ಸಂಗ್ರಹ ಚಿತ್ರ 
ರಾಜ್ಯ

ಶಿವಮೊಗ್ಗ: ರೂ.4.5 ಕೋಟಿ ಮೌಲ್ಯದ ಸೀರೆ, ನಗದು, ಅಕ್ಕಿ ವಶಕ್ಕೆ

ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ  ನಡುವಲ್ಲೇ ಹಣದ ಹೊಳೆ ಹರಿಯುತ್ತಿದ್ದು, ಜಿಲ್ಲೆಯ ಮೂಲೆ ೂಲೆಯಲ್ಲಿ ಅಕ್ರಮ ಹಣ ಹಾಗೂ ಕೋಟ್ಯಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಶಿವಮೊಗ್ಗ: ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಈ  ನಡುವಲ್ಲೇ ಹಣದ ಹೊಳೆ ಹರಿಯುತ್ತಿದ್ದು, ಜಿಲ್ಲೆಯ ಮೂಲೆ ೂಲೆಯಲ್ಲಿ ಅಕ್ರಮ ಹಣ ಹಾಗೂ ಕೋಟ್ಯಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳು ಒಂದೇ ದಿನ ಬರೋಬ್ಬರಿ 4.5 ಕೋಟಿ ಮೌಲ್ಯದ ಸೀರೆ, ನಗದು, ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಶಿವಮೊಗ್ಗ ಜಿಲ್ಲೆಯ ವಿವಿಧ ಚೆಕ್‌ಪೋಸ್ಟ್‌ಗಳಲ್ಲಿ ಶುಕ್ರವಾರ ರಾತ್ರಿ ಸೂಕ್ತ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 4.5 ಕೋಟಿ ಮೌಲ್ಯದ ಸೀರೆ, 1.6 ಕೋಟಿ ನಗದು, 1.56 ಲಕ್ಷ ಮೌಲ್ಯದ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿದ್ದು, ನಿತ್ಯ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 4.5 ಕೋಟಿ ರೂಪಾಯಿ ಮೌಲ್ಯದ ಸೀರೆಗಳು ಹಾಗೂ ತುಂಗಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 1.40 ಕೋಟಿ ರೂಪಾಯಿ ನಗದು ವಶಪಡಿಸಿಕೊಳ್ಳಲಾಗಿದೆ.

ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 20 ಲಕ್ಷ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಇದಲ್ಲದೆ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಲಾರಿಯಲ್ಲಿ ಸಾಗಿಸುತ್ತಿದ್ದ ಸುಮಾರು 1.56 ಲಕ್ಷ ಮೌಲ್ಯದ 26 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ