ಸ್ಥಗಿತಗೊಂಡಿರುವ ನಿರ್ಮಾಣ ಕಾರ್ಯ. 
ರಾಜ್ಯ

7 ವರ್ಷಗಳ ಬಳಿಕ ಕಣ್ಮಿಣಿಕೆ ಹಂತ-1 ಯೋಜನೆ ಪುನರಾರಂಭಕ್ಕೆ ಬಿಡಿಎ ಮುಂದು!

ಅಪಾರ ನಷ್ಟ ಹಿನ್ನೆಲೆಯಲ್ಲಿ ಏಳು ವರ್ಷಗಳ ಹಿಂದೆ ಗುತ್ತಿಗೆದಾರರು ಕೈಬಿಟ್ಟಿದ್ದ ಮೈಸೂರು ರಸ್ತೆಯ ಕಣ್ಮಿಣಿಕೆ ಹಂತ-1 ಯೋಜನೆಗೆ ಮರುಜೀವ ನೀಡಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದೆ.

ಬೆಂಗಳೂರು: ಅಪಾರ ನಷ್ಟ ಹಿನ್ನೆಲೆಯಲ್ಲಿ ಏಳು ವರ್ಷಗಳ ಹಿಂದೆ ಗುತ್ತಿಗೆದಾರರು ಕೈಬಿಟ್ಟಿದ್ದ ಮೈಸೂರು ರಸ್ತೆಯ ಕಣ್ಮಿಣಿಕೆ ಹಂತ-1 ಯೋಜನೆಗೆ ಮರುಜೀವ ನೀಡಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದೆ.

ಇತ್ತೀಚೆಗೆ ನಡೆದ ಬಿಡಿಎ ಆಡಳಿತ ಮಂಡಳಿ ಸಭೆಯಲ್ಲಿ ಯೋಜನೆಗೆ ಒಪ್ಪಿಗೆ ನೀಡಲಾಗಿದ್ದು, ಚುನಾವಣಾ ನೀತಿ ಸಂಹಿತೆ ತೆರವುಗೊಂಡ ಬಳಿಕ ಯೋಜನೆಗೆ ಗುತ್ತಿಗೆ ಕರೆಯಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.

ನಗರದಾದ್ಯಂತ ಪ್ರಾರಂಭವಾದ 167 ಕೋಟಿ ರೂ.ಗಳ ವಸತಿ ಯೋಜನೆಗಳ ಪೈಕಿ, ಈ ಯೋಜನೆಯೊಂದು ಹಳ್ಳ ಹಿಡಿದಿತ್ತು. ಯೋಜನೆಯಡಿಯಲ್ಲಿ ಒಟ್ಟು 608 1ಬಿಹೆಚ್'ಕೆ, 384 2ಬಿಹೆಚ್'ಕೆ ಮತ್ತು 320 3ಬಿಹೆಚ್'ಕೆ ಫ್ಲಾಟ್‌ಗಳು ನಿರ್ಮಾಣವಾಗಬೇಕಿತ್ತು. ಗುತ್ತಿಗೆದಾರರಾದ ದೀಪಕ್ ಕೇಬಲ್ಸ್ (ಭಾರತ) ಅವರು, ಯೋಜನೆಯನ್ನು ಡಿಸೆಂಬರ್ 2014 ರೊಳಗೆ ಪೂರ್ಣಗೊಳಿಸಬೇಕಿತ್ತು. 19 ಬ್ಲಾಕ್‌ಗಳ ಪೈಕಿ 7 ಬ್ಲಾಕ್‌ಗಳನ್ನು (ಪ್ರತಿ ಬ್ಲಾಕ್‌ಗೆ 40 ಫ್ಲಾಟ್‌ಗಳು) ಪೂರ್ಣಗೊಳಿಸಿದ್ದರು. ಎಲ್ಲವೂ 1ಬಿಹೆಚ್'ಕೆ ವರ್ಗದಲ್ಲಿವೆ ಎಂದು ಉನ್ನತ ಬಿಡಿಎ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಫ್ಲಾಟ್ ಗಳಲ್ಲಿ ಒಳಾಂಗಣವಿಲ್ಲದೆ ಮೂಲಭೂತ ರಚನೆಗಳಷ್ಟನ್ನೇ ನಿರ್ಮಾಣ ಮಾಡಲಾಗಿತ್ತು. ಇದಕ್ಕಾಗಿ ರೂ.20 ಕೋಟಿ ಗಳನ್ನು ನೀಡಲಾಗಿತ್ತು. ಆದರೆ, ನಷ್ಟವಾಗಿದೆ ಎಂದು ಹೇಳಿ, ಗುತ್ತಿಗೆಯಿಂದ ಹೊರ ನಡೆದರು ಎಂದು ಹೇಳಿದ್ದಾರೆ.

ಇದಾದ ಒಂದು ವರ್ಷದ ನಂತರ ಮೇವರಿಕ್ ಹೋಲ್ಡಿಂಗ್ಸ್ ಹೊಸ ಟೆಂಡರ್‌ಗೆ ಪ್ರತಿಕ್ರಿಯೆ ನೀಡಿ, ಯೋಜನೆ ಪೂರ್ಣಗೊಳಿಸಲು ಮುಂದೆ ಬಂದಿತು. ಆದರೆ, ಬಿಡಿಎ ಇದಕ್ಕೆ ಒಪ್ಪಿಗೆ ನೀಡಲಿಲ್ಲ.

ನಗರದಾದ್ಯಂತ ಹಲವಾರು ಫ್ಲಾಟ್‌ಗಳನ್ನು ಪೂರ್ಣಗೊಳಿಸಲಾಗಿದೆ. ಈ ಫ್ಲ್ಯಾಟ್ ಗಳ ಮಾರಾಟಕ್ಕೆ ಸಿದ್ಧತೆಗಳ ನಡೆಸಲಾಗುತ್ತಿದೆ. ಕಣ್ಮಿನಿಕೆ ಹಂತ-2, 3 ಮತ್ತು 4ದ ಫ್ಲಾಟ್‌ಗಳ ಖರೀದಿಗೆ ಜನರು ಮುಂದೆ ಬರುತ್ತಿಲ್ಲ. ಈ ಫ್ಲ್ಯಾಟ್ ಗಳ ಮಾರಾಟದತ್ತ ಗಮನಹರಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಸ್ಥಗಿತಗೊಂಡಿರುವ ಕಾಮಗಾರಿಯಿಂದಾಗಿ ಬಿಡಿಎ ಕೋಟಿಗಟ್ಟಲೆ ನಷ್ಟವನ್ನು ಅನುಭವಿಸಿದೆ. ಫ್ಲ್ಯಾಟ್ ಗಳ ಮಾರಾಟ ಮಾಡಿ ಆದಾಯ ಗಳಿಸಬೇಕಿತ್ತು. ಆಸ್ತಿ ತೆರಿಗೆಯನ್ನೂ ಸಂಗ್ರಹಿಸಬೇಕಿತ್ತು. ಹೀಗಾಗಿ ಫ್ಲ್ಯಾಟ್ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT