ಸಂಜೀವ್ ಮಠಂದೂರು 
ರಾಜ್ಯ

ಅಪರಿಚಿತ ಮಹಿಳೆಯೊಂದಿಗಿನ ಖಾಸಗಿ ಫೋಟೊಗಳು ವೈರಲ್; ದೂರು ದಾಖಲಿಸಿದ ಬಿಜೆಪಿ ಶಾಸಕ

ಅಪರಿಚಿತ ಮಹಿಳೆಯೊಂದಿಗಿರುವ ಖಾಸಗಿ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕ ಸಂಜೀವ ಮಠಂದೂರು ಗುರುವಾರ ಪೊಲೀಸರಿಗೆ ದೂರು ನೀಡಿದ್ದಾರೆ.

ಬೆಂಗಳೂರು: ಅಪರಿಚಿತ ಮಹಿಳೆಯೊಂದಿಗಿರುವ ಖಾಸಗಿ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕ ಸಂಜೀವ ಮಠಂದೂರು ಗುರುವಾರ ಪೊಲೀಸರಿಗೆ ದೂರು ನೀಡಿದ್ದಾರೆ.

ತನ್ನನ್ನು ಮೂಲೆಗುಂಪು ಮಾಡುವ ಪಿತೂರಿಯ ಭಾಗವಾಗಿ ಫೋಟೊಗಳನ್ನು ಎಡಿಟ್ ಮಾಡಿ ವೈರಲ್ ಮಾಡಲಾಗಿದೆ ಎಂದು ಮಠಂದೂರು ಹೇಳಿದ್ದಾರೆ. ಅವರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಫೋಟೊಗಳನ್ನು ವೈರಲ್ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಎಫ್‌ಐಆರ್‌ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಈ ಬೆಳವಣಿಗೆಯು ಮೇ ತಿಂಗಳಲ್ಲಿ ನಡೆಯಲಿರುವ ಚುನಾವಣೆಗೆ ಮುನ್ನ ಕರ್ನಾಟಕದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಅಪರಿಚಿತ ಮಹಿಳೆಯೊಂದಿಗೆ ಜಾಲಿ ಮೂಡ್‌ನಲ್ಲಿರುವ ಫೋಟೊಗಳು ದಕ್ಷಿಣ ಕನ್ನಡ ಜಿಲ್ಲೆಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಇದು ಬಿಜೆಪಿ ಒಳಜಗಳದ ಪರಿಣಾಮ ಎಂದು ಮೂಲಗಳು ತಿಳಿಸಿವೆ. ಮಠಂದೂರಿಗೆ ಟಿಕೆಟ್ ನಿರಾಕರಿಸುವಂತೆ ಪಕ್ಷದ ಮೇಲೆ ಒತ್ತಡ ಹೇರುವುದು ಈ ಕೃತ್ಯದ ಹಿಂದಿರುವ ಉದ್ದೇಶ ಎಂದು ಮೂಲಗಳು ತಿಳಿಸಿವೆ. ಅವರ ವಿರುದ್ಧ ತೀವ್ರ ಲಾಬಿ ನಡೆಯುತ್ತಿದೆ ಮತ್ತು ಕಾಂಗ್ರೆಸ್ ಕೂಡ ಈ ಸ್ಥಾನವನ್ನು ಗೆಲ್ಲಲು ಬಯಸಿದೆ ಎಂದಿವೆ. 

2018ರ ಚುನಾವಣೆಯಲ್ಲಿ ಮಠಂದೂರು ಕಾಂಗ್ರೆಸ್ ಅಭ್ಯರ್ಥಿ ಶಕುಂತಲಾ ಶೆಟ್ಟಿ ಅವರನ್ನು 19,447 ಮತಗಳಿಂದ ಸೋಲಿಸಿದ್ದರು.
ಈ ಹಿಂದೆಯೂ ಖಾಸಗಿ ವಿಡಿಯೋ ಮೂಲಕ ಮಠಂದೂರು ಬಗ್ಗೆ ವದಂತಿ ಹಬ್ಬಿತ್ತು. ಈ ಬೆಳವಣಿಗೆಯನ್ನು ಪಕ್ಷ ಗಂಭೀರವಾಗಿ ಪರಿಗಣಿಸಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. 

ಹಿಂದೂ ಕಾರ್ಯಕರ್ತ ಅರುಣ್ ಕುಮಾರ್ ಮತ್ತು ಕೈಗಾರಿಕೋದ್ಯಮಿ, ಸಾಮಾಜಿಕ ಕಾರ್ಯಕರ್ತ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರ ಬೆಂಬಲಿಗ ಅಶೋಕ್ ರೈ ಕೂಡ ಪುತ್ತೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ಭಾರತೀಯರು ಬಗ್ಗದೇ ಹೋದರೆ...." ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾ ನೇರಾ ಬೆದರಿಕೆ!

SCO summit: ಟ್ರಂಪ್ ಗೆ ಸೆಡ್ಡು, ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

ಧರ್ಮಸ್ಥಳ ಪ್ರಕರಣ: ಹೊಸ ದೂರು ದಾಖಲು, ದೂರುದಾರನ ಮಂಪರು ಪರೀಕ್ಷೆಗೆ ಸೌಜನ್ಯ ತಾಯಿ ಒತ್ತಾಯ!

ಮಂಗಳೂರು: KSRTC ಬಸ್ ಬ್ರೇಕ್ ಫೇಲ್; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು; Video

$34.2 Trillion GDP: 2038ರ ವೇಳೆಗೆ ಅಮೆರಿಕ ಹಿಂದಿಕ್ಕಿ, ಭಾರತ 2ನೇ ಅತಿದೊಡ್ಡ ಆರ್ಥಿಕತೆ- EY ವರದಿ

SCROLL FOR NEXT