆ

ದುಬಾರಿ ಟೋಲ್ ವಿಚಾರವಾಗಿ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಇದೀಗ ಟೋಲ್ ಪ್ಲಾಜಾಗಳನ್ನು ತೆರವುಗೊಳಿಸಲು ಭಾರತೀಯ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ ಚಿಂತನೆ ನಡೆಸಿದೆ. 

ಬೆಂಗಳೂರು: ದುಬಾರಿ ಟೋಲ್ ವಿಚಾರವಾಗಿ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಇದೀಗ ಟೋಲ್ ಪ್ಲಾಜಾಗಳನ್ನು ತೆರವುಗೊಳಿಸಲು ಭಾರತೀಯ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ ಚಿಂತನೆ ನಡೆಸಿದೆ. 

ಹೌದು.. ಟೋಲ್ ದರ ದುಬಾರಿ ಎಂದು ಪ್ರಯಾಣಿಕರು ಆರೋಪ ಮಾಡುತ್ತಿರುವ ಹೊತ್ತಿನಲ್ಲೇ ತೀವ್ರ ವಿವಾದಕ್ಕೆ ಕಾರಣವಾಗಿರುವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಇದೀಗ ಟೋಲ್ ಪ್ಲಾಜಾಗಳನ್ನು ತೆರವುಗೊಳಿಸಲು ಭಾರತೀಯ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ ಚಿಂತನೆ ನಡೆಸಿದೆ. ಎಲ್ಲಾ ರೀತಿಯ ಟೋಲ್ ಪ್ಲಾಜಾಗಳನ್ನು ತೆರವುಗೊಳಿಸಲು ಮುಂದಾಗಿರುವ ಪ್ರಾಧಿಕಾರ ಟೋಲ್ ಸಂಗ್ರಹ ದಂಡ ಸಂಗ್ರಹಕ್ಕೆ ಆಟೊಮ್ಯಾಟಿಕ್ ನಂಬರ್ ಪ್ಲೇಟ್ ರೆಕಗ್ನಿಶನ್ ತಂತ್ರಜ್ಞಾನ ಬಳಸಿಕೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈಗಾಗಲೇ ಈ ಮಾದರಿಯನ್ನು ನವದೆಹಲಿ -ಮೀರತ್ ಎಕ್ಸ್‌ಪ್ರೆಸ್‌ವೇನಲ್ಲಿ ಬಳಸುತ್ತಿದೆ. ಕ್ರಮೇಣ ಇತರ ಎಕ್ಸ್‌ಪ್ರೆಸ್‌ವೇಗಳು ಮತ್ತು ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಿಸ್ತರಿಸಲಿದೆ. ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲೂ ಈ ತಂತ್ರಜ್ಞಾನ ಅಳವಡಿಕೆಯಾಗುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ. ಈ ತಂತ್ರಜ್ಞಾನದ ಅಡಿಯಲ್ಲಿ ಟೋಲ್ ಶುಲ್ಕವು ಫಾಸ್ಟ್ ಟ್ಯಾಗ್ ಮೂಲಕ ಕಡಿತವಾಗಲಿದೆ. ವಾಹನದ ಪ್ರವೇಶ ಮತ್ತು ನಿರ್ಗಮನದ ವೇಳೆ ಎಎನ್‌ಪಿಆರ್ ಕ್ಯಾಮೆರಾಗಳು ಬಳಕೆಯಾಗಲಿವೆ. ಎನ್‌ಎಚ್‌ಎಐ ಹೆದ್ದಾರಿಗಳ 89 ಎಂಟ್ರಿ ಮತ್ತು ಎಕ್ಸಿಟ್ ಪಾಯಿಂಟ್‌ಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸಲು ಯೋಜಿಸಿದೆ ಎಂದು ಹೇಳಲಾಗುತ್ತದೆ.

ಬೆಂಗಳೂರು-ನಿಡಘಟ್ಟ ಎಕ್ಸ್‌ವೇ ಸೆಕ್ಷನ್‌ನಲ್ಲಿ ಎರಡು ಟೋಲ್ ಪ್ಲಾಜಾಗಳು ಇವೆ. ನಿಡಘಟ್ಟ-ಮೈಸೂರು ಸೆಕ್ಷನ್‌ನಲ್ಲಿ ಇನ್ನೆರಡು ಟೋಲ್ ಪ್ಲಾಜಾಗಳನ್ನು ಎನ್‌ಎಚ್‌ಎಐ ಅಳವಡಿಸಲಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಇನ್ನೂ, ಬಿಡದಿ, ಚನ್ನಪಟ್ಟಣ ಮತ್ತು ರಾಮನಗರಕ್ಕೆ ತೆರಳುವವರಿಗೆ ಉಂಟಾಗುವ ಅನಾನುಕೂಲದ ಬಗ್ಗೆ ಪ್ರತಿಕ್ರಿಯಿಸಿರುವ ಎನ್‌ಎಚ್‌ಎಐ ಅಧಿಕಾರಿಗಳು, ಎಕ್ಸ್‌ಪ್ರೆಸ್ ವೇಯ ಇಕ್ಕೆಲಗಳಲ್ಲೂ ಎರಡು ಲೇನ್‌ಗಳ ಸರ್ವೀಸ್ ರಸ್ತೆ ಇದ್ದು, ಅದರಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಉಲ್ಲೇಖಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT