ವಿಡಿಯೊದಿಂದ ಪಡೆದ ಚಿತ್ರ 
ರಾಜ್ಯ

ಮ್ಯೂಸಿಕ್ ಸೌಂಡ್ ಕಡಿಮೆ ಮಾಡುವಂತೆ ಹೇಳಿದ ಸೇನಾಧಿಕಾರಿ ಸೋದರನ ಮೇಲೆ ಹಲ್ಲೆ, ತೀವ್ರ ಗಾಯಗೊಂಡು ಸಾವು: ಬೆಂಗಳೂರಿನಲ್ಲೊಂದು ಅಮಾನುಷ ಕೃತ್ಯ

ಪಕ್ಕದ ಮನೆಯಲ್ಲಿ ಡಿಜೆ ಮ್ಯೂಸಿಕ್ ನ ಸೌಂಡನ್ನು ಕಡಿಮೆ ಮಾಡುವಂತೆ ಹೇಳಿದ್ದಕ್ಕೆ ಅಪರಿಚಿತ ವ್ಯಕ್ತಿಗಳು ಸೇನಾಧಿಕಾರಿಯ ಸೋದರನನ್ನು ಹೊಡೆದು ಕೊಂದಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

ಬೆಂಗಳೂರು: ಪಕ್ಕದ ಮನೆಯಲ್ಲಿ ಡಿಜೆ ಮ್ಯೂಸಿಕ್ ನ ಸೌಂಡನ್ನು ಕಡಿಮೆ ಮಾಡುವಂತೆ ಹೇಳಿದ್ದಕ್ಕೆ ಅಪರಿಚಿತ ವ್ಯಕ್ತಿಗಳು ಸೇನಾಧಿಕಾರಿಯ ಸೋದರನನ್ನು ಹೊಡೆದು ಕೊಂದಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

ಮೃತ ವ್ಯಕ್ತಿಯನ್ನು 54 ವರ್ಷದ ಲಾಯ್ಡ್ ನೆಹೆಮಿಯಾ ಎಂದು ಗುರುತಿಸಲಾಗಿದೆ, ಇವರು ಕಾಶ್ಮೀರದಲ್ಲಿ ಕರ್ನಲ್‌ ಆಗಿ ಸೇವೆ ಸಲ್ಲಿಸುತ್ತಿರುವ ಸೇನಾಧಿಕಾರಿಯ ಸಹೋದರರಾಗಿದ್ದಾರೆ, ಇವರು ತಮ್ಮ ನೆರೆಮನೆಯವರು ಮ್ಯೂಸಿಕ್ ಹಾಕಿದ್ದ ವೇಳೆ ಅದರ ಸೌಂಡ್ ಹೆಚ್ಚಾಗಿದ್ದರಿಂದ ಅನಾರೋಗ್ಯದಲ್ಲಿರುವ ತಾಯಿಗೆ ತೊಂದರೆಯಾಗುತ್ತದೆ, ಮ್ಯೂಸಿಕ್ ಸೌಂಡ್ ಕಡಿಮೆ ಮಾಡಿ ಎಂದು ಕೇಳಿಕೊಂಡರಂತೆ. ಅದಕ್ಕೆ ಕುಡಿದ ಮತ್ತಿನಲ್ಲಿದ್ದ ಮೂರರಿಂದ ಆರು ಮಂದಿ ಸೇನಾಧಿಕಾರಿಯ ಸೋದರ ಮತ್ತು ಸೋದರಿ ಮೇಲೆ ಹಲ್ಲೆ ನಡೆಸಿದ್ದಾರೆ. ತೀವ್ರ ಗಾಯಗೊಂಡ ಸೋದರ ನಿನ್ನೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 

ಮೊನ್ನೆ ಏಪ್ರಿಲ್ 2 ರಂದು ಮುಂಜಾನೆ ಈ ಘಟನೆ ನಡೆದಿದ್ದು, ಎಚ್‌ಎಎಲ್ ಪೊಲೀಸ್ ಠಾಣೆ ವ್ಯಾಪ್ತಿಯ ವಿಜ್ಞಾನನಗರದ ಬೃಂದಾವನ ಎಸ್ಟೇಟ್‌ನಲ್ಲಿ ಭಾರತೀಯ ಸೇನೆಯ ಸೇವೆ ಸಲ್ಲಿಸುತ್ತಿರುವ ಕರ್ನಲ್‌ನ ಸಹೋದರ ಮತ್ತು ಸಹೋದರಿಯ ಮೇಲೆ 3-6 ಕುಡುಕ ಯುವಕರು ಹಲ್ಲೆ ನಡೆಸಿದ್ದಾರೆ.

ಸೇವೆ ಸಲ್ಲಿಸುತ್ತಿರುವ ಅಧಿಕಾರಿಯ ತಾಯಿ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅಧಿಕಾರಿಯ ಸಹೋದರ ಲಾಯ್ಡ್ ನೆರೆಹೊರೆಯವರಲ್ಲಿ ಮ್ಯೂಸಿಕ್ ಸೌಂಡ್ ಕಡಿಮೆ ಮಾಡುವಂತೆ ವಿನಂತಿಸಿಕೊಂಡಾಗ ನಿರಾಕರಿಸಿ ಶಾಂತವಾಗಿರುವಂತೆ ಕೇಳಿದಾಗ, ಪಾನಮತ್ತ ಯುವಕ ಲಾಯ್ಡ್ ಮನೆಗೆ ನುಗ್ಗಿ ಅವರನ್ನು ರಸ್ತೆಗೆ ಎಳೆದು ತಂದು ಹಲ್ಲೆ ನಡೆಸಿದ್ದಾರೆ. ಅದನ್ನು ತಡೆಯಲು ಪ್ರಯತ್ನಿಸಿದ ಸಹೋದರಿಯ ಮೇಲೂ ಹಲ್ಲೆ ನಡೆಸಿದ್ದಾರೆ. ತೀವ್ರ ಗಾಯಕ್ಕೀಡಾದ ಸೇನಾಧಿಕಾರಿಯ ಸಹೋದರನನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT