ದೊಡ್ಡ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುತ್ತಿರುವ ಭಾಸ್ಕರ್ ರಾವ್. 
ರಾಜ್ಯ

ಚಾಮರಾಜಪೇಟೆ ಕ್ಷೇತ್ರದಿಂದ ಸ್ಪರ್ಧೆ: ದೊಡ್ಡ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್

ಮುಂಬರುವ ವಿಧಾನಸಭೆ ಚುನಾವಣೆಗೆ ಆಡಳಿತರೂಢ ಬಿಜೆಪಿ ಪಕ್ಷ 189 ಮಂದಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆ ಮಾಡಿದ್ದು, ಬೆಂಗಳೂರು ನಗರದ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಐಪಿಎಸ್ ಅಧಿಕಾರಿ ಭಾಸ್ಕರ್ ಹೆಸರನ್ನು ಘೋಷಿಸಿದೆ.

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಗೆ ಆಡಳಿತರೂಢ ಬಿಜೆಪಿ ಪಕ್ಷ 189 ಮಂದಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಮಂಗಳವಾರ ರಾತ್ರಿ ಬಿಡುಗಡೆ ಮಾಡಿದ್ದು, ಬೆಂಗಳೂರು ನಗರದ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಐಪಿಎಸ್ ಅಧಿಕಾರಿ ಭಾಸ್ಕರ್ ಹೆಸರನ್ನು ಘೋಷಿಸಿದೆ.

ಟಿಕೆಟ್ ಘೋಷಣೆಯಾದ ಹಿನ್ನೆಲೆಯಲ್ಲಿ ಭಾಸ್ಕರ್ ರಾವ್ ಅವರು ಇಂದು ಬಸವನಗುಡಿಯಲ್ಲಿರುವ ದೊಡ್ಡ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಭಾಸ್ಕರ್ ರಾವ್ ಅವರು, ಜನರ ಬದುಕಿನಲ್ಲಿ ಬದಲಾವಣೆ ತರುವ ಅಗತ್ಯವಿದೆ. ನಗರ ಕೇಂದ್ರಗಳಲ್ಲಿ ಮತದಾನ ಪ್ರಮಾಣ ಕಡಿಮೆ ಇರುವುದರಿಂದ ಮನೆ ಮನೆಗೆ ತೆರಳಿ ಮತದಾನ ಮಾಡುವಂತೆ ಮನವಿ ಮಾಡಲಾಗುತ್ತಿದೆ. ನಾನು ಪೊಲೀಸ್ ಕಮಿಷನರ್ ಆಗಿದ್ದಾಗ, ಸಂವಿಧಾನದ ಪ್ರಕಾರ ನಾನು ನನ್ನ ಬಲದೊಂದಿಗೆ ಜನರನ್ನು ರಕ್ಷಣೆ ಮಾಡಿದ್ದೆ ಎಂದು ಹೇಳಿದರು.

ಇತ್ತೀಚೆಗಷ್ಟೇ ಆಮ್ ಆದ್ಮಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಭಾಸ್ಕರ್ ರಾವ್ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ