ಪ್ರಾತಿನಿಧಿಕ ಚಿತ್ರ 
ರಾಜ್ಯ

ಕುಮಟಾ: ಬಸ್ ನಿಲ್ದಾಣದಲ್ಲಿ ಪಾನ್ ಜಗಿದು ಉಗುಳಿದ ಪ್ರಯಾಣಿಕ, ಆತನಿಂದಲೇ ಸ್ವಚ್ಛಗೊಳಿಸಿದ ಸಾರ್ವಜನಿಕರು

ನಾಗರಿಕ ಪ್ರಜ್ಞೆ ಇಲ್ಲದವರಿಗೆ ಪಾಠ ಕಲಿಸುವ ಸಲುವಾಗಿ ಕುಮಟಾ ಬಸ್ ನಿಲ್ದಾಣದಲ್ಲಿ ಪಾನ್ ಜಗಿಯುವ ಪ್ರಯಾಣಿಕರೊಬ್ಬರು ಪ್ಲಾಟ್‌ಫಾರ್ಮ್‌ನಲ್ಲಿ ಉಗುಳಿದ ನಂತರ, ಸಾರ್ವಜನಿಕರು ಅದನ್ನು ಆತನೇ ಸ್ವಚ್ಛಗೊಳಿಸುವಂತೆ ಮಾಡಿದರು. ಕಾರವಾರಕ್ಕೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಪಾನ್ ಅನ್ನು ಪ್ಲಾಟ್‌ಫಾರ್ಮ್‌ನಲ್ಲಿ ಉಗುಳಿರುವ ಘಟನೆ ಭಾನುವಾರ ನಡೆದಿದೆ.

ಕುಮಟಾ: ನಾಗರಿಕ ಪ್ರಜ್ಞೆ ಇಲ್ಲದವರಿಗೆ ಪಾಠ ಕಲಿಸುವ ಸಲುವಾಗಿ ಕುಮಟಾ ಬಸ್ ನಿಲ್ದಾಣದಲ್ಲಿ ಪಾನ್ ಜಗಿಯುವ ಪ್ರಯಾಣಿಕರೊಬ್ಬರು ಪ್ಲಾಟ್‌ಫಾರ್ಮ್‌ನಲ್ಲಿ ಉಗುಳಿದ ನಂತರ, ಸಾರ್ವಜನಿಕರು ಅದನ್ನು ಆತನೇ ಸ್ವಚ್ಛಗೊಳಿಸುವಂತೆ ಮಾಡಿದರು.

ಕಾರವಾರಕ್ಕೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೊಬ್ಬರು ಪಾನ್ ಅನ್ನು ಪ್ಲಾಟ್‌ಫಾರ್ಮ್‌ನಲ್ಲಿ ಉಗುಳಿರುವ ಘಟನೆ ಭಾನುವಾರ ನಡೆದಿದೆ. ಈ ವೇಳೆ ಅಲ್ಲಿ ನಿಂತಿದ್ದವರು ಸಿಟ್ಟಿಗೆದ್ದು, ಇದು ಉಗುಳುವ ಸ್ಥಳವೇ ಎಂದು ಆತನನ್ನು ಪ್ರಶ್ನಿಸಿದ್ದಾರೆ.

'ನೀವು ಹೇಗೆ ಅನಾಗರಿಕರಾಗಿದ್ದೀರಿ? ಎಂದು ಮತ್ತೋರ್ವ ಪ್ರಯಾಣಿಕರು ಪ್ರಶ್ನಿಸಿದ್ದರೆ, ಅಲ್ಲೇ ಇದ್ದ ಮತ್ತೊಬ್ಬರು, ಈ ಸ್ಥಳವನ್ನು ಆತನೇ ಸ್ವಚ್ಛಗೊಳಿಸಲಿ ಎಂಬ ಕಲ್ಪನೆಯನ್ನು ಮುಂದಿಟ್ಟರು. ಪಾನ್ ಉಗುಳಿದ್ದ ವ್ಯಕ್ತಿಯೇ ತನ್ನ ಬಳಿಯಿರುವ ಬಟ್ಟೆಯಿಂದ ಆ ಸ್ಥಳವನ್ನು ಒರೆಸಬೇಕೆಂದು ಒತ್ತಾಯಿಸಿದರು.

ಅಷ್ಟರಲ್ಲಾಗಲೇ ಬಸ್ ಹೊರಡುವ ಸೂಚನೆ ನೀಡುತ್ತಾ ಹಾರ್ನ್ ಮಾಡತೊಡಗಿತು. ಇದನ್ನೇ ನೆಪವಾಗಿಟ್ಟುಕೊಂಡ ಆತ, ತನ್ನ ಹೆಸರನ್ನು ಹೇಳಲು ನಿರಾಕರಿಸಿ ತಾನು ಹೋಗಬೇಕೆಂದು ಹೇಳುತ್ತಾನೆ. ಆದರೆ, ಇತರರು, 'ಬಸ್ ಎಲ್ಲಿಗೆ ಹೋಗುತ್ತದೆ? ನಾವು ಅದನ್ನು ನಿಲ್ಲಿಸುತ್ತೇವೆ. ಬಟ್ಟೆಯನ್ನು ತೆಗೆದುಕೊಂಡು ಅದನ್ನು ಸ್ವಚ್ಛಗೊಳಿಸಿ' ಎಂದು ಪಟ್ಟು ಹಿಡಿಯುತ್ತಾರೆ.

ಬಳಿಕ ವ್ಯಕ್ತಿ ಬಸ್ಸಿನಿಂದ ಕೆಳಗಿಳಿದು, ಬಟ್ಟೆ ಮತ್ತು ನೀರನ್ನು ತಂದು ನೆಲದ ಮೇಲಿನ ಪಾನ್ ಕಲೆಯನ್ನು ತಾನೇ ಸ್ವಚ್ಛಗೊಳಿಸುತ್ತಾನೆ. ಇಡೀ ಘಟನೆ ಮೊಬೈಲ್‌ನಲ್ಲಿ ದಾಖಲಾಗಿದ್ದು, ವೈರಲ್ ಆಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT