ಮಹಿಳೆಯೊಂದಿಗೆ ಮಾತಿನ ಚಕಮಕಿ ನಡೆಸುತ್ತಿರುವ ಸಂತೋಷ್ ಕುಮಾರ್. 
ರಾಜ್ಯ

ಬೆಂಗಳೂರು: ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಟಿಟಿಇ ಕೆಲಸದಿಂದ ವಜಾ

ನಗರದ ಕೆಎಸ್​ಆರ್ ರೈಲು ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರ ಬಳಿ ಅಸಭ್ಯವಾಗಿ ವರ್ತಿಸಿದ್ದ ರೈಲ್ವೆ ಟಿಕೆಟ್ ಪರೀಕ್ಷಕ (ಟಿಟಿಇ)ನನ್ನು ಕೆಲಸದಿಂದ ವಜಾಗೊಳಿಸಲಾಗಿದೆ.

ಬೆಂಗಳೂರು: ನಗರದ ಕೆಎಸ್​ಆರ್ ರೈಲು ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರ ಬಳಿ ಅಸಭ್ಯವಾಗಿ ವರ್ತಿಸಿದ್ದ ರೈಲ್ವೆ ಟಿಕೆಟ್ ಪರೀಕ್ಷಕ (ಟಿಟಿಇ)ನನ್ನು ಕೆಲಸದಿಂದ ವಜಾಗೊಳಿಸಲಾಗಿದೆ.

ಸತತ ದೂರುಗಳು ಬಂದ ಹಿನ್ನೆಲೆಯಲ್ಲಿ ಟಿಟಿಇ ವಿ.ಸಂತೋಷ್ ಕುಮಾರ್ ಅವರನ್ನು ನೈಋತ್ಯ ರೈಲ್ವೆ ವಲಯವು ಸೇವೆಯಿಂದ ವಜಾಗೊಳಿಸಿದೆ.

ಮಾರ್ಚ್ 14 ರಂದು ಕೃಷ್ಣರಾಜಪುರಂ ರೈಲು ನಿಲ್ದಾಣದಲ್ಲಿ ಯುವತಿಯೊಂದಿಗೆ ಸಂತೋಷ್ ಕುಮಾರ್ ಅನುಚಿತವಾಗಿ ವರ್ತಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಸಂಬಂಧ ತೀವ್ರ ಟೀಕೆಗಳು ವ್ಯಕ್ತವಾಗಿದ್ದವು.

ಮಾರ್ಚ್ 17 ರಂದು ಐಪಿಸಿಯ ಸೆಕ್ಷನ್ 354 ಅಡಿಯಲ್ಲಿ ಬೆಂಗಳೂರು ಕಂಟೋನ್ಮೆಂಟ್‌ನಲ್ಲಿರುವ ಸರ್ಕಾರಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಮಹಿಳೆ ಸಂತೋಷ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಸಂತೋಷ್ ವಿರುದ್ಧ ಕ್ರಮ ಕೈಗೊಂಡಿದ್ದ ಅಧಿಕಾರಿಗಳು, ಆವರನ್ನು ಸೇವೆಯಿಂದ ಅಮಾನತುಗೊಳಿಸಿದ್ದರು. ಇದೀಗ ರೈಲ್ವೇ ಆಂತರಿಕ ವಿಭಾಗವು ಸಂತೋಷ್ ವಿರುದ್ಧ ಮೂರು ಆರೋಪಟ್ಟಿಗಳನ್ನು ಸಲ್ಲಿಸಿದ್ದು, ಆರೋಪ ಪಟ್ಟಿ ಹಿನ್ನೆಲೆಯಲ್ಲಿ ಸಂತೋಷ್ ವಿರುದ್ಧ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ಬೆಂಗಳೂರು ಆಡಳಿತ ವಿಭಾಗದ ಹೆಚ್ಚುವರಿ ವಿಭಾಗೀಯ ರೈಲ್ವೇ ವ್ಯವಸ್ಥಾಪಕಿ ಕುಸುಮಾ ಹರಿಪ್ರಸಾದ್ ಅವರು ಮಾತನಾಡಿ, ಆಗಾಗ್ಗೆ ಗೈರುಹಾಜರಾಗುವುದು ಮತ್ತು ಸಾರ್ವಜನಿಕರೊಂದಿಗೆ ಅಸಭ್ಯ ವರ್ತನೆಗೆ ಸೇರಿದಂತೆ ಸಂತೋಷ್ ವಿರುದ್ಧ ಸಾರ್ವಜನಿಕರಿಂದ ಈ ಹಿಂದೆ ಹಲವು ದೂರುಗಳು ಕೇಳಿ ಬಂದಿದ್ದು, ಈ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಪ್ರಕರಣ ಸಂಬಂಧ ರೈಲ್ವೇ ಪೊಲೀಸರು ಮಾರ್ಚ್ 21 ರಂದು ಸಂತೋಷ್ ಅವರನ್ನು ಬಂಧನಕ್ಕೊಳಪಡಿಸಿ, 14ನೇ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿತ್ತು. ವಿಚಾರಣೆ ನಡೆಸಿದ್ದ ನ್ಯಾಯಾಲಯ, ಸಂತೋಷ್ ನನ್ನು ಸೆರೆವಾಸಕ್ಕೆ ರವಾನಿಸಿತ್ತು. ಮೂರು ದಿನಗಳ ಕಾಲ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಸಂತೋಷ್ ನಂತರ ಜಾಮೀನು ಪಡೆದು ಹೊರಬಂದಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT