ಪ್ರಾತಿನಿಧಿಕ ಚಿತ್ರ 
ರಾಜ್ಯ

ಕುಮಟಾ: ಬಸ್ ನಿಲ್ದಾಣದಲ್ಲಿ ಪಾನ್ ಜಗಿದು ಉಗುಳಿದ ಪ್ರಯಾಣಿಕ, ಆತನಿಂದಲೇ ಸ್ವಚ್ಛಗೊಳಿಸಿದ ಸಾರ್ವಜನಿಕರು

ನಾಗರಿಕ ಪ್ರಜ್ಞೆ ಇಲ್ಲದವರಿಗೆ ಪಾಠ ಕಲಿಸುವ ಸಲುವಾಗಿ ಕುಮಟಾ ಬಸ್ ನಿಲ್ದಾಣದಲ್ಲಿ ಪಾನ್ ಜಗಿಯುವ ಪ್ರಯಾಣಿಕರೊಬ್ಬರು ಪ್ಲಾಟ್‌ಫಾರ್ಮ್‌ನಲ್ಲಿ ಉಗುಳಿದ ನಂತರ, ಸಾರ್ವಜನಿಕರು ಅದನ್ನು ಆತನೇ ಸ್ವಚ್ಛಗೊಳಿಸುವಂತೆ ಮಾಡಿದರು. ಕಾರವಾರಕ್ಕೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಪಾನ್ ಅನ್ನು ಪ್ಲಾಟ್‌ಫಾರ್ಮ್‌ನಲ್ಲಿ ಉಗುಳಿರುವ ಘಟನೆ ಭಾನುವಾರ ನಡೆದಿದೆ.

ಕುಮಟಾ: ನಾಗರಿಕ ಪ್ರಜ್ಞೆ ಇಲ್ಲದವರಿಗೆ ಪಾಠ ಕಲಿಸುವ ಸಲುವಾಗಿ ಕುಮಟಾ ಬಸ್ ನಿಲ್ದಾಣದಲ್ಲಿ ಪಾನ್ ಜಗಿಯುವ ಪ್ರಯಾಣಿಕರೊಬ್ಬರು ಪ್ಲಾಟ್‌ಫಾರ್ಮ್‌ನಲ್ಲಿ ಉಗುಳಿದ ನಂತರ, ಸಾರ್ವಜನಿಕರು ಅದನ್ನು ಆತನೇ ಸ್ವಚ್ಛಗೊಳಿಸುವಂತೆ ಮಾಡಿದರು.

ಕಾರವಾರಕ್ಕೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಪಾನ್ ಅನ್ನು ಪ್ಲಾಟ್‌ಫಾರ್ಮ್‌ನಲ್ಲಿ ಉಗುಳಿರುವ ಘಟನೆ ಭಾನುವಾರ ನಡೆದಿದೆ. ಈ ವೇಳೆ ಅಲ್ಲಿ ನಿಂತಿದ್ದವರು ಸಿಟ್ಟಿಗೆದ್ದು, ಇದು ಉಗುಳುವ ಸ್ಥಳವೇ ಎಂದು ಆತನನ್ನು ಪ್ರಶ್ನಿಸಿದ್ದಾರೆ.

'ನೀವು ಹೇಗೆ ಅನಾಗರಿಕರಾಗಿದ್ದೀರಿ? ಎಂದು ಮತ್ತೋರ್ವ ಪ್ರಯಾಣಿಕರು ಪ್ರಶ್ನಿಸಿದ್ದರೆ, ಅಲ್ಲೇ ಇದ್ದ ಮತ್ತೊಬ್ಬರು, ಈ ಸ್ಥಳವನ್ನು ಆತನೇ ಸ್ವಚ್ಛಗೊಳಿಸಲಿ ಎಂಬ ಕಲ್ಪನೆಯನ್ನು ಮುಂದಿಟ್ಟರು. ಪಾನ್ ಉಗುಳಿದ್ದ ವ್ಯಕ್ತಿಯೇ ತನ್ನ ಬಳಿಯಿರುವ ಬಟ್ಟೆಯಿಂದ ಆ ಸ್ಥಳವನ್ನು ಒರೆಸಬೇಕೆಂದು ಒತ್ತಾಯಿಸಿದರು.

ಅಷ್ಟರಲ್ಲಾಗಲೇ ಬಸ್ ಹೊರಡುವ ಸೂಚನೆ ನೀಡುತ್ತಾ ಹಾರ್ನ್ ಮಾಡತೊಡಗಿತು. ಇದನ್ನೇ ನೆಪವಾಗಿಟ್ಟುಕೊಂಡ ಆತ, ತನ್ನ ಹೆಸರನ್ನು ಹೇಳಲು ನಿರಾಕರಿಸಿ ತಾನು ಹೋಗಬೇಕೆಂದು ಹೇಳುತ್ತಾನೆ. ಆದರೆ, ಇತರರು, 'ಬಸ್ ಎಲ್ಲಿಗೆ ಹೋಗುತ್ತದೆ? ನಾವು ಅದನ್ನು ನಿಲ್ಲಿಸುತ್ತೇವೆ. ಬಟ್ಟೆಯನ್ನು ತೆಗೆದುಕೊಂಡು ಅದನ್ನು ಸ್ವಚ್ಛಗೊಳಿಸಿ' ಎಂದು ಪಟ್ಟು ಹಿಡಿಯುತ್ತಾರೆ.

ಬಳಿಕ ವ್ಯಕ್ತಿ ಬಸ್ಸಿನಿಂದ ಕೆಳಗಿಳಿದು, ಬಟ್ಟೆ ಮತ್ತು ನೀರನ್ನು ತಂದು ನೆಲದ ಮೇಲಿನ ಪಾನ್ ಕಲೆಯನ್ನು ತಾನೇ ಸ್ವಚ್ಛಗೊಳಿಸುತ್ತಾನೆ. ಇಡೀ ಘಟನೆ ಮೊಬೈಲ್‌ನಲ್ಲಿ ದಾಖಲಾಗಿದ್ದು, ವೈರಲ್ ಆಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ