ದ್ವಿಚಕ್ರ ವಾಹನದ ಟೈರ್ ಸ್ಫೋಟ; ಟೆಕಿ ಸಾವು 
ರಾಜ್ಯ

ಬೆಂಗಳೂರು: ಚಲಿಸುತ್ತಿದ್ದ ವೇಳೆ ದ್ವಿಚಕ್ರ ವಾಹನದ ಟೈರ್ ಸ್ಫೋಟ; ಟೆಕಿ ಸಾವು

ಚಲಿಸುತ್ತಿದ್ದ ವೇಳೆ ದ್ವಿಚಕ್ರ ವಾಹನದ ಟೈರ್ ಸ್ಫೋಟಗೊಂಡ ಪರಿಣಾಮ ಟೆಕ್ಕಿಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು: ಚಲಿಸುತ್ತಿದ್ದ ವೇಳೆ ದ್ವಿಚಕ್ರ ವಾಹನದ ಟೈರ್ ಸ್ಫೋಟಗೊಂಡ ಪರಿಣಾಮ ಟೆಕ್ಕಿಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಹೊಸಕೆರೆಹಳ್ಳಿ ಬಳಿಯ ನೈಸ್ ರಸ್ತೆಯಲ್ಲಿ ಸ್ಕೂಟರ್ ಟೈರ್ ಸ್ಫೋಟಗೊಂಡು ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು, ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸಾಪ್ಟ್‌ವೇರ್ ಇಂಜಿನಿಯರ್ ಸುಲೋಚನಾ ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಹೊಸಕೆರೆಹಳ್ಳಿಯ ನೈಸ್ ರಸ್ತೆಯಲ್ಲಿ ನಡೆದ ಅಪಘಾತ ಪ್ರಕರಣದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಸಾಫ್ಟ್‌ವೇರ್ ಇಂಜನಿಯರ್ ಸುಲೋಚನಾ (24) ಸಾವನ್ನಪ್ಪಿದ್ದಾರೆ ಎಂದು ಡಿಸಿಪಿ ಸುಮನ್ ಪನ್ನೇಕರ್ ತಿಳಿಸಿದ್ದಾರೆ.

ಸುಲೋಚನಾ

ಕೋರಮಂಗಲದಿಂದ ಹೊಸಕೆರೆಹಳ್ಳಿ ಕಡೆಗೆ ಸುಲೋಚನಾ ಮತ್ತು ಆಕೆಯ ಸ್ನೇಹಿತ ಆನಂದ್ ಹೋಗುತ್ತಿದ್ದರು. ಈ ವೇಳೆ ಸ್ನೇಹಿತ ಆನಂದ್ ಪೂರ್ಣ ಹೆಲ್ಮೇಟ್ ಧರಿಸಿದ್ದು, ಸುಲೋಚನಾ ಅರ್ಧ ಹೆಲ್ಮೆಟ್ ಧರಿಸಿದ್ದರು. ಇನ್ನು ನೈಸ್ ರಸ್ತೆಯಲ್ಲಿ ವೇಗವಾಗಿ ಹೋಗುವಾಗ ಸ್ಕೂಟರ್‌ನ ಟೈರ್ ಸ್ಪೋಟಗೊಂಡು ರಸ್ತೆ ಬದಿಯ ಕಬ್ಬಿಣದ ತಡೆಗೋಡೆಗೆ ಹೋಗಿ ಡಿಕ್ಕಿ ಹೊಡೆದು ಬಿದ್ದಿದ್ದಾರೆ. ರಸ್ತೆಗೆ ಬಿದ್ದ ರಭಸಕ್ಕೆ ಇಬ್ಬರಿಗೂ ತಲೆ ಹಾಗೂ ದೇಹದ ಇತರೆ ಭಾಗಗಳಿಗೆ ತೀವ್ರ ಪೆಟ್ಟಾಗಿತ್ತು. ಇಬ್ಬರೂ ಗಾಯಾಳುಗಳು ತೀವ್ರ ರಕ್ತಸ್ರಾವ ಉಂಟಾಗಿ ರಸ್ತೆ ಬದಿ ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದು ನರಳುತ್ತಿದ್ದರು. 

ಸ್ಕೂಟರ್ ಸವಾರರು ಗಾಯಗೊಂಡು ಬಿದ್ದಿರುವುದನ್ನು ಕಂಡ ದಾರಿಹೋಕರು ಗಮನಿಸಿ ಇಬ್ಬರೂ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಸುಲೋಚನಾ ಅರ್ಧ ಹೆಲ್ಮೆಟ್ ಧರಿಸಿದ್ದರಿಂದ ತಲೆಗೆ ತೀವ್ರ ಹೊಡೆತ ಬಿದ್ದಿದ್ದು, ಕಿವಿಯಲ್ಲಿಯೂ ರಕ್ತಸ್ರಾವ ಉಂಟಾಗಿತ್ತು. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ ಹಿನ್ನೆಲೆಯಲ್ಲಿ ಚಿಕಿತ್ಸೆ ಫಲಿಸದೇ ಸುಲೋಚನಾ ಇಂದು ಬೆಳಗ್ಗಿನ ವೇಳೆ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ. ನಂತರ ಸುಲೋಚನಾ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಆನಂದ್ ಗಂಭೀರ
ಸುಲೋಚನಾಳೊಂದಿಗೆ ಹೋಗುತ್ತಿದ್ದ ಇಂಜಿನಿಯರ್ ಆನಂದ್ ದೊಡ್ಡ ಹೆಲ್ಮೆಟ್ ಧರಿಸಿದ್ದರಿಂದ ಅವರು ನೆಲಕ್ಕೆ ಬಿದ್ದರೂ ತಲೆಗೆ ಹೆಚ್ಚಿನ ಗಾಯವಾಗಿಲ್ಲ. ಆದರೆ, ಎದೆ ಮತ್ತು ದೇಹದ ಇತರೆ ಭಾಗಗಳಿಗೆ ಗಂಭೀರ ಗಾಯವಾಗಿದ್ದು, ಒಂದು ಕಡೆ ಕೈ ಮುರಿತವಾಗಿದೆ. ಅವರ ಸ್ಥಿತಿಯೂ ಕೂಡ ಗಂಭೀರವಾಗಿದೆ. ಸುಲೋಚನಾ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಕೆಂಗೇರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

Chinnaswamy stampede: 'ನಿಮ್ಮೊಂದಿಗೆ ನಾವಿದ್ದೇವೆ..' 3 ತಿಂಗಳ ಬಳಿಕ ಕೊನೆಗೂ ಮೌನ ಮುರಿದ RCB, ಹೇಳಿದ್ದೇನು?

ಜಮ್ಮುವಿನಲ್ಲಿ 24 ಗಂಟೆಗಳಲ್ಲಿ ದಾಖಲೆಯ 380 ಮಿಮೀ ಮಳೆ!

ಅಮೆರಿಕದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಭಾರತ ಹೆಚ್ಚಿನ ಸುಂಕ ವಿಧಿಸಬೇಕು: ಕೇಜ್ರಿವಾಲ್

SCROLL FOR NEXT