ಸಾಂದರ್ಭಿಕ ಚಿತ್ರ 
ರಾಜ್ಯ

10 ಸೆಂ.ಮೀ ಮಳೆ ಬಂದರೆ ಬೆಂಗಳೂರಿನ 2,023 ಸ್ಥಳಗಳಲ್ಲಿ ಸಮಸ್ಯೆ ಕಟ್ಟಿಟ್ಟ ಬುತ್ತಿ! ಜೆಡಿಎಸ್ ಕಿಡಿ

ಒಂದು ದಿನದ ಅವಧಿಯಲ್ಲಿ ಬೆಂಗಳೂರಿನಲ್ಲಿ 10 ಸೆಂ.ಮೀ. ಮಳೆ ಬಂದರೆ 2,023 ಸ್ಥಳಗಳಲ್ಲಿ ಸಮಸ್ಯೆ ಎದುರಾಗಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಲ್ಲಿ ಹೇಳಲಾಗಿದೆ. ಈ ವರದಿ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ವಿರುದ್ಧ ಜೆಡಿಎಸ್ ಕಿಡಿಕಾರಿದೆ. 

ಬೆಂಗಳೂರು: ಒಂದು ದಿನದ ಅವಧಿಯಲ್ಲಿ ಬೆಂಗಳೂರಿನಲ್ಲಿ 10 ಸೆಂ.ಮೀ. ಮಳೆ ಬಂದರೆ 2,023 ಸ್ಥಳಗಳಲ್ಲಿ ಸಮಸ್ಯೆ ಎದುರಾಗಲಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ವರದಿಯಲ್ಲಿ ಹೇಳಲಾಗಿದೆ. 

ಈ ವರದಿ ಕುರಿತು ಟ್ವೀಟ್ ಮಾಡಿರುವ ಜೆಡಿಎಸ್, ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ವಿರುದ್ಧ ಕಿಡಿಕಾರಿದೆ.  ಕೇವಲ ಒಂದು ಸೆಂಟಿಮೀಟರ್ ಮಳೆಗೆ ಬೆಂಗಳೂರಿನ ಐದು ಪ್ರದೇಶಗಳು ಮುಳುಗಡೆಯ ಭೀತಿ ಎದುರಿಸಲಿವೆ ಎಂದು ವರದಿಯಲ್ಲಿ ಹೇಳಲಾಗಿದೆ. ಇದು ಕಳೆದ ಹದಿನೈದು ವರ್ಷಗಳಲ್ಲಿ ಹೆಚ್ಚು ಕಾಲ ಅಧಿಕಾರ ನಡೆಸಿದ ಎರಡೂ ರಾಷ್ಟ್ರೀಯ ಪಕ್ಷಗಳ ವೈಫಲ್ಯಕ್ಕೆ ಹಿಡಿದಗನ್ನಡಿ ಎಂದು ಜೆಡಿಎಸ್ ಟೀಕಿಸಿದೆ. 

ಒಟ್ಟಿನಲ್ಲಿ, ದುಡ್ಡು ಲೂಟಿ ಹೊಡೆಯಲು, ಗಂಟು ಕಟ್ಟಲು ಎರಡೂ ರಾಷ್ಟೀಯ ಪಕ್ಷಗಳಿಗೆ ಬೆಂಗಳೂರು ಬೇಕೇ ಬೇಕು. ಆದರೆ, ಮೂಲಸೌಕರ್ಯ ಸುಧಾರಣೆ ಮಾತ್ರ ಕನಸಿನ ಮಾತು. ಜನರು ಎಚ್ಚೆತ್ತುಕೊಂಡು ಮತ ಚಲಾಯಿಸುವ ಸಮಯ ಬಂದಿದೆ ಎಂದಿದೆ. 

ನಾಲ್ಕು ವರ್ಷಗಳಿಂದ ಅಧಿಕಾರದಲ್ಲಿರುವ  ರಾಜ್ಯ ಬಿಜೆಪಿ ಸರ್ಕಾರ, ಹಿಂದೆ 5 ವರ್ಷಗಳ ಪೂರ್ಣಾವಧಿ ಅಧಿಕಾರ ನಡೆಸಿದ ಕಾಂಗ್ರೆಸ್ ಪಕ್ಷಗಳು ರಾಜಧಾನಿಯ ಮೂಲ ಸೌಕರ್ಯ ಅಭಿವೃದ್ಧಿಗೆ ಸಾವಿರಾರು ಕೋಟಿ ಖರ್ಚು ಮಾಡಿ ಸಾಧಿಸಿದ್ದೇನು? ಎಂದು ಪ್ರಶ್ನಿಸಿದ್ದು, ಬೆಂಗಳೂರಿಗೆ ನೀಡಿದ ಅನುದಾನದ ಹೆಸರಲ್ಲಿ ಎರಡೂ ಪಕ್ಷಗಳು ಲೂಟಿ ಹೊಡೆದ ಪರಿಣಾಮ ಈ ಸ್ಥಿತಿ ಎದುರಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT