ಬಿಡಬ್ಲ್ಯುಎಸ್ ಎಸ್ ಬಿ ಕೊಳಚೆನೀರಿನ ಘಟಕ 
ರಾಜ್ಯ

ಕಳೆದ 100 ದಿನಗಳಲ್ಲಿ ನಾಲ್ಕನೇ ಬಾರಿ ಮೀನುಗಳ ಸಾವು: ಬಿಡಬ್ಲ್ಯುಎಸ್ ಎಸ್ ಬಿ ಅಧಿಕಾರಿಗಳ ನಿರ್ಲಕ್ಷತನ ಎಂದ ತಜ್ಞರು

ಕಳೆದ 4 ತಿಂಗಳಲ್ಲಿ ಬೆಂಗಳೂರಿನಲ್ಲಿ ಕೆರೆಯಲ್ಲಿ ಮೀನುಗಳ ಸಾವಿನ ನಾಲ್ಕನೇ ಪ್ರಕರಣ ವರದಿಯಾಗಿದೆ. ಕೆರೆ ನೀರಿಗೆ ಆಮ್ಲಜನಕ ಸವಕಳಿ ಸೇರಿ ಮೀನುಗಳು ಸಾಯುತ್ತಿವೆ. ಇನ್ನು ಕೆರೆಗಳಿಗೆ ಕೊಳಚೆ ನೀರು ಸೇರುವುದನ್ನು ತಡೆಯುವಲ್ಲಿ ಬಿಡಬ್ಲ್ಯುಎಸ್ ಎಸ್ ಬಿ ವಿಫಲವಾಗಿದೆ ಎಂದು ಪರಿಸರ ಮತ್ತು ಜಲಸಂರಕ್ಷಣೆ ಕಾರ್ಯಕರ್ತರು ಆರೋಪಿಸುತ್ತಿದ್ದಾರೆ. 

ಬೆಂಗಳೂರು: ಕಳೆದ 4 ತಿಂಗಳಲ್ಲಿ ಬೆಂಗಳೂರಿನಲ್ಲಿ ಕೆರೆಯಲ್ಲಿ ಮೀನುಗಳ ಸಾವಿನ ನಾಲ್ಕನೇ ಪ್ರಕರಣ ವರದಿಯಾಗಿದೆ. ಕೆರೆ ನೀರಿಗೆ ಆಮ್ಲಜನಕ ಸವಕಳಿ ಸೇರಿ ಮೀನುಗಳು ಸಾಯುತ್ತಿವೆ. ಇನ್ನು ಕೆರೆಗಳಿಗೆ ಕೊಳಚೆ ನೀರು ಸೇರುವುದನ್ನು ತಡೆಯುವಲ್ಲಿ ಬಿಡಬ್ಲ್ಯುಎಸ್ ಎಸ್ ಬಿ ವಿಫಲವಾಗಿದೆ ಎಂದು ಪರಿಸರ ಮತ್ತು ಜಲಸಂರಕ್ಷಣೆ ಕಾರ್ಯಕರ್ತರು ಆರೋಪಿಸುತ್ತಿದ್ದಾರೆ. 

ಕೆರೆ ಸಂರಕ್ಷಣೆ ಹೋರಾಟಗಾರ ಮತ್ತು ಆಕ್ಷನ್ ಏಡ್ ಪ್ರಾಜೆಕ್ಟ್ ನ ಹಿರಿಯ ರಾಘವೇಂದ್ರ ಬಿ ಪಚ್ಚಪುರ್, ಕಳೆದ ಫೆಬ್ರವರಿಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಹೂಡಿಯ ಸೀತಾರಾಮ್ ಪಾಳ್ಯ ಕೆರೆಯನ್ನು ಇ ವಿಭಾಗವಾಗಿ ವರ್ಗೀಕರಿಸಿತ್ತು. ಆದರೆ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಕ್ರಮ ಕೈಗೊಳ್ಳುತ್ತಿದ್ದರೆ ಮೀನುಗಳು ಸಾಯುವುದನ್ನು ತಡೆಯಬಹುದಾಗಿತ್ತು. ಇ ವಿಭಾಗವೆಂದರೆ ಆ ನೀರು ಕೈಗಾರಿಕೆಯ ಬಳಕೆಗೆ ಮಾತ್ರ ಬಳಸಲು ಸಾಧ್ಯವಿರುತ್ತದೆ. ವನ್ಯಜೀವಿಗಳು ಮತ್ತು ಮೀನುಗಾರಿಕೆಗೆ ಬಳಸಲು ಯೋಗ್ಯವಲ್ಲ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಹೇಳುತ್ತದೆ.

ಬಿಡಬ್ಲ್ಯುಎಸ್ ಎಸ್ ಬಿ ಅಥವಾ ಬಿಬಿಎಂಪಿ ಅಧಿಕಾರಿಗಳು ಕಚ್ಚಾ ಕೊಳಚೆನೀರು ಕೆರೆ ಸೇರುವುದನ್ನು ತಡೆದಿದ್ದರೆ ಸಣ್ಣ ಮೀನುಗಳು ಸಾಮೂಹಿಕವಾಗಿ ಸಾಯುವುದನ್ನು ತಡೆಯಬಹುದಾಗಿತ್ತು. ಕಳೆದ 100 ದಿನಗಳಲ್ಲಿ ಈ ರೀತಿ ಮೀನುಗಳು ಸಾಯುತ್ತಿರುವುದು ಇದು ನಾಲ್ಕನೇ ಬಾರಿ ಎಂದರು. 

ಬೆಂಗಳೂರಿನ ನಾಗರಿಕ ಕಾರ್ಯಕರ್ತ ಸಂದೀಪ್ ಅನಿರುದ್ಧ್ ಸಹ ಇದೇ ಮಾತನ್ನು ಹೇಳುತ್ತಾರೆ. ಕೊಳಕು ನೀರು ಒಳಚರಂಡಿ ಮೂಲಕ ಕೆರೆಗೆ ಸೇರುತ್ತದೆ. ಮಳೆನೀರು ಕೊಯ್ಲಿನ ನೀರು ಮಾತ್ರ ಹೋಗಬೇಕು ಆದರೆ ಹಾಗಾಗುತ್ತಿಲ್ಲ. BWSSB ನೀರು ಸರಬರಾಜು ಮಾಡುವುದು ಮತ್ತು ಶುಚಿತ್ವ ಕಾಪಾಡುವುದು ಮಾತ್ರ ತನ್ನ ಕೆಲಸ ಎಂದು ಭಾವಿಸುತ್ತದೆ. ಆದರೆ ಜಲ ಪ್ರಾಧಿಕಾರವು ಜಲಮೂಲವನ್ನು ಸಂರಕ್ಷಿಸಬೇಕು ಮತ್ತು ಒಳಚರಂಡಿ ಮತ್ತು ಮಾಲಿನ್ಯಕಾರಕಗಳ ನೀರುಗಳು, ವಸ್ತುಗಳು ಪ್ರವೇಶವನ್ನು ತಡೆಯಬೇಕು ಎನ್ನುತ್ತಾರೆ.

ಈ ಬಗ್ಗೆ ಕಾರ್ಯಕರ್ತರು ಕೆಎಸ್ ಪಿಸಿಬಿ ಅಧಿಕಾರಿಗಳು ಮತ್ತು ಮಹದೇವಪುರ ವಲಯದ ಪರಿಸರ ಅಧಿಕಾರಿ ಮಹೇಂದ್ರ ಬಳಿ ದೂರು ನೀಡಿದ್ದು ಅವರು ತಪಾಸಣೆಗೆ ತಮ್ಮ ತಂಡವನ್ನು ಕಳುಹಿಸಿದ್ದರು. ನಾವು ಕೆಲವು ಸ್ಥಳಗಳನ್ನು ಪರೀಕ್ಷಿಸಿ ನೀರಿನ ಮಾದರಿಯನ್ನು ಸಂಗ್ರಹಿಸಿದ್ದೇವೆ. ಕೊಳಕು ನೀರು ಸೇರ್ಪಡೆಯಾಗಿರುವುದು ಪತ್ತೆಯಾದರೆ ಬಿಡಬ್ಲ್ಯುಎಸ್ಎಸ್ ಬಿಗೆ ನೊಟೀಸ್ ಕಳುಹಿಸುತ್ತೇವೆ ಎಂದು ಮಾಲಿನ್ಯ ನಿಯಂತ್ರಣ ಮಂಡಳಿಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಬಿಡಬ್ಲ್ಯುಎಸ್‌ಎಸ್‌ಬಿಯ ತ್ಯಾಜ್ಯ ನೀರು ವಿಭಾಗದ ಮುಖ್ಯ ಎಂಜಿನಿಯರ್ ವಿ ಗಂಗಾಧರ್ ಅವರು ಈ ಪ್ರದೇಶವು ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಹೇಳಿದರು. ಬಿಬಿಎಂಪಿಗೆ ವಿಲೀನಗೊಂಡ 110 ಹಳ್ಳಿಗಳಲ್ಲಿ ನೀರು ಮತ್ತು ಒಳಚರಂಡಿ ಸಂಪರ್ಕದ ಜವಾಬ್ದಾರಿಯನ್ನು ಹಿರಿಯ ಅಧಿಕಾರಿಗಳಿಗೆ ವಹಿಸಲಾಗಿದೆ. ಕೆರೆ ಬಿಡಿಎ ಅಧೀನದಲ್ಲಿದ್ದು, 2021ರಲ್ಲಿ ಪಾಲಿಕೆಗೆ ಹಸ್ತಾಂತರಿಸಲಾಗಿದೆ ಎಂದು ಬಿಬಿಎಂಪಿ ಕೆರೆ ವಿಭಾಗ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

SCROLL FOR NEXT