ಪಿಯೂಷ್ ಗೋಯಲ್ 
ರಾಜ್ಯ

2018ರಲ್ಲಿ ಮಾಡಿದ ತಪ್ಪನ್ನು ಮತ್ತೆ ಮಾಡದಿರಿ, ಡಬಲ್ ಇಂಜಿನ್ ಬಿಜೆಪಿ ಸರ್ಕಾರಕ್ಕೆ ಬಹುಮತ ನೀಡಿ: ಮತದಾರರಿಗೆ ಪಿಯೂಷ್ ಗೋಯಲ್ ಮನವಿ

2018ರ ಚುನಾವಣೆಯಲ್ಲಿ ಮಾಡಿದ್ದ ತಪ್ಪನ್ನು ಪುನರಾವರ್ತಿಸದಿರಿ. ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಡಬಲ್ ಇಂಜಿನ್ ಬಿಜೆಪಿ ಸರ್ಕಾರಕ್ಕೆ ಸಂಪೂರ್ಣ ಬಹುಮತ ನೀಡಿ ಎಂದು ಮತದಾರರಿಗೆ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರು ಶುಕ್ರವಾರ ಮನವಿ ಮಾಡಿಕೊಂಡಿದ್ದಾರೆ.

ಬೆಂಗಳೂರು: 2018ರ ಚುನಾವಣೆಯಲ್ಲಿ ಮಾಡಿದ್ದ ತಪ್ಪನ್ನು ಪುನರಾವರ್ತಿಸದಿರಿ. ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಡಬಲ್ ಇಂಜಿನ್ ಬಿಜೆಪಿ ಸರ್ಕಾರಕ್ಕೆ ಸಂಪೂರ್ಣ ಬಹುಮತ ನೀಡಿ ಎಂದು ಮತದಾರರಿಗೆ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರು ಶುಕ್ರವಾರ ಮನವಿ ಮಾಡಿಕೊಂಡಿದ್ದಾರೆ.

ಫೆಡರೇಶನ್ ಆಫ್ ಕರ್ನಾಟಕ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (ಎಫ್‌ಕೆಸಿಸಿಐ) ಯೊಂದಿಗಿನ ಸಂವಾದದಲ್ಲಿ ಮಾತನಾಡಿರುವ ಅವರು, ಕರ್ನಾಟಕ ಜನರ ಕಲ್ಯಾಣಕ್ಕೆ ಬದ್ಧವಾಗಿರುವ ಮತ್ತು ಉತ್ತಮ ಆಡಳಿತವನ್ನು ನೀಡುವ ಬಲಿಷ್ಠ ಮತ್ತು ಏಕಪಕ್ಷೀಯ ಸರ್ಕಾರವನ್ನು ಆಯ್ಕೆ ಮಾಡುವಂತೆ ಜನತೆಗೆ ಮನವಿ ಮಾಡಿಕೊಂಡರು.

2018ರ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಬಹುಮತ ಸಿಕ್ಕಿರಲಿಲ್ಲ. ನಂದರ ಸಮ್ಮಿಶ್ರ ಸರ್ಕಾರ ರಚಿಸಲು ಕಾಂಗ್ರೆಸ್ ಮತ್ತು ಜೆಡಿಎಸ್ ಕೈಜೋಡಿಸಿದ್ದವು. ನಂತರ ಕಾಂಗ್ರೆಸ್, ಜೆಡಿಎಸ್ ನಾಯಕರು ಬಿಜೆಪಿಗೆ ಪಕ್ಷಾಂತರಗೊಂಡು ಬಿಜೆಪಿ ಸರ್ಕಾರ ರಚನೆ ಮಾಡಿತ್ತು. ಈ ಮೂಲಕ ಏಕೈಕ ದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿತು.

ಕರ್ನಾಟಕದಲ್ಲಿ ಬಿಜೆಪಿಯ ಸಂಪೂರ್ಣ ಬಹುಮತದ ಸರ್ಕಾರ ಬರಬೇಕೆಂದು ನಾವು ಬಯಸುತ್ತಿದ್ದೇವೆ. ಕಳೆದ ಬಾರಿ ನೀವು ಮಾಡಿದ ತಪ್ಪನ್ನು ಪುನರಾವರ್ತಿಸದಿರಿ. ನಮ್ಮನ್ನು ಬಿಟ್ಟು ಎಲ್ಲೋ ಹೋಗಬೇಡಿ ಇದರಿಂದ ಇತರರು ಕರ್ನಾಟಕದ ಜನರ ಜನಾದೇಶಕ್ಕೆ ಮೋಸ ಮಾಡಬಹುದು. ಪ್ರಧಾನಿ ಮೋದಿಯವರ ಮಾರ್ಗದರ್ಶನ ಮತ್ತು ನಾಯಕತ್ವದಲ್ಲಿ ಸಂಪೂರ್ಣ ಬಹುಮತದೊಂದಿಗೆ ಉತ್ತಮವಾದ ಪ್ರಬಲ ಏಕಪಕ್ಷೀಯ ಸರ್ಕಾರವು ಕರ್ನಾಟಕವನ್ನು ಪರಿವರ್ತಿಸುತ್ತದೆ, ಪ್ರಕ್ರಿಯೆಯನ್ನು ಸುಧಾರಿಸುತ್ತದೆ, ತಂತ್ರಜ್ಞಾನವನ್ನು ಆಡಳಿತಕ್ಕೆ ತರುತ್ತದೆ ಮತ್ತು ಕರ್ನಾಟಕದ ಅಭಿವೃದ್ಧಿಯನ್ನು ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ವೇಗಗೊಳಿಸುತ್ತದೆ ಎಂದು ಹೇಳಿದರು.

ಬಳಿಕ ಕೇಂದ್ರದಲ್ಲಿ ಮೋದಿ ನೇತೃತ್ವದ ಸರ್ಕಾರದ ವಿವಿಧ ಉಪಕ್ರಮಗಳು ಮತ್ತು ಕಾರ್ಯಕ್ರಮಗಳನ್ನು ಪಟ್ಟಿ ಮಾಡಿದರು.

ಕಳೆದ ಒಂಬತ್ತು ವರ್ಷಗಳಲ್ಲಿ ಮೋದಿ ಸರ್ಕಾರವು ಬಲವಾದ ಸ್ಥೂಲ ಆರ್ಥಿಕ ಮೂಲಭೂತ ಅಡಿಪಾಯವನ್ನು ರಚಿಸಿದೆ, ಅದರ ಮೇಲೆ ದೇಶವು ಭವಿಷ್ಯದಲ್ಲಿ ದಶಕಗಳವರೆಗೆ ಬೆಳೆಯಬಹುದಾಗಿದೆ. "ಇಂದು ನಾವು ವಿಶ್ವದ ಅತ್ಯಂತ ಕಡಿಮೆ ಹಣದುಬ್ಬರವನ್ನು ಹೊಂದಿದ್ದೇವೆ, ಕರೆನ್ಸಿಗಳಿಗೆ ಹೋಲಿಸಿದರೆ ನಮ್ಮ ಕರೆನ್ಸಿ ಬಲಗೊಂಡಿದೆ. ಇತರ ಕರೆನ್ಸಿಗಳು ಅಮೆರಿಕಾ ಡಾಲರ್‌ಗಿಂತ ಹೆಚ್ಚು ಕುಸಿತ ಕಂಡಿವೆ. ರಷ್ಯಾ-ಉಕ್ರೇನ್ ಯುದ್ಧದಂತಹ ಜಾಗತಿಕ ಬಿಕ್ಕಟ್ಟುಗಳ ಹೊರತಾಗಿಯೂ, ಭಾರತದ ಹಣದುಬ್ಬರವು 6-6 ರಷ್ಟಿತ್ತು ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT