ಸಂಗ್ರಹ ಚಿತ್ರ 
ರಾಜ್ಯ

ಕೋವಿಡ್ ಪ್ರಕರಣ ಹೆಚ್ಚಳ: ಆತಂಕ ಬೇಡ, ಮುನ್ನೆಚ್ಚರಿಕೆ ವಹಿಸಿ; ವೈದ್ಯರ ಸಲಹೆ

ನೆರೆಯ ರಾಜ್ಯ ಕೇರಳದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 11,000 ಗಡಿ ದಾಟಿದ್ದು, ಈ ಬೆಳವಣಿಗೆ ರಾಜ್ಯದಲ್ಲೂ ಸೋಂಕು ಹೆಚ್ಚಳವಾಗುವ ಕುರಿತು ಆತಂಕ ಹುಟ್ಟಿಸಿದೆ. ಈ ಹಿನ್ನೆಲೆಯಲ್ಲಿ ಆತಂಕ ಬೇಡ, ಮುನ್ನೆಚ್ಚರಿಕೆ ವಹಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಬೆಂಗಳೂರು: ನೆರೆಯ ರಾಜ್ಯ ಕೇರಳದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 11,000 ಗಡಿ ದಾಟಿದ್ದು, ಈ ಬೆಳವಣಿಗೆ ರಾಜ್ಯದಲ್ಲೂ ಸೋಂಕು ಹೆಚ್ಚಳವಾಗುವ ಕುರಿತು ಆತಂಕ ಹುಟ್ಟಿಸಿದೆ. ಈ ಹಿನ್ನೆಲೆಯಲ್ಲಿ ಆತಂಕ ಬೇಡ, ಮುನ್ನೆಚ್ಚರಿಕೆ ವಹಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ರಾಜ್ಯದಲ್ಲಿ ಸಕ್ರಿಯ ಪ್ರಕರಣ ಸ್ವಲ್ಪ ಹೆಚ್ಚಾಗಿದೆ. ಆದರೆ, ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯಲ್ಲಿ ಹೆಚ್ಚಳಗಳಿಲ್ಲ ಹೀಗಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ರೋಗ ಲಕ್ಷಣ ಇರುವವರಿಗೆ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದ್ದು, ಪ್ರತಿನಿತ್ಯ ಸರಾಸರಿ 9,000 ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷ ಡಾ.ಎಂ.ಕೆ.ಸುದರ್ಶನ್ ಮಾತನಾಡಿ, ಜನರು ಕೋವಿಡ್ ಸೂಕ್ತ ನಡವಳಿಕೆಯನ್ನು ಅನುಸರಿಸದಿರುವುದು ಪ್ರಕರಣಗಳ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ. ಆದರೆ, ಈ ಪ್ರವೃತ್ತಿಯು ಹೆಚ್ಚು ಕಾಲ ಮುಂದುವರಿಯುವುದಿಲ್ಲ ಎಂದು ಹೇಳಿದ್ದಾರೆ.

ILI ಮತ್ತು SARI, ಅಡೆನೊವೈರಸ್, H3N2 ಮತ್ತು H1N1 ಪ್ರಕರಣಗಳಿಂದ ಎದುರಾಗುತ್ತಿರುವ ಸಾವುಗಳು ಕೆಲವೇ ದಿನಗಳ ಕಾಲವಷ್ಟೇ ಇರಲಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ನೇಪಾಳ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋದವು ಒಂಬತ್ತು ಜಲವಿದ್ಯುತ್ ಕೇಂದ್ರಗಳು!

ದಿಢೀರ್‌ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!

ಚಾಣಕ್ಯನ ಅರ್ಥಶಾಸ್ತ್ರದಲ್ಲಿ ಸಾಲದ ಪರಿಕಲ್ಪನೆ ಹೀಗಿತ್ತು ! (ಹಣಕ್ಲಾಸು)